AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sabarimala Makara Jyothi: ಅಯ್ಯಪ್ಪಸ್ವಾಮಿ ಸನ್ನಿಧಿ ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ

ದೀಪಾರಾಧನೆಯ ನಂತರ 6:30ಕ್ಕೆ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಸಾವಿರಾರು ಮಂದಿ ಕಾಯುತ್ತಿರುವಾಗಲೇ ಪೊನ್ನಂಬಲಮೇಡದಲ್ಲಿ ಮಕರಜ್ಯೋತಿ ಬೆಳಗಿತು. ಭಕ್ತರು ಮಕರಜ್ಯೋತಿಯನ್ನು ಮೂರು ಬಾರಿ ನೋಡಿದರು. ಎಲ್ಲೆಡೆ ಸ್ವಾಮಿಯೇ ಶರಣಂ ಅಯ್ಯಪ್ಪ ಎಂಬ ಘೋಷಣೆ ಮೊಳಗಿತು

Sabarimala Makara Jyothi: ಅಯ್ಯಪ್ಪಸ್ವಾಮಿ ಸನ್ನಿಧಿ ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ
ಮಕರ ಜ್ಯೋತಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 15, 2024 | 7:23 PM

Share

ಶಬರಿಮಲೆ ಜನವರಿ 15 : ಶಬರಿಮಲೆಯಲ್ಲಿ (Sabarimala) ಸನ್ನಿಧಾನಂ ಮತ್ತು ಇತರ ವೀಕ್ಷಣಾ ಸ್ಥಳಗಳು ಸೇರಿದಂತೆ ಸಾವಿರಾರು ಅಯ್ಯಪ್ಪ ಭಕ್ತರು ಮಕರಜ್ಯೋತಿಯನ್ನು (Makarajyothi) ವೀಕ್ಷಿಸಿದರು. ಮಕರ ಜ್ಯೋತಿ ಕಾಣುತ್ತಿದ್ದಂತೆ ಭಕ್ತರು ಸ್ವಾಮಿಯೇ ಶರಣಂ ಅಯ್ಯಪ್ಪ (Swamiye Saranamayappa)ಎಂದು ಕೂಗಿ ಜ್ಯೋತಿಯ ದರ್ಶನ ಪಡೆದರು.  ದೀಪಾರಾಧನೆಯ ನಂತರ 6:30ಕ್ಕೆ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಸಾವಿರಾರು ಮಂದಿ ಕಾಯುತ್ತಿರುವಾಗಲೇ ಪೊನ್ನಂಬಲಮೇಡದಲ್ಲಿ ಮಕರಜ್ಯೋತಿ ಬೆಳಗಿತು. ಭಕ್ತರು ಮಕರಜ್ಯೋತಿಯನ್ನು ಮೂರು ಬಾರಿ ನೋಡಿದರು.

ಸೋಮವಾರ ಸಂಜೆ 5 ಗಂಟೆಗೆ ಗರ್ಭಗುಡಿ ತೆರೆಯಲಾಯಿತು. ಪಂದಳಂನಿಂದ ಆರಂಭವಾದ ತಿರುವಾಭರಣ ಮೆರವಣಿಗೆಯನ್ನು ದೇವಸ್ವಂ ಅಧಿಕಾರಿಗಳು ಶರಂಕುತ್ತಿಯಲ್ಲಿ ಬರಮಾಡಿಕೊಂಡರು. ಅಯ್ಯಪ್ಪನಿಗೆ ತೊಡುವ ತಿರುವಾಭರಣವನ್ನು ದೇವಸ್ವಂ ಅಧಿಕಾರಿಗಳು ಸ್ವೀಕರಿಸಿದ ನಂತರ ಮೆರವಣಿಗೆಯು ಸನ್ನಿಧಾನಕ್ಕೆ ತೆರಳಿತು. 18ನೇ ಮೆಟ್ಟಿಲು ಹತ್ತಿ ಸೋಪಾನಂ ತಲುಪಿದ ಬಳಿಕ ತಂತ್ರಿ ಮತ್ತು ಮೇಲ್ಶಾಂತಿ (ಪುರೋಹಿತರು) ಸೇರಿ ತಿರುವಾಭರಣವನ್ನು ಸ್ವೀಕರಿಸಿ ಅಯ್ಯಪ್ಪ ಮೂರ್ತಿಗೆ ತೊಡಿಸುತ್ತಾರೆ. ನಂತರ ದೀಪಾರಾಧನೆ ನಡೆಯಿತು.

ಎಲ್ಲೆಡೆ ಅಯ್ಯಪ್ಪ ಭಕ್ತರ ದಂಡು ನೆರೆದಿತ್ತು. ವೀಕ್ಷಣೆಗಾಗಿ ವೀಕ್ಷಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎಂಟು ಡಿವೈಎಸ್ಪಿಗಳ ನೇತೃತ್ವದಲ್ಲಿ 1400 ಸಿಬ್ಬಂದಿಯನ್ನು ಪತ್ತನಂತಿಟ್ಟ ಜಿಲ್ಲೆಯ ವಿವಿಧೆಡೆ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಪೊಲೀಸರು ಡ್ರೋನ್ ಕಣ್ಗಾವಲು ಮೂಲಕ ಭದ್ರತೆಯನ್ನು ಖಾತ್ರಿಪಡಿಸುತ್ತಿದ್ದಾರೆ ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ತಿರುವಾಭರಣಂ ತೊಟ್ಟ ನಂತರ 18ನೇ ತಾರೀಖಿನವರೆಗೆ ಅಯ್ಯಪ್ಪನ ದರ್ಶನ ಪಡೆಯಬಹುದು. 19ರವರೆಗೆ ತುಪ್ಪದ ಅಭಿಷೇಕ ನಡೆಯಲಿದೆ.. 19ರಂದು ಮಣಿ ಮಂಟಪದಿಂದ ಶರಂಕುತ್ತಿವರೆಗೆ ಮೆರವಣಿಗೆ ನಡೆಯಲಿದೆ. 20ರಂದು ರಾತ್ರಿ 10 ಗಂಟೆಗೆ ಮಾಳಿಕಪ್ಪುರಂನಲ್ಲಿ ಗುರುತಿ (ಬಲಿವಾಡು) ನಡೆಯಲಿದೆ.

ಇದನ್ನೂ ಓದಿ: ಶಬರಿಮಲೆ ದೇಗುಲದಲ್ಲಿ ಸಂಚಲನ: ಇತಿಹಾಸದಲ್ಲಿ ಮೊದಲ ಬಾರಿಗೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮಂಗಳಮುಖಿ ನಿಶಾ

20ರ ರಾತ್ರಿಯವರೆಗೆ ದರ್ಶನವಿರುತ್ತದೆ. 21ರಂದು ಬೆಳಗ್ಗೆ ತಿರುವಾಭರಣ ಪಂದಳಂಗೆ  ವಾಪಸ್ ಹೋಗುತ್ತದೆ. ಬಳಿಕ ಅಯ್ಯಪ್ಪ ಮೂರ್ತಿಗೆ ಭಸ್ಮಾಭಿಷೇಕ ಮಾಡಿ ಯೋಗದಂ ಮತ್ತು ರುದ್ರಾಕ್ಷಮಾಲೆ ಧರಿಸಿ ಗರ್ಭಗುಡಿ ಮುಚ್ಚಲಾಗುತ್ತದೆ. ಈ ಹೊತ್ತಲ್ಲಿ ಭಗವಂತ ಯೋಗನಿದ್ರೆಗೆ ಜಾರುತ್ತಾನೆ ಎಂಬ ನಂಬಿಕೆ ಇಲ್ಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ
ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ