AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ದೇವಾಲಯ ಪ್ರವೇಶಕ್ಕೆ ಭಕ್ತರಿಗೆ ಅವಕಾಶ; ದಿನಾಂಕ, ಷರತ್ತುಗಳ ವಿವರ ಇಲ್ಲಿದೆ

ಕೊವಿಡ್-19 ಮಧ್ಯೆ ದೇವಸ್ಥಾನ ತೆರೆದಿರುವುದರಿಂದ ಭಕ್ತಾದಿಗಳು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದೇವಾಲಯಕ್ಕೆ ಭೇಟಿ ನೀಡಬೇಕು, ಕೊರೊನಾ ಹರಡುವಿಕೆ ತಡೆಗಟ್ಟಬೇಕು ಎಂದು ಹೇಳಲಾಗಿದೆ.

ಶಬರಿಮಲೆ ದೇವಾಲಯ ಪ್ರವೇಶಕ್ಕೆ ಭಕ್ತರಿಗೆ ಅವಕಾಶ; ದಿನಾಂಕ, ಷರತ್ತುಗಳ ವಿವರ ಇಲ್ಲಿದೆ
ಶಬರಿಮಲೆ ದೇವಾಲಯ
TV9 Web
| Updated By: ganapathi bhat|

Updated on: Jul 10, 2021 | 9:48 PM

Share

ತಿರುವನಂತಪುರ: ಕೊರೊನಾ ಎರಡನೇ ಅಲೆ ಬಳಿಕ ದೇಶದೆಲ್ಲೆಡೆ ಹಂತಹಂತವಾಗಿ ಅನ್​ಲಾಕ್ ಪ್ರಕ್ರಿಯೆ ಜಾರಿಯಾಗುತ್ತಿದೆ. ದೇವಾಲಯಗಳಲ್ಲಿ ಕೂಡ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಇದೀಗ ಶಬರಿಮಲೆ ದೇವಸ್ಥಾನ ತೆರೆಯುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಿಂಗಳ ಪೂಜೆಗೆ ಶಬರಿಮಲೆ ಅಯ್ಯಪ್ಪ ಸನ್ನಿಧಾನ ತೆರೆಯಲಿದೆ. ಜುಲೈ 17ರಿಂದ 21ನೇ ತಾರೀಖಿನವರೆಗೆ ದೇವಸ್ಥಾನ ತೆರೆದಿರಲಿದೆ ಎಂದು ಶನಿವಾರ ದೇವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಮಧ್ಯೆ ದೇವಸ್ಥಾನ ತೆರೆದಿರುವುದರಿಂದ ಭಕ್ತಾದಿಗಳು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದೇವಾಲಯಕ್ಕೆ ಭೇಟಿ ನೀಡಬೇಕು, ಕೊರೊನಾ ಹರಡುವಿಕೆ ತಡೆಗಟ್ಟಬೇಕು ಎಂದು ಹೇಳಲಾಗಿದೆ.

ಶಬರಿಮಲೆ ದೇವಾಲಯ ಭೇಟಿಗೆ ನಿಯಮಾವಳಿಗಳು:

  • ಕೊರೊನಾ ವಿರುದ್ಧ ಎರಡೂ ಡೋಸ್ ಲಸಿಕೆ ಪಡೆದುಕೊಂಡಿರುವ ಜನರು ಶಬರಿಮಲೆಗೆ ಭೇಟಿ ಕೊಡಬಹುದು. ಎರಡೂ ಡೋಸ್ ಲಸಿಕೆ ನೀಡಿಕೆ ಆಗಿರುವ ಬಗ್ಗೆ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಾಗಿದೆ.
  • ಆರ್​ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವ ಭಕ್ತರಿಗೂ ದೇವಾಲಯ ಭೇಟಿಗೆ ಅವಕಾಶವಿದೆ. ಆದರೆ, ಆರ್​ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ 48 ಗಂಟೆಗಳ ಮೊದಲು ಪಡೆದದ್ದಾಗಿರಬೇಕಿದೆ.
  • ಆನ್​ಲೈನ್ ಬುಕಿಂಗ್ ವಿಧಾನದ ಮೂಲಕ 5,000 ಭಕ್ತರು ದೇವಾಲಯ ಪ್ರವೇಶಿಸಬಹುದಾಗಿದೆ.

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ ಕಂಡಿಲ್ಲ. ಕೇರಳದಲ್ಲಿ ಈಗಲೂ ಪ್ರತಿನಿತ್ಯ 15,000ದಷ್ಟು ಕೊರೊನಾ ಪ್ರಕರಣಗಳು ಕಂಡುಬರುತ್ತಿದೆ. ಶನಿವಾರ (ಜುಲೈ 10) 14,087 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. 109 ಮಂದಿ ಕೊವಿಡ್ ಸೋಂಕಿನಿಂದ ನಿಧನರಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.

ಇದನ್ನೂ ಓದಿ: Kerala Assembly Elections 2021: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಬರಿಮಲೆಯ ಆಚಾರಗಳನ್ನು ಕಾಪಾಡಲು ಕಾನೂನು ತರುತ್ತೇವೆ: ರಾಜನಾಥ್ ಸಿಂಗ್

ಶಬರಿಮಲೆ ಅಫಿಡವಿಟ್​ನಲ್ಲಿ ಯಾವುದೇ ಬದಲಾವಣೆ ಇಲ್ಲ, ಎಲ್​ಡಿಎಫ್ ಸರ್ಕಾರದ ನಿಲುವು ಅಚಲ: ಸಿಪಿಐ ನಾಯಕ ಕಾನಂ ರಾಜೇಂದ್ರನ್

ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!