AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sabarimala Temple: ಜು.17ರಿಂದ 5 ದಿನ ಬಾಗಿಲು ತೆರೆಯಲಿರುವ ಶಬರಿಮಲೆ ದೇಗುಲ; ಕೊರೊನಾ ನೆಗೆಟಿವ್​ ರಿಪೋರ್ಟ್ ಕಡ್ಡಾಯ

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಗರಿಷ್ಠ 5000 ಭಕ್ತರಿಗೆ ಮಾತ್ರ ಅವಕಾಶವಿದೆ. ಇಲ್ಲಿಗೆ ಆಗಮಿಸುವವರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಸ್ವೀಕರಿಸಿ, ಅದರ ಪ್ರಮಾಣಪತ್ರ ಹೊಂದಿರಬೇಕು.

Sabarimala Temple: ಜು.17ರಿಂದ 5 ದಿನ ಬಾಗಿಲು ತೆರೆಯಲಿರುವ ಶಬರಿಮಲೆ ದೇಗುಲ; ಕೊರೊನಾ ನೆಗೆಟಿವ್​ ರಿಪೋರ್ಟ್ ಕಡ್ಡಾಯ
ಶಬರಿಮಲೆ ದೇಗುಲ
TV9 Web
| Edited By: |

Updated on: Jul 11, 2021 | 8:59 AM

Share

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸಪೂಜೆ ಸಲುವಾಗಿ ಜು.17ರಿಂದ 21ರವರೆಗೆ (5ದಿನಗಳು) ಬಾಗಿಲು ತೆರೆಯಲಿದೆ. ಕೇರಳದಲ್ಲೀಗ ಮಲಯಾಳಂ ತಿಂಗಳು ನಡೆಯುತ್ತಿದ್ದು, ಅದರ ನಿಮಿತ್ತ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೇರಳ ಸರ್ಕಾರ ಶನಿವಾರ ಮಾಹಿತಿ ನೀಡಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಗರಿಷ್ಠ 5000 ಭಕ್ತರಿಗೆ ಮಾತ್ರ ಅವಕಾಶವಿದೆ. ಇಲ್ಲಿಗೆ ಆಗಮಿಸುವವರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಸ್ವೀಕರಿಸಿ, ಅದರ ಪ್ರಮಾಣಪತ್ರ ಹೊಂದಿರಬೇಕು. 48 ಗಂಟೆಗಳ ಹಿಂದೆ ಪಡೆದ ಆರ್​ಟಿ-ಪಿಸಿಆರ್​ ನೆಗೆಟಿವ್​​ ರಿಪೋರ್ಟ್​ ತರಬೇಕು. ಈ ದಾಖಲೆಗಳನ್ನು ಹೊಂದಿದ್ದರೆ ಮಾತ್ರ ದೇವಾಲಯಕ್ಕೆ ಪ್ರವೇಶ ನೀಡಲಾಗುತ್ತದೆ ಎಂದೂ ಸರ್ಕಾರ ಸ್ಪಷ್ಟವಾಗಿ ಉಲ್ಲೇಖಿಸಿದೆ. ಹಾಗೇ, ದೇಗುಲಕ್ಕೆ ಆಗಮಿಸಲು ಯಾತ್ರಿಕರು ಮೊದಲು ತಮ್ಮ ಲಸಿಕೆ ಪ್ರಮಾಣ ಪತ್ರ ಮತ್ತು ಆರ್​ಟಿ-ಪಿಸಿಆರ್​ ನೆಗೆಟಿವ್​ ವರದಿಯನ್ನು ವರ್ಚ್ಯುವಲ್​ ಕ್ಯೂ ಮೂಲಕ ನೀಡಿ, ಆನ್​ಲೈನ್​ನಲ್ಲಿ ಬುಕಿಂಗ್​ ಮಾಡಬೇಕಾಗುತ್ತದೆ ಎಂದೂ ಹೇಳಲಾಗಿದೆ.

ಕೊರೊನಾ ಎರಡನೇ ಅಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ ಮೇ ತಿಂಗಳಿಂದ ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ನಿಷೇಧ ಹೇರಿತ್ತು. ಇದೀಗ 5 ದಿನಗಳ ಅವಕಾಶ ಸಿಕ್ಕರೂ ಕೇವಲ 5000 ಜನರಿಗೆ ಮಾತ್ರ ಅವಕಾಶ ಇರಲಿದೆ.

ಇದನ್ನೂ ಓದಿ: ರೈತರ ಹೊಲ ಗದ್ದೆ ಕಾಯಲೂ ಸೈ, ಕರಾವಳಿಯ ಬಂದರಿಗೂ ಜೈ; ಈ ಕತ್ತಾಳೆ ನಾರಿನ ಬಗ್ಗೆ ನಿಮಗೆಷ್ಟು ಗೊತ್ತು?

Sabarimala temple to be open for devotees From July 17

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​