AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ’ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ. ಶಬರಿಮಲೆ ದೇಗುಲ ಪ್ರವೇಶಕ್ಕೆ […]

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ' ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್
ಸಾಧು ಶ್ರೀನಾಥ್​
|

Updated on:Dec 06, 2019 | 12:28 PM

Share

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ.

ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ.

ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರನ್ನು ತಡೆಯೊಡ್ಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಇಂತಹ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ವಿವಾದದ ಕುರಿತು ಸುಪ್ರೀಂಕೋರ್ಟ್​ನ ದೊಡ್ಡ ಪೀಠ ವಿಚಾರಣೆ ನಡೆಯುತ್ತಿದೆ ಹೀಗಾಗಿ ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮುಂದಿನ ವಾರ ಹೋರಾಟಗಾರ್ತಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಲಿದೆ ಎಂದಿದ್ದಾರೆ

Published On - 7:37 am, Fri, 6 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More