AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲಟ್​ಗೆ ಸಿಎಂ ಸ್ಥಾನ ನೀಡದಿದ್ರೆ ಭಾರತ್‌ ಜೋಡೋ ಯಾತ್ರೆ ನಿಲ್ಲಿಸುತ್ತೇವೆ: ಗುರ್ಜಾರ್ ಮುಖಂಡನ ಎಚ್ಚರಿಕೆಗೆ ಸಚಿನ್‌ ತೀಕ್ಷ್ಣ ಪ್ರತಿಕ್ರಿಯೆ

ಸಚಿನ್‌ ಪೈಲಟ್​ಗೆ ಸಿಎಂ ಸ್ಥಾನ ನೀಡಬೇಕು, ಇಲ್ಲದಿದ್ರೆ ಭಾರತ್‌ ಜೋಡೋ ಯಾತ್ರೆ ನಿಲ್ಲಿಸುತ್ತೇವೆ ಎಂದು ಗುರ್ಜಾರ್ ಮುಖಂಡ ಎಚ್ಚರಿಕೊಟ್ಟಿದ್ದಾರೆ. ಇನ್ನು ಇದಕ್ಕೆ ಸಚಿನ್‌ ಪೈಲಟ್‌ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪೈಲಟ್​ಗೆ ಸಿಎಂ ಸ್ಥಾನ ನೀಡದಿದ್ರೆ ಭಾರತ್‌ ಜೋಡೋ ಯಾತ್ರೆ ನಿಲ್ಲಿಸುತ್ತೇವೆ: ಗುರ್ಜಾರ್ ಮುಖಂಡನ ಎಚ್ಚರಿಕೆಗೆ ಸಚಿನ್‌ ತೀಕ್ಷ್ಣ ಪ್ರತಿಕ್ರಿಯೆ
Sachin Pilot and Rahul Gandh
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 23, 2022 | 9:34 PM

Share

ಜೈಪುರ್: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಇದೇ ಡಿಸೆಂಬರ್ 3ರಂದು ರಾಜಸ್ಥಾನಕ್ಕೆ ಜಲಾವರ್‌ನಿಂದ ಪ್ರವೇಶಿಸಲಿದೆ. ಜಲಾವರ್, ಕೋಟಾ, ಬುಂಡಿ, ಸವೈಮಾಧೋಪುರ್, ದೌಸಾ ಮತ್ತು ಅಲ್ವಾರ್‌ನ ಭಾಗಗಳಲ್ಲಿ ಸುಮಾರು 20 ದಿನ ಯಾತ್ರೆ ನಡೆಯಲಿದೆ. ಆದ್ರೆ, ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸಲು ಬಿಡುವುದಿಲ್ಲ ಎಂದು ಗುರ್ಜಾರ್ ಸಮುದಾಯದ ನಾಯಕ ಎಚ್ಚರಿಕೆ ಕೊಟ್ಟಿದ್ದಾರೆ.

ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬೇಡಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಒಪ್ಪದಿದ್ದಲ್ಲಿ ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸಲು ಬಿಡುವುದಿಲ್ಲ ಎಂದು ಗುರ್ಜಾರ್ ಸಮುದಾಯದ ಪ್ರಭಾವಿ ಮುಖಂಡ ವಿಜಯ್ ಸಿಂಗ್ ಬೈಂಸ್ಲಾ ಎಚ್ಚರಿಸಿದ್ದಾರೆ.

ಇಂದು(ನ.23) ಗುರ್ಜರ್‌ ಸಮುದಾಯದ ಸದಸ್ಯರೊಂದಿಗಿನ ಸಭೆಯ ಬಳಿಕ ಬಿಡುಗಡೆ ಮಾಡಿರುವ ವಿಡಿಯೋ ಹೇಳಿಕೆಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ರಾಜಸ್ಥಾನಕ್ಕೆ ಗುರ್ಜರ್ ಮುಖ್ಯಮಂತ್ರಿಯ ಜೊತೆ ಅಥವಾ ಈ ಸಮಸ್ಯೆಗೆ ಉತ್ತರದೊಂದಿಗೆ ಭೇಟಿ ನೀಡಬೇಕು. 2018ರಲ್ಲಿ ಗುರ್ಜರ್ ಸಮುದಾಯದವರು ಮುಖ್ಯಮಂತ್ರಿ ಆಗ್ತಾರೆ ಎಂಬ ಭರವಸೆಯೊಂದಿಗೆ ಕಾಂಗ್ರೆಸ್‌ಗೆ ನಮ್ಮ ಸಮುದಾಯ ಮತ ಹಾಕಿದೆ. ನಾವು ಶಾಸಕರಿಗೆ ಮತ ಹಾಕಿಲ್ಲ. ಗುರ್ಜರ್‌ ಸಮುದಾಯದ ಸಿಎಂಗೆ ಮತ ಹಾಕಿದ್ದೇವೆ ಎಂದರು.

ಇನ್ನು ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಯ ಬಳಿಕ ವಿಜಯ್ ಸಿಂಗ್ ಬೈಂಸ್ಲಾ ಕೊಟ್ಟ ಎಚ್ಚರಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿನ್ ಪೈಲೆಟ್, ಬಿಜೆಪಿ ಎಷ್ಟೇ ಪ್ರಯತ್ನ ಪಟ್ಟರೂ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಲಿದೆ. ಬಿಜೆಪಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಅವರು, ಬಿಜೆಪಿ ಗಲಭೆ ಸೃಷ್ಟಿಸಲು ಪ್ರಯತ್ನಿಸಬಹುದು. ನಾವೆಲ್ಲರೂ ಒಗ್ಗಟ್ಟಿನಿಂದ ಯಾತ್ರೆಯನ್ನು ಸ್ವಾಗತಿಸಲಿದ್ದು, ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗುರ್ಜರ್ ಸಮುದಾಯವು ರಾಜಸ್ಥಾನದ ಒಟ್ಟು ಜನಸಂಖ್ಯೆಯ ಶೇ.5 ರಿಂದ ಶೇ.6ರಷ್ಟು ಪ್ರಮಾಣವನ್ನು ಹೊಂದಿದೆ. ಪ್ರಮುಖವಾಗಿ ಪೂರ್ವ ರಾಜಸ್ಥಾನದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗುರ್ಜರ್‌ ಸಮುದಾಯ ಪ್ರಭಾವಶಾಲಿಯಾಗಿದೆ. ಗುರ್ಜರ್‌ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ಭಾರತ್‌ ಜೋಡೋ ಯಾತ್ರೆಯು ಹಾದು ಹೋಗಲಿದೆ.

ಒಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ರಾಜಸ್ಥಾನ ಕಾಂಗ್ರೆಸ್​ನಲ್ಲಿ ಉಂಟಾಗಿದ್ದ​​ ಬಿಕ್ಕಟ್ಟು ಇನ್ನೂ ಶಮನವಾದಂತೆ ಕಾಣುತ್ತಿಲ್ಲ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಧ್ಯೆ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡದಿದ್ದಲ್ಲಿ ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸಲು ಬಿಡುವುದಿಲ್ಲ ಎಂದು ಗುರ್ಜಾರ್ ಸಮುದಾಯದ ನಾಯಕ ಎಚ್ಚರಿಕೆ ನೀಡಿದ್ದು, ಕಾಂಗ್ರೆಸ್​ನಲ್ಲಿ ಸಂಚಲನ ಮೂಡಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ