Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಹೆಸರು, ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಸಚಿನ್ ವಾಜೆ ಪಂಚತಾರಾ ಹೊಟೇಲ್​ನಲ್ಲಿ ಉಳಿದಿದ್ದರು; ಎನ್​ಐಎ ಆರೋಪ

ಸಚಿನ್ ವಾಜೆ ನೆಲೆಸಿದ್ದರು ಎಂದು ಹೇಳಲಾದ ಹೊಟೇಲ್​ನಲ್ಲಿ ಪರಿಶೀಲನೆ ನಡೆಸಿದ್ದೇವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ. ಆದರೆ, ಯಾವ ದಾಖಲೆಗಳು ಅಲ್ಲಿ ದೊರೆತಿವೆ ಎಂಬುದನ್ನು ಖಚಿತಪಡಿಸಿಲ್ಲ. ಇವೆಲ್ಲವುಗಳ ನಡುವೆ ರಾಷ್ಟ್ರೀಯ ತನಿಖಾ ಸಂಸ್ಥೆ ಮನ್​ಸುಖ್ ಹಿರೇನ್ ಮನೆಗೂ ಭೇಟಿ ನೀಡಿ ಮನ್​ಸುಖ್ ಹಿರೇನ್ ಪತ್ನಿಯ ಬಳಿ ಪ್ರಕರಣದ ಕುರಿತು ಹೇಳಿಕೆ ದಾಖಲಿಸಿಕೊಂಡಿದೆ.

ಸುಳ್ಳು ಹೆಸರು, ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಸಚಿನ್ ವಾಜೆ ಪಂಚತಾರಾ ಹೊಟೇಲ್​ನಲ್ಲಿ ಉಳಿದಿದ್ದರು; ಎನ್​ಐಎ ಆರೋಪ
ಸಚಿನ್ ವಾಜೆ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 23, 2021 | 3:06 PM

ಮುಂಬೈ: ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಮತ್ತು ಮನ್​ಸುಖ್ ಹಿರೇನ್ ಸಾವಿನ ಪ್ರಕರಣಗಳಲ್ಲಿ ಅಮಾನತಾಗಿರುವ ಸಚಿನ್ ವಾಜೆ ಹಿಂದೆ ಬಿದ್ದಿರುವ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಸ್ಫೋಟಕ ಮಾಹಿತಿಗಳನ್ನು ತೆರೆದಿಡುತ್ತಿದೆ. ಸಚಿನ್ ವಾಜೆ ಫೆ 16ರಿಂದ 20ರವರೆಗೆ ನೆಲೆಸಿದ್ದರು ಎನ್ನಲಾದ ಮುಂಬೈನ ನಾರಿಮನ್ ಪಾಯಿಂಟ್ ಬಳಿಯ ಪಂಚತಾರಾ ಹೊಟೇಲ್​ ರೂಮ್​ನಲ್ಲಿ ಎನ್​ಐಎ ತನಿಖೆ ನಡೆಸಿದೆ. ಸಚಿನ್ ವಾಜೆ ನಕಲಿ ಆಧಾರ್ ಕಾರ್ಡ್​, ಫೋಟೊ ಮತ್ತು ಸುಳ್ಳು ಹೆಸರು ಬಳಸಿ ಹೊಟೇಲ್ ಕೊಠಡಿಯನ್ನು ಕಾದಿರಿಸಿದ್ದರು ಎಂದು ಎನ್ಐಎ ಆರೋಪಿಸಿದೆ. ಅಲ್ಲದೇ ಹೊಟೇಲ್​ನ ಸಿಸಿಟಿವಿಯಯಲ್ಲಿ ದಾಖಲಾದ ವಿಡಿಯೋವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. (Sachin Vaze stayed 5 star hotel using forget Aadhar Card and fake name)

ಸಚಿನ್ ವಾಜೆ ನೆಲೆಸಿದ್ದರು ಎಂದು ಹೇಳಲಾದ ಹೊಟೇಲ್​ನಲ್ಲಿ ಪರಿಶೀಲನೆ ನಡೆಸಿದ್ದೇವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ. ಆದರೆ, ಯಾವ ದಾಖಲೆಗಳು ಅಲ್ಲಿ ದೊರೆತಿವೆ ಎಂಬುದನ್ನು ಖಚಿತಪಡಿಸಿಲ್ಲ. ಇವೆಲ್ಲವುಗಳ ನಡುವೆ ರಾಷ್ಟ್ರೀಯ ತನಿಖಾ ಸಂಸ್ಥೆ ಮನ್​ಸುಖ್ ಹಿರೇನ್ ಮನೆಗೂ ಭೇಟಿ ನೀಡಿ ಮನ್​ಸುಖ್ ಹಿರೇನ್ ಪತ್ನಿಯ ಬಳಿ ಪ್ರಕರಣದ ಕುರಿತು ಹೇಳಿಕೆ ದಾಖಲಿಸಿಕೊಂಡಿದೆ.

ಪ್ರಕರಣದ ಹಿನ್ನೆಲೆ ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಕಾರಿನಲ್ಲಿ ಸ್ಫೋಟಕಗಳು ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದ ಮನ್​ಸುಖ್ ಹಿರೇನ್ ಪ್ರಕರಣ ಮುಕ್ತಾಯವಾಗಿದೆ ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ATS) ಪ್ರತಿಪಾದಿಸಿದೆ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲು ಕೇಂದ್ರ ಸರ್ಕಾರ ಆದೇಶಿಸಿದ ಮರುದಿನ ಎಟಿಎಸ್​ ಡಿಐಜಿ ಶಿವ್​ದೀಪ್ ಲಂಡೆ, ಮನ್​ಸುಖ್ ಹಿರೇನ್ ಪ್ರಕರಣದ ತನಿಖೆಯಲ್ಲಿ ಹಗಲಿರುಳು ಸಹಕರಿಸಿದ ಎಲ್ಲ ಅಧಿಕಾರಿಗಳಿಗೆ ನನ್ನ ವಂದನೆಗಳು. ಈ ನಿಗೂಢ ಪ್ರಕರಣವನ್ನು ನಾವು ಈಗಾಗಲೇ ಬಗೆಹರಿಸಿದ್ದೇವೆ. ಇದು ನನ್ನ ವೃತ್ತಿ ಜೀವನದಲ್ಲೇ ಒಂದು ಪ್ರಮುಖ ಪ್ರಕರಣ ಎಂದು ಶಿವ್​ದೀಪ್ ಲಂಡೆ ತಿಳಿಸಿದ್ದಾರೆ. (Mansukh Hiren death case solved claimed Maha ATS)

ಈಗಾಗಲೇ ಅಮಾನತು ಆಗಿರುವ ಮುಂಬೈ ಪೊಲೀಸ್ ಅಧಿಕಾರಿ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಉಳಿದ ಇಬ್ಬರು ಆರೋಪಿಗಳಾದ ಪೊಲೀಸ್ ಅಧಿಕಾರಿ ವಿನಾಯಕ್ ಶಿಂಧೆ ಮತ್ತು ಬುಕ್ಕಿ ನರೇಶ್ ಗೌರ್ ಅವರುಗಳನ್ನು ಬಂಧಿಸಲಾಗಿದೆ. ಈ ಮೂವರೂ ಕೂಡಿಕೊಂಡು ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಇರಿಸಿದ ಪ್ರಕರಣದ ಹಿಂದಿದ್ದಾರೆ ಎಂದು ಎಟಿಎಸ್​ ತಿಳಿಸಿದೆ.

ಕೇವಲ ಸಸ್ಪೆಂಡ್ ಆಗಿರುವ ಸಚಿನ್ ವಾಜೆ ಮಾತ್ರ ಈ ಪ್ರಕರಣದ ಹಿಂದಿದ್ದಾರೆಯೇ?

ಆದರೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸಿದ ಮರುದಿನವೇ ಎಟಿಎಸ್ ಪ್ರಕರಣವನ್ನು ಬಗೆಹರಿಸುವುದಾಗಿ ಪ್ರತಿಪಾದಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೇವಲ ಸಸ್ಪೆಂಡ್ ಆಗಿರುವ ಸಚಿನ್ ವಾಜೆ ಮತ್ತು ಇನ್ನುಳಿದ ಇಬ್ಬರು ಮಾತ್ರ ಈ ಪ್ರಕರಣದ ಹಿಂದಿದ್ದಾರೆಯೇ? ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಕೇಳಿಬಂದಿರುವ 100 ಕೋಟಿ ಭೃಷ್ಟಾಚಾರ ಆರೋಪವನ್ನೇ ಮುನ್ನೆಲೆಗೆ ತಂದು ಸ್ಫೋಟಕ ಪ್ರಕರಣವನ್ನು ಹಿನ್ನೆಲೆಗೆ ತಳ್ಳುವ ಪ್ರಯತ್ನ ನಡೆದಿದೆಯೇ ಎಂಬ ಅನುಮಾನಗಳು ಬಲಗೊಳ್ಳುತ್ತಿವೆ.

ಮಾರ್ಚ್ 5ರಂದು ಮನ್​ಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು. ಆದರೆ ಮೃತದೇಹ ಪತ್ತೆಯಾದ ಕೆಲ ಗಂಟೆಗಳ ನಂತರ  ಮನ್​ಸುಖ್​ ಹಿರೇನ್ ಕಾರಿನ ನಿಜವಾದ ಮಾಲೀಕರಲ್ಲ ಎಂಬ ಮಾತು ಕೇಳಿಬಂದಿತ್ತು.  ಕಾರಿನ ನೈಜ ಮಾಲೀಕ ಸ್ಯಾಮ್ ಮ್ಯೂಟನ್, ಮನ್​ಸುಖ್ ಹಿರೇನ್ ಅವರಿಗೆ ಕಾರಿನ  ನಿರ್ವಹಣೆಗಾಗಿ ಕಾರನ್ನು ನೀಡಿದ್ದರು. ಆದರೆ ಸ್ಯಾಮ್ ಮ್ಯೂಟನ್, ನೀಡಬೇಕಿದ್ದ ಹಣವನ್ನು ಪಾವತಿಸದಿದ್ದ ಕಾರಣ ಮನ್​ಸುಖ್ ಹಿರೇನ್ ಅವರೇ ಕಾರನ್ನು ಇಟ್ಟುಕೊಂಡಿದ್ದರು ಎಂದೂ ಸಹ ವರದಿಯಾಗಿತ್ತು.

ಆದರೆ, ಮನ್​ಸುಖ್ ಹಿರೇನ್ ಪತ್ನಿ ನಾಲ್ಕು ತಿಂಗಳ ಅವಧಿಗೆ ಅಂದರೆ ಫೆಬ್ರವರಿ 5ರ ವರೆಗೆ ಕಾರ​ನ್ನು ಪೊಲೀಸರಿಗೆ ನೀಡಿರುವುದಾಗಿ ತಿಳಿಸಿದ್ದರು. ಕೆಲ ದಿನಗಳ ಬಳಿಕ ಕಾರ್ ಕಳವಾಗಿತ್ತು. ಮನ್​ಸುಖ್ ಹಿರೇನ್ ಮೃತಪಟ್ಟಿರುವ ಪ್ರಕರಣದಲ್ಲಿ ಸಚಿನ್ ವಾಜ್ ಪಾತ್ರ ಇದೆ ಎಂದು ಪತ್ನಿ ಆರೋಪಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಭಯೋತ್ಪಾದಕ ವಿರೋಧಿ ದಳ (ATS) ತನಿಖೆಯಲ್ಲಿ ತೊಡಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳ ಜತೆ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿಯವರಿಗೆ ಬೆದರಿಕೆಯೊಡ್ಡಿರುವ ಪತ್ರವೊಂದು ಲಭಿಸಿತ್ತು. ಈ ಕಾರಿನಲ್ಲಿ ಸ್ಫೋಟಕವನ್ನು ಅಸೆಂಬಲ್ ಮಾಡಿಲ್ಲ, ಮುಂದಿನ ಬಾರಿ ಇದೇ ರೀತಿಯಲ್ಲಿರುವುದಿಲ್ಲ ಎಂದು ಪತ್ರದಲ್ಲಿ ಬರೆದಿತ್ತು. ಈ ಪತ್ರ ಹಿಂದಿಯಿಂದ ಇಂಗ್ಲಿಷಿಗೆ ತರ್ಜುಮೆ ಮಾಡಿ ಬರೆದದ್ದಾಗಿದ್ದು, ಹಲವಾರು ಅಕ್ಷರ ದೋಷಗಳಿದ್ದವು. ಪತ್ರವನ್ನು ನೋಡಿದರೆ ಪತ್ರ ಬರೆದ ವ್ಯಕ್ತಿಗೆ ಸರಿಯಾಗಿ ಬರೆಯಲು ಬರುವುದಿಲ್ಲ ಅಥವಾ ಬರೆಯಲು ಗೊತ್ತಿಲ್ಲ ಎಂಬಂತೆ ನಟಿಸಿದ್ದಾಗಿರಬಹುದು ಎಂದು ಮುಂಬೈ ಪೊಲೀಸರು ಹೇಳಿರುವುದಾಗಿ ವರದಿಯಾಗಿತ್ತು.

ಗಾಂದೇವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಾಹನ ಪತ್ತೆಯಾಗಿತ್ತು. ಪೊಲೀಸರಿಗೆ ಮಾಹಿತಿ ಲಭಿಸಿದ ಕೂಡಲೇ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ಮತ್ತು ಇತರ ಪೊಲೀಸ್ ತಂಡಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದವು. ಕಾರನ್ನು ತಪಾಸಣೆಗೊಳಪಡಿಸಿದಾಗ ಅದರೊಳಗೆ ಜಿಲೆಟಿನ್ ಪತ್ತೆಯಾಗಿದೆ. ಅದು ಬಿಡಿ ಬಿಡಿಯಾಗಿಯೇ ಇದ್ದು ಸ್ಫೋಟಕವನ್ನು ಸಿದ್ಧಪಡಿಸಿರಲಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮುಂಬೈ ಪೊಲೀಸ್ ವಕ್ತಾರ, ಉಪ ಪೊಲೀಸ್ ಆಯುಕ್ತ ಚೈತನ್ಯ ಎಸ್ ಹೇಳಿದ್ದರು.

ಇದನ್ನೂ ಓದಿ: ವ್ಯಕ್ತಿ ವ್ಯಕ್ತಿತ್ವ: ಹಿಂದೂ ಮುಸ್ಲಿಂ ಸಾಮರಸ್ಯ, ಸೈಬರ್ ಕ್ರೈಂ ಪತ್ತೆಹಚ್ಚುವಲ್ಲಿ ಏಷ್ಯಾಕ್ಕೇ ಪ್ರಥಮ; ಸಚಿನ್ ವಾಜೆಯ ವೈವಿಧ್ಯಮಯ ವ್ಯಕ್ತಿತ್ವ

  ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 3:06 pm, Tue, 23 March 21

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ