AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವನ ಭಕ್ತರಿಗೆ ಶುಭ ಸುದ್ದಿ ನೀಡಿದ ಸದ್ಗುರು; ಶೀಘ್ರದಲ್ಲೇ ತೆರೆಕಾಣಲಿದೆ ‘ಶಿವ -ದಿ ಆದಿಯೋಗಿ’ ಅನಿಮೇಷನ್ ಸಿನಿಮಾ

ಶ್ರಾವಣ ಮಾಸದಲ್ಲಿ ಇಶಾ ಫೌಂಡೇಶನ್ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ಶಿವ ಭಕ್ತರಿಗೆ ಒಳ್ಳೆಯ ಸುದ್ದಿಯನ್ನು ನೀಡಿದ್ದಾರೆ. ಯೋಗದ ಸ್ಥಾಪಕ ಎಂದು ಎಲ್ಲರೂ ಪರಿಗಣಿಸುವ ಆದಿಯೋಗಿಯ ಇತಿಹಾಸವನ್ನು ಶೀಘ್ರದಲ್ಲೇ ಅನಿಮೇಟೆಡ್ ಚಲನಚಿತ್ರವಾಗಿ ಪ್ರೇಕ್ಷಕರಿಗೆ ತರಲಾಗುವುದು ಎಂದು ಅವರು ಘೋಷಿಸಿದ್ದಾರೆ. ಈ ಸಿನಿಮಾದ ನಿರ್ಮಾಣಕ್ಕಾಗಿ ಈಗಾಗಲೇ ಗ್ರಾಫಿಕ್ ಇಂಡಿಯಾ ಸ್ಟುಡಿಯೋಸ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಅವರು ಹೇಳಿದ್ದಾರೆ.

ಶಿವನ ಭಕ್ತರಿಗೆ ಶುಭ ಸುದ್ದಿ ನೀಡಿದ ಸದ್ಗುರು; ಶೀಘ್ರದಲ್ಲೇ ತೆರೆಕಾಣಲಿದೆ 'ಶಿವ -ದಿ ಆದಿಯೋಗಿ' ಅನಿಮೇಷನ್ ಸಿನಿಮಾ
Sadhguru And ShivaImage Credit source: TV9
ಸುಷ್ಮಾ ಚಕ್ರೆ
|

Updated on: Aug 24, 2026 | 7:11 PM

Share

ಚೆನ್ನೈ, ಆಗಸ್ಟ್ 24: ಶ್ರಾವಣ ಮಾಸದ ಪವಿತ್ರ ಮಾಸದಲ್ಲಿ ಇಶಾ ಫೌಂಡೇಶನ್‌ನ (Isha Foundation) ಸಂಸ್ಥಾಪಕರಾದ ಸದ್ಗುರು (Sadhguru) ಜಗ್ಗಿ ವಾಸುದೇವ್ ಯೋಗ ಸಂಪ್ರದಾಯದಲ್ಲಿ ಮೊದಲ ಯೋಗಿ ಮತ್ತು ಯೋಗದ ಸ್ಥಾಪಕ ಎಂದು ಪರಿಗಣಿಸಲಾದ ಆದಿಯೋಗಿ ಶಿವನ ಇತಿಹಾಸವನ್ನು ಹೊಸ ಅನಿಮೇಟೆಡ್ ಚಲನಚಿತ್ರದ ಮೂಲಕ ಪ್ರೇಕ್ಷಕರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಅನಿಮೇಟೆಡ್ ಸಿನಿಮಾಗೆ ‘ಶಿವ – ದಿ ಆದಿಯೋಗಿ’ (Shiva – The Adiyogi)ಎಂಬ ಹೆಸರನ್ನು ಇಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸಿನಿಮಾ 2027ರಲ್ಲಿ ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಿನಿಮಾದ ಬಗ್ಗೆ ಮೊದಲ ಹೆಜ್ಜೆ ಇಡಲಾಗಿದೆ ಎಂದು ಅವರು ಹೇಳಿದರು. ‘ದಿ ಲೆಜೆಂಡ್ ಆಫ್ ಹನುಮಾನ್’ ಸರಣಿಯಿಂದ ಅಪಾರ ಜನಪ್ರಿಯತೆ ಗಳಿಸಿರುವ ಹೆಸರಾಂತ ಸ್ಟುಡಿಯೋ ಗ್ರಾಫಿಕ್ ಇಂಡಿಯಾದ ಸಹಯೋಗದೊಂದಿಗೆ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಗ್ರಾಫಿಕ್ ಇಂಡಿಯಾದ ಸಹ-ಸಂಸ್ಥಾಪಕ ಶರದ್ ದೇವರಾಜನ್ ಈ ಚಿತ್ರದ ಸಹ-ಬರಹ ಮತ್ತು ನಿರ್ಮಾಣವನ್ನು ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತದೆ. ಅವರು ಈ ಹಿಂದೆ ‘ಬಾಹುಬಲಿ-ದಿ ಲಾಸ್ಟ್ ಲೆಜೆಂಡ್ಸ್’ ಮತ್ತು ‘ಬಾಹುಬಲಿ-ಕ್ರೌನ್ ಆಫ್ ಬ್ಲಡ್’​ನಂತಹ ಅನಿಮೇಟೆಡ್ ಚಲನಚಿತ್ರಗಳು ಹಾಗೂ ಮಾರ್ವೆಲ್‌ನ ‘ಇಂಡಿಯನ್ ಸ್ಪೈಡರ್ ಮ್ಯಾನ್’ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಸದ್ಗುರು ‘ಕಾವೇರಿ ಕೂಗು’ ಆಂದೋಲನದ ಭಾಗವಾಗಿ ಬೃಹತ್ ಸಮಾವೇಶ, 6 ಸಾವಿರಕ್ಕೂ ಹೆಚ್ಚು ರೈತರ ದಂಡು

ಯೋಗ ಹೇಗೆ ಹುಟ್ಟಿಕೊಂಡಿತು? ಆದಿಯೋಗಿಯಾಗಿ ಶಿವನು ಮಾನವೀಯತೆಗೆ ನೀಡಿದ ಆಧ್ಯಾತ್ಮಿಕ ಮಾರ್ಗ ಯಾವುದು? ಎಂಬಿತ್ಯಾದಿ ವಿವರಗಳ ಜೊತೆ ಸಿನಿಮಾವನ್ನು ಭಾವನಾತ್ಮಕ ದೃಶ್ಯ ರೂಪದಲ್ಲಿ ಪ್ರಸ್ತುತಪಡಿಸಲಾಗುವುದು. ಪ್ರಸ್ತುತ, ಈ ಸಿನಿಮಾದ ಪೂರ್ವ-ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ಸಾಧ್ಯವಾದಷ್ಟು ಬೇಗ ಇದನ್ನು ವಿಶ್ವಾದ್ಯಂತ ಬಿಡುಗಡೆ ಮಾಡುವ ಗುರಿಯನ್ನು ಹೊಂದಿವೆ.

ಇದನ್ನೂ ಓದಿ: ಇಶಾ ಫೌಂಡೇಷನ್, ಸದ್ಗುರು ಕುರಿತ ವಿವಾದಾತ್ಮಕ ವಿಷಯ ಡಿಲೀಟ್ ಮಾಡಿ; ನಕ್ಕೀರನ್ ಮ್ಯಾಗಜಿನ್​​ಗೆ ಕೋರ್ಟ್ ಆದೇಶ

ಈ ಸಿನಿಮಾದಲ್ಲಿ ಶಿವನನ್ನು ಸಾಂಪ್ರದಾಯಿಕ ಪೌರಾಣಿಕ ಚೌಕಟ್ಟಿನಲ್ಲಿ ತೋರಿಸುವ ಬದಲಿಗೆ, ಯೋಗ ಪರಂಪರೆಯ ಕೋನದಲ್ಲಿ ಪ್ರಸ್ತುತಪಡಿಸಲಾಗುತ್ತದೆ. ಯೋಗ ಸಂಸ್ಕೃತಿಯಲ್ಲಿ ಶಿವ ಕೇವಲ ದೇವರಲ್ಲ. ಶಿವ ಆದಿಯೋಗಿ, ಆದಿಗುರು. ಪ್ರಕೃತಿಯ ನಿಯಮಗಳಿಗೆ ಒಳಪಟ್ಟಿರುವುದು ಶಾಶ್ವತವಲ್ಲ. ಆದರೆ, ಅಭ್ಯಾಸದ ಮೂಲಕ ಆ ಮಿತಿಗಳನ್ನು ಮೀರಿ ಮುಕ್ತಿಯನ್ನು ಪಡೆಯಬಹುದು ಎಂದು ಮಾನವಕುಲಕ್ಕೆ ತಿಳಿಸಿದ ಮೊದಲ ವ್ಯಕ್ತಿ ಶಿವ. ಭಾರತದ ಆಧ್ಯಾತ್ಮಿಕ ವೈಭವ ಮತ್ತು ಯೋಗದ ಪರಂಪರೆಯನ್ನು ಮುಂಬರುವ ಪೀಳಿಗೆಗೆ ಮತ್ತು ಅಂತಾರಾಷ್ಟ್ರೀಯ ಪ್ರೇಕ್ಷಕರಿಗೆ ಹೊಸ ದೃಶ್ಯ ರೂಪದಲ್ಲಿ ತರುವುದು ಈ ಸಿನಿಮಾವನ್ನು ನಿರ್ಮಿಸುವ ಉದ್ದೇಶವಾಗಿದೆ ಎಂದು ಸದ್ಗುರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ