AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ, ಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ

ನಟ ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರ ವಿಚಾರಣೆಯಲ್ಲಿ ಹಲವು ಸಂಗತಿಗಳು ಬಹಿರಂಗವಾಗಿವೆ. ಈ ಇಬ್ಬರೂ ಆರೋಪಿಗಳು ಭುಜ್‌ನಲ್ಲಿ ಸಿಕ್ಕಿಬಿದ್ದಿದ್ದು, ಇದೀಗ ಈ ಪ್ರಕರಣದ ಆರೋಪಿಗಳ ವಿಚಾರಣೆಯ ಆಧಾರದ ಮೇಲೆ ಸೂರತ್‌ನಲ್ಲೂ ತನಿಖೆಯನ್ನು ಪ್ರಾರಂಭಿಸಲಾಗಿದೆ.ಇದರ ಆಧಾರದ ಮೇಲೆ ಮುಂಬೈ ಅಪರಾಧ ವಿಭಾಗದ ತಂಡ ಸೂರತ್ ನಗರದಲ್ಲಿ ತನಿಖೆ ಆರಂಭಿಸಿದೆ. ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೂರತ್ ನಗರಕ್ಕೆ ಆಗಮಿಸಿದ್ದಾರೆ.

ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ, ಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ
ದಯಾ ನಾಯಕ್
Follow us
ನಯನಾ ರಾಜೀವ್
|

Updated on: Apr 22, 2024 | 3:22 PM

ಬಾಲಿವುಡ್ ನಟ ಸಲ್ಮಾನ್ ಖಾನ್(Salman Khan) ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್(Daya Nayak) ಎಂಟ್ರಿ ಕೊಟ್ಟಿದ್ದಾರೆ. ಈ ಘಟನೆಗೆ ಬಳಸಲಾದ ಬಂದೂಕನ್ನು ಹುಡುಕಲು ಮುಂಬೈ ಅಪರಾಧ ವಿಭಾಗದ ತಂಡವು ಸೂರತ್ ತಲುಪಿದೆ. ಗುಜರಾತ್‌ನ ಕಚ್‌ನಲ್ಲಿ ಸಿಕ್ಕಿಬಿದ್ದ ಇಬ್ಬರು ಶೂಟರ್‌ಗಳು ತಾಪಿ ನದಿಯಲ್ಲಿ ಬಂದೂಕು ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಮನೆಗೆ ಫೈರಿಂಗ್ ಪ್ರಕರಣದಲ್ಲಿ ಇಬ್ಬರು ಶೂಟರ್‌ಗಳ ಜೊತೆಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಪೊಲೀಸರು ಆರೋಪಿಯನ್ನಾಗಿ ಮಾಡಿದ್ದಾರೆ. ಮುಂಬೈ ಕ್ರೈಂ ಬ್ರಾಂಚ್ ಸಂಪೂರ್ಣ ಸಿದ್ಧತೆಯೊಂದಿಗೆ ಆಗಮಿಸಿದೆ. ಪಿ ನದಿಯಲ್ಲಿ ಬಂದೂಕಿನ ಹುಡುಕಾಟಕ್ಕೆ ಸ್ವಲ್ಪ ಸಮಯ ಹಿಡಿಯಬಹುದು ಎನ್ನಲಾಗಿದೆ.

ಸಲ್ಮಾನ್ ಖಾನ್ ಅವರ ಗ್ಯಾಲಕ್ಸ್ ಅಪಾರ್ಟ್‌ಮೆಂಟ್‌ನ ಹೊರಗೆ ಗುಂಡು ಹಾರಿಸಿದ ಶೂಟರ್‌ಗಳು ಮುಂಬೈನಿಂದ ಕಚ್‌ಗೆ ಬರುತ್ತಿದ್ದಾಗ ಸೂರತ್‌ನ ತಾಪಿ ನದಿಯಲ್ಲಿ ಬಂದೂಕನ್ನು ಎಸೆದಿದ್ದೇವೆ ಎಂದು ಹೇಳಿದ್ದರು. ಮುಂಬೈ ಕ್ರೈಂ ಈ ಹೈ ಪ್ರೊಫೈಲ್ ಪ್ರಕರಣದ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: ಮನೆ ಮೇಲೆ ಗುಂಡಿನ ದಾಳಿ ನಡೆದ ಬಳಿಕ ದುಬೈಗೆ ತೆರಳಿದ ಸಲ್ಮಾನ್​ ಖಾನ್​

ಇದೀಗ ಈ ತಂಡ ಸೂರತ್ ತಲುಪಿದೆ.ಇದರಲ್ಲಿ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಕೂಡ ಸೇರಿದ್ದಾರೆ. ಏಪ್ರಿಲ್ 17 ರಂದು ಗುಜರಾತ್‌ನ ಕಚ್ ಪೊಲೀಸರು ಆಶಾಪುರ ಮಾತಾ ದೇವಸ್ಥಾನದಿಂದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಅವರನ್ನು ಬಂಧಿಸಿ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದರು.

ಮುಂಬೈ ಪೊಲೀಸರು ಇಬ್ಬರು ಶೂಟರ್‌ಗಳನ್ನು 10 ದಿನಗಳ ಕಾಲ ವಶಕ್ಕೆ ತೆಗೆದುಕೊಂಡಿದ್ದಾರೆ. ಕ್ರೈಂ ಬ್ರಾಂಚ್ ತಂಡ ಸೂರತ್‌ನಲ್ಲಿ ಶೂಟರ್‌ಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಿದೆ. ಶೋಧ ಕಾರ್ಯಕ್ಕಾಗಿ ತಜ್ಞರ ತಂಡವೂ ಅಪರಾಧ ವಿಭಾಗದ ಜತೆಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ