AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ, ಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ

ನಟ ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರ ವಿಚಾರಣೆಯಲ್ಲಿ ಹಲವು ಸಂಗತಿಗಳು ಬಹಿರಂಗವಾಗಿವೆ. ಈ ಇಬ್ಬರೂ ಆರೋಪಿಗಳು ಭುಜ್‌ನಲ್ಲಿ ಸಿಕ್ಕಿಬಿದ್ದಿದ್ದು, ಇದೀಗ ಈ ಪ್ರಕರಣದ ಆರೋಪಿಗಳ ವಿಚಾರಣೆಯ ಆಧಾರದ ಮೇಲೆ ಸೂರತ್‌ನಲ್ಲೂ ತನಿಖೆಯನ್ನು ಪ್ರಾರಂಭಿಸಲಾಗಿದೆ.ಇದರ ಆಧಾರದ ಮೇಲೆ ಮುಂಬೈ ಅಪರಾಧ ವಿಭಾಗದ ತಂಡ ಸೂರತ್ ನಗರದಲ್ಲಿ ತನಿಖೆ ಆರಂಭಿಸಿದೆ. ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೂರತ್ ನಗರಕ್ಕೆ ಆಗಮಿಸಿದ್ದಾರೆ.

ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ, ಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ
ದಯಾ ನಾಯಕ್
ನಯನಾ ರಾಜೀವ್
|

Updated on: Apr 22, 2024 | 3:22 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್(Salman Khan) ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್(Daya Nayak) ಎಂಟ್ರಿ ಕೊಟ್ಟಿದ್ದಾರೆ. ಈ ಘಟನೆಗೆ ಬಳಸಲಾದ ಬಂದೂಕನ್ನು ಹುಡುಕಲು ಮುಂಬೈ ಅಪರಾಧ ವಿಭಾಗದ ತಂಡವು ಸೂರತ್ ತಲುಪಿದೆ. ಗುಜರಾತ್‌ನ ಕಚ್‌ನಲ್ಲಿ ಸಿಕ್ಕಿಬಿದ್ದ ಇಬ್ಬರು ಶೂಟರ್‌ಗಳು ತಾಪಿ ನದಿಯಲ್ಲಿ ಬಂದೂಕು ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಮನೆಗೆ ಫೈರಿಂಗ್ ಪ್ರಕರಣದಲ್ಲಿ ಇಬ್ಬರು ಶೂಟರ್‌ಗಳ ಜೊತೆಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಪೊಲೀಸರು ಆರೋಪಿಯನ್ನಾಗಿ ಮಾಡಿದ್ದಾರೆ. ಮುಂಬೈ ಕ್ರೈಂ ಬ್ರಾಂಚ್ ಸಂಪೂರ್ಣ ಸಿದ್ಧತೆಯೊಂದಿಗೆ ಆಗಮಿಸಿದೆ. ಪಿ ನದಿಯಲ್ಲಿ ಬಂದೂಕಿನ ಹುಡುಕಾಟಕ್ಕೆ ಸ್ವಲ್ಪ ಸಮಯ ಹಿಡಿಯಬಹುದು ಎನ್ನಲಾಗಿದೆ.

ಸಲ್ಮಾನ್ ಖಾನ್ ಅವರ ಗ್ಯಾಲಕ್ಸ್ ಅಪಾರ್ಟ್‌ಮೆಂಟ್‌ನ ಹೊರಗೆ ಗುಂಡು ಹಾರಿಸಿದ ಶೂಟರ್‌ಗಳು ಮುಂಬೈನಿಂದ ಕಚ್‌ಗೆ ಬರುತ್ತಿದ್ದಾಗ ಸೂರತ್‌ನ ತಾಪಿ ನದಿಯಲ್ಲಿ ಬಂದೂಕನ್ನು ಎಸೆದಿದ್ದೇವೆ ಎಂದು ಹೇಳಿದ್ದರು. ಮುಂಬೈ ಕ್ರೈಂ ಈ ಹೈ ಪ್ರೊಫೈಲ್ ಪ್ರಕರಣದ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: ಮನೆ ಮೇಲೆ ಗುಂಡಿನ ದಾಳಿ ನಡೆದ ಬಳಿಕ ದುಬೈಗೆ ತೆರಳಿದ ಸಲ್ಮಾನ್​ ಖಾನ್​

ಇದೀಗ ಈ ತಂಡ ಸೂರತ್ ತಲುಪಿದೆ.ಇದರಲ್ಲಿ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಕೂಡ ಸೇರಿದ್ದಾರೆ. ಏಪ್ರಿಲ್ 17 ರಂದು ಗುಜರಾತ್‌ನ ಕಚ್ ಪೊಲೀಸರು ಆಶಾಪುರ ಮಾತಾ ದೇವಸ್ಥಾನದಿಂದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಅವರನ್ನು ಬಂಧಿಸಿ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದರು.

ಮುಂಬೈ ಪೊಲೀಸರು ಇಬ್ಬರು ಶೂಟರ್‌ಗಳನ್ನು 10 ದಿನಗಳ ಕಾಲ ವಶಕ್ಕೆ ತೆಗೆದುಕೊಂಡಿದ್ದಾರೆ. ಕ್ರೈಂ ಬ್ರಾಂಚ್ ತಂಡ ಸೂರತ್‌ನಲ್ಲಿ ಶೂಟರ್‌ಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಿದೆ. ಶೋಧ ಕಾರ್ಯಕ್ಕಾಗಿ ತಜ್ಞರ ತಂಡವೂ ಅಪರಾಧ ವಿಭಾಗದ ಜತೆಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ