AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ; ಹಿಂದುಸ್ತಾನ್ ಜಿಂಕ್​ನ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ಅನುಮೋದನೆ

ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ (HZL)ನಲ್ಲಿರುವ ಸರ್ಕಾರದ ಸಂಪೂರ್ಣ ಪಾಲನ್ನು ಮಾರಾಟ ಮಾಡುವ ಪ್ರಸ್ತಾಪವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಯಿತು.

ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ; ಹಿಂದುಸ್ತಾನ್ ಜಿಂಕ್​ನ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ಅನುಮೋದನೆ
ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆImage Credit source: NDTV
TV9 Web
| Updated By: ಸುಷ್ಮಾ ಚಕ್ರೆ|

Updated on:May 25, 2022 | 6:20 PM

Share

ನವದೆಹಲಿ: ಎರಡು ದಿನಗಳ ಜಪಾನ್ ಪ್ರವಾಸದ ವೇಳೆ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ (Quad Summit) ಭಾಗವಹಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಂದು ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. ಜಪಾನ್​ನಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಭೆ ನಡೆಸಿದ್ದಾರೆ. ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ (HZL)ನಲ್ಲಿರುವ ಸರ್ಕಾರದ ಸಂಪೂರ್ಣ ಪಾಲನ್ನು ಮಾರಾಟ ಮಾಡುವ ಪ್ರಸ್ತಾಪವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಯಿತು. ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಅನ್ನು ಮುಚ್ಚುವ ಪ್ರಸ್ತಾವನೆಗೂ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಜಿಂಕ್‌ನಲ್ಲಿ ಸರ್ಕಾರದ ಉಳಿದ ಪಾಲನ್ನು ಮಾರಾಟ ಮಾಡಲು ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರವು ಪ್ರಸ್ತುತ ಹಿಂದೂಸ್ತಾನ್ ಜಿಂಕ್‌ನಲ್ಲಿ ಶೇ.29.54ರಷ್ಟು ಪಾಲನ್ನು ಹೊಂದಿದೆ. ಇದು ಸುಮಾರು 37,000 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ
Image
8 Years Of Modi Government: ಚಿಕ್ಕ ವಯಸ್ಸಲ್ಲೆ RSS​ ಪ್ರಚಾರಕನಾಗಿ ಸಮಾಜಮುಖಿಯಾದ ನರೇಂದ್ರ ಮೋದಿ, ಮುಂದೆ ದೇಶ ಸೇವೆಯಲ್ಲಿ ಹಿಂದಿರುಗಿ ನೋಡಿದ್ದೇ ಇಲ್ಲ!
Image
8 Years of Modi Government: ಪ್ರಧಾನಿ ನರೇಂದ್ರ ಮೋದಿಯಿಂದ ವಿಶ್ವನಾಯಕರಿಗೆ ಅಮೂಲ್ಯ ಗಿಫ್ಟ್: ಇದುವರೆಗೆ ಯಾವೆಲ್ಲಾ ಉಡುಗೊರೆ ನೀಡಿದ್ದಾರೆ ಗೊತ್ತಾ?
Image
8 Years of Modi Government: ಏಕರೂಪ ನಾಗರಿಕ ಸಂಹಿತೆ: ಮೋದಿ ಸರ್ಕಾರದ ಎದುರು ಹಲವು ಸವಾಲುಗಳು

ಹಿಂದೂಸ್ತಾನ್ ಜಿಂಕ್ ಬಹುಪಾಲು ಸರ್ಕಾರಿ ಸ್ವಾಮ್ಯದ ಕಂಪನಿಯಾಗಿತ್ತು. 2002ರಲ್ಲಿ ಅನಿಲ್ ಅಗರ್​ವಾಲ್ ನೇತೃತ್ವದ ವೇದಾಂತ ಗ್ರೂಪ್ ಖರೀದಿಸಿದ ಸಂಸ್ಥೆಯಲ್ಲಿ ಸರ್ಕಾರವು ಈ ಹಿಂದೆ ಶೇ. 26ರಷ್ಟು ಪಾಲನ್ನು ಆಫ್‌ಲೋಡ್ ಮಾಡಿತ್ತು. 29.5ರಷ್ಟು ಪಾಲನ್ನು ಹೊಂದಿರುವ ಕೇಂದ್ರ ಸರ್ಕಾರವು ಹಿಂದೂಸ್ತಾನ್ ಜಿಂಕ್‌ನಲ್ಲಿ ಸಾಮಾನ್ಯ ಷೇರುದಾರರಾಗಿದ್ದು, ಇದನ್ನು ವೇದಾಂತ ಲಿಮಿಟೆಡ್‌ನಿಂದ ಪ್ರಚಾರ ಮಾಡಲಾಗಿದೆ. ಅನಿಲ್ ಅಗರ್ವಾಲ್ ನೇತೃತ್ವದ ವೇದಾಂತ ಜಿಂಕ್ ಲೀಡ್ ಮೈನರ್‌ನಲ್ಲಿ ಶೇ. 64.92ರಷ್ಟು ಪಾಲನ್ನು ಹೊಂದಿದೆ. ಪ್ರಸ್ತುತ ಮಾರುಕಟ್ಟೆ ಬೆಲೆಯಲ್ಲಿ ಹಿಂದೂಸ್ತಾನ್ ಜಿಂಕ್‌ನಲ್ಲಿ ಸರ್ಕಾರದ ಉಳಿಕೆ ಪಾಲು ಸುಮಾರು 38,000 ಕೋಟಿ ರೂ. ಆಗಿದೆ.

ಇದನ್ನೂ ಓದಿ: 8 Years Of Modi Government: ಸಹೋದರ ಮೋದಿ ಪ್ರಧಾನಿಯೇ ಆದರೂ ಕುಟುಂಬದವರಿಗೆ ರಾಜಕೀಯದ ಗಂಧಗಾಳಿ ತಾಕಿಲ್ಲ! ಮೋದಿ ಸಹೋದರಿ ಏನ್ಮಾಡ್ತಿದ್ದಾರೆ?

2021ರ ನವೆಂಬರ್ 18ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಕೇಂದ್ರ ಸರ್ಕಾರವು SEBI ನಿಯಮಗಳಿಗೆ ಅನುಸಾರವಾಗಿ ಹಿಂದುಸ್ತಾನ್ ಜಿಂಕ್ ಲಿಮಿಟೆಡ್​ನಲ್ಲಿ ತನ್ನ ಉಳಿದ ಪಾಲನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು. ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (ಡಿಐಪಿಎಎಂ) ಹಿಂದೂಸ್ತಾನ್ ಜಿಂಕ್‌ನಲ್ಲಿನ ಸರ್ಕಾರದ ಸಂಪೂರ್ಣ ಪಾಲನ್ನು ಈ ಹಣಕಾಸು ವರ್ಷದೊಳಗೆ ಮಾರಾಟ ಮಾಡಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಎನ್​ಡಿಎ ಸರ್ಕಾರದ ಸಂಪುಟದ ಹಿರಿಯ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಎಸ್. ಜೈಶಂಕರ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು, ಅನುರಾಗ್ ಠಾಕೂರ್, ಸ್ಮೃತಿ ಇರಾನಿ ಸೇರಿದಂತೆ ಇತರರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಇಂದು ಪಾಲಂನ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿದರು. ಟೋಕಿಯೊದಲ್ಲಿ ನಡೆದ ಶೃಂಗಸಭೆಯು ಕ್ವಾಡ್ ಲೀಡರ್‌ಗಳ ನಾಲ್ಕನೇ ಸಂವಾದವಾಗಿದ್ದು, 2021ರ ಮಾರ್ಚ್ ತಿಂಗಳಲ್ಲಿ ಮೊದಲ ವರ್ಚುವಲ್ ಸಭೆ ನಡೆಸಲಾಗಿತ್ತು. ನಂತರ 2021ರ ಸೆಪ್ಟೆಂಬರ್ ತಿಂಗಳಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ಶೃಂಗಸಭೆ ಮತ್ತು 2022ರ ಮಾರ್ಚ್ ತಿಂಗಳಲ್ಲಿ ವರ್ಚುವಲ್ ಸಭೆ ನಡೆಸಲಾಗಿತ್ತು.

ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕ್ವಾಡ್ ರಾಷ್ಟ್ರಗಳ ನಾಯಕರೊಂದಿಗೆ ಸಂವಾದದಲ್ಲಿ ಭಾಗವಹಿಸಿದರು. ಇದು ಉಕ್ರೇನ್, ಆಸ್ಟ್ರೇಲಿಯಾ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ರಷ್ಯಾದ ಮಿಲಿಟರಿ ಕ್ರಮದ ಬಗ್ಗೆ ಟೀಕೆಗಳನ್ನು ಈ ಸಭೆಯಲ್ಲಿ ಮಾಡಲಾಯಿತು. ಕ್ವಾಡ್ ಶೃಂಗಸಭೆಯ ಹೊರತಾಗಿ, ಪಿಎಂ ಮೋದಿ ಮಂಗಳವಾರ ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ ಮತ್ತು ಆಸ್ಟ್ರೇಲಿಯಾದ ಹೊಸ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಹಾಗೇ, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Wed, 25 May 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು