AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್ ಮನೆ ಎದುರು ಗುಂಡಿನ ದಾಳಿ, ಪೊಲೀಸ್​ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ

ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಿವುಡ್ ನಟ ಸಲ್ಮಾನ್​ ಖಾನ್ ನಿವಾಸದ ಎದುರು ನಡೆದ ಗುಂಡಿನ ದಾಳಿಯ ಆರೋಪಿಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿರುವ ಆರೋಪ ಹೊತ್ತಿರುವ ಅನುಜ್​ ಪೊಲೀಸ್​ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ, ಅನುಜ್ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಲ್ಮಾನ್​ ಖಾನ್ ಮನೆ ಎದುರು ಗುಂಡಿನ ದಾಳಿ, ಪೊಲೀಸ್​ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ
ಸಲ್ಮಾನ್​ ಖಾನ್
ನಯನಾ ರಾಜೀವ್
| Edited By: |

Updated on:May 01, 2024 | 4:05 PM

Share

ನಟ ಸಲ್ಮಾನ್​ ಖಾನ್(Salman Khan)ಮನೆ ಎದುರು ನಡೆದಿದ್ದ ಗುಂಡಿನ ದಾಳಿಯ ಆರೋಪಿ ಅನುಜ್(Anuj)​ ಪೊಲೀಸ್​ ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರೋಪಿಯ ಹೆಸರು ಅನುಜ್ ಥಾಪನ್, ಸಲ್ಮಾನ್ ಮನೆ ಮೇಲೆ ಗುಂಡು ಹಾರಿಸಿದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಅನುಜ್​ಮೇಲಿದೆ.

ಸಲ್ಮಾನ್ ಖಾನ್ ಮನೆಯಲ್ಲಿ ಫೈರಿಂಗ್ ಪ್ರಕರಣ ದಿನಕ್ಕೊಂದು ಹೊಸ ರೂಪ ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳಾದ ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21) ಮತ್ತು ಅನುಜ್ ಥಾಪನ್ (32) ಪೊಲೀಸರ ವಶದಲ್ಲಿದ್ದರು.

ಇದೀಗ ಸಲ್ಮಾನ್ ಖಾನ್ ಮನೆಗೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಹೊರಬಿದ್ದಿದೆ. ಏಪ್ರಿಲ್ 14 ರ ಭಾನುವಾರ ಬೆಳಗ್ಗೆ, ಸಲ್ಮಾನ್ ಖಾನ್ ಅವರ ಮನೆಯ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಹೊರಗೆ ಗುಂಡಿನ ದಾಳಿ ನಡೆದಿದೆ.

ಮತ್ತಷ್ಟು ಓದಿ: ಗುಂಡಿನ ದಾಳಿ ಬಳಿಕ ಮನೆ ಖಾಲಿ ಮಾಡುವ ನಿರ್ಧಾರದಲ್ಲಿ ಸಲ್ಮಾನ್​ ಖಾನ್​?

ಈ ಸುದ್ದಿ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸಲ್ಮಾನ್ ಮನೆ ಹೊರಗೆ 5 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಇದಾದ ಬಳಿಕ ಆರೋಪಿಗಳಿಬ್ಬರೂ ಗುರುತು ಸಿಗದಂತೆ ಮೂರು ಬಾರಿ ಬಟ್ಟೆ ಬದಲಾಯಿಸಿದ್ದರು. ಅವರ ಬಳಿ 40 ಗುಂಡುಗಳಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಲ್ಮಾನ್ ಖಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಹೊತ್ತಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಗಳಾದ ವಿಕ್ಕಿ ಗುಪ್ತಾ, ಸಾಗರ್ ಪಾಲ್ ಮತ್ತು ಅನುಜ್ ಥಾಪನ್ ಅವರನ್ನು ಮೇ 8 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:57 pm, Wed, 1 May 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ