Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಮನೆ ಹೊರಗೆ ಗುಂಡಿನ ದಾಳಿ ಪ್ರಕರಣ: ನದಿಯಲ್ಲಿ ಪಿಸ್ತೂಲು, ಗುಂಡುಗಳು ಪತ್ತೆ

ಬಾಲಿವುಡ್ ನಟ ಸಲ್ಮಾನ್​ ಖಾನ್​ ಮನೆ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಪೊಲೀಸರು ನದಿಯಿಂದ ವಶಪಡಿಸಿಕೊಂಡಿದ್ದಾರೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ಗುಜರಾತ್‌ನ ತಾಪಿ ನದಿಯಿಂದ ಎರಡು ಪಿಸ್ತೂಲ್‌ಗಳು, ಮ್ಯಾಗಜೀನ್‌ಗಳು ಮತ್ತು ಬುಲೆಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಲ್ಮಾನ್ ಮನೆ ಹೊರಗೆ ಗುಂಡಿನ ದಾಳಿ ಪ್ರಕರಣ: ನದಿಯಲ್ಲಿ ಪಿಸ್ತೂಲು, ಗುಂಡುಗಳು ಪತ್ತೆ
Follow us
ನಯನಾ ರಾಜೀವ್
|

Updated on: Apr 23, 2024 | 2:52 PM

ಬಾಲಿವುಡ್ ನಟ ಸಲ್ಮಾನ್ ಖಾನ್(Salman Khan) ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡುವ ಶೋಧ ಕಾರ್ಯಾಚರಣೆಯಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗವು ಗುಜರಾತ್‌ನ ತಾಪಿ ನದಿಯಿಂದ ಎರಡು ಪಿಸ್ತೂಲ್‌ಗಳು, ಮ್ಯಾಗಜೀನ್‌ಗಳು ಮತ್ತು ಬುಲೆಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರ ಆರಂಭವಾದ ಶೋಧ ಕಾರ್ಯದಲ್ಲಿ ಅಪರಾಧ ವಿಭಾಗದ ಅಧಿಕಾರಿಗಳು ಎರಡು ಪಿಸ್ತೂಲ್‌ಗಳು, ಮೂರು ಮ್ಯಾಗಜೀನ್‌ಗಳು ಮತ್ತು 13 ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಸೇರಿದಂತೆ 12 ಅಧಿಕಾರಿಗಳ ತಂಡ ಇನ್ನೂ ಸ್ಥಳದಲ್ಲಿಯೇ ಇದೆ. ಸ್ಕೂಬಾ ಡೈವರ್‌ಗಳ ಸಹಾಯದಿಂದ ಶೋಧ ಕಾರ್ಯ ನಡೆಯುತ್ತಿದೆ ಎಂದರು.ಇಬ್ಬರು ಬಂಧಿತ ಆರೋಪಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಎಪ್ರಿಲ್ 14 ರಂದು ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿ ನಂತರ ಮೋಟಾರ್‌ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದರು.

ತಾಂತ್ರಿಕ ಕಣ್ಗಾವಲು ಆಧರಿಸಿ, ಅವರನ್ನು ಏಪ್ರಿಲ್ 16 ರಂದು ಮುಂಬೈ ಮತ್ತು ಕಚ್ ಪೊಲೀಸರ ಜಂಟಿ ತಂಡಗಳು ಗುಜರಾತ್‌ನ ಭುಜ್ ಪಟ್ಟಣದ ಬಳಿಯ ಮಾತಾ ನೊ ಮಧ್‌ನಲ್ಲಿರುವ ದೇವಾಲಯದ ಆವರಣದಲ್ಲಿ ಬಂಧಿಸಲಾಗಿತ್ತು. ನಂತರ ಹೆಚ್ಚಿನ ತನಿಖೆಗಾಗಿ ಅವರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಮತ್ತಷ್ಟು ಓದಿ:ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ, ಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ

ಮೂಲಗಳ ಪ್ರಕಾರ, ಗುಂಡಿನ ದಾಳಿಯ ನಂತರ ಮುಂಬೈನಿಂದ ರಸ್ತೆಯ ಮೂಲಕ ಸೂರತ್ ತಲುಪಿದ ನಂತರ ರೈಲಿನಲ್ಲಿ ಭುಜ್‌ಗೆ ಪಲಾಯನ ಮಾಡುತ್ತಿದ್ದಾಗ ರೈಲ್ವೆ ಸೇತುವೆಯಿಂದ ತಾಪಿ ನದಿಗೆ ಆಯುಧವನ್ನು ಎಸೆದಿದ್ದೇವೆ ಎಂದು ಇಬ್ಬರೂ ವಿಚಾರಣೆಯ ಸಮಯದಲ್ಲಿ ಪೊಲೀಸರಿಗೆ ಹೇಳಿದ್ದರು. ಗುಪ್ತಾ ಮತ್ತು ಪಾಲ್ ಇಬ್ಬರು ಬಿಷ್ಣೋಯ್ ಸಹೋದರರಿಂದ ಸೂಚನೆಗಳನ್ನು ಸ್ವೀಕರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ