ಕೊರೊನಾ ಎಫೆಕ್ಟ್​: ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದೇ ಅವಸ್ಥೆ

ಗಾಂಧಿನಗರ: ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಲಾಕ್‌ಡೌನ್‌ ಮಾಡಿದಾಗಿನಿಂದ ಬ್ಯೂಟಿ ಪಾರ್ಲರ್, ಸಲೂನ್ ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ಜನರಿಗೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೆಲೂನ್ ಮಾಲೀಕರಿಗೂ ಸಹ ತೀರಾ ಸಂಕಷ್ಟ ಎದುರಾಗಿದೆ. ಗುಜರಾತ್​ನ ಖೇಡಾ ಜಿಲ್ಲೆಯ ನಾಡಿಯಾನ್​ನಲ್ಲಿ ಸಲೂನ್ ಅಂಗಡಿಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಹೇರ್​ ಕಟ್ ಮಾಡುವ ಮುನ್ನ ಸಲೂನ್ ಸಿಬ್ಬಂದಿಯು PPE ಕಿಟ್​ಗಳನ್ನು ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು […]

ಕೊರೊನಾ ಎಫೆಕ್ಟ್​: ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದೇ ಅವಸ್ಥೆ
ಸಾಧು ಶ್ರೀನಾಥ್​

Updated on: May 13, 2020 | 8:40 PM

ಗಾಂಧಿನಗರ: ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಲಾಕ್‌ಡೌನ್‌ ಮಾಡಿದಾಗಿನಿಂದ ಬ್ಯೂಟಿ ಪಾರ್ಲರ್, ಸಲೂನ್ ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ಜನರಿಗೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೆಲೂನ್ ಮಾಲೀಕರಿಗೂ ಸಹ ತೀರಾ ಸಂಕಷ್ಟ ಎದುರಾಗಿದೆ.

ಗುಜರಾತ್​ನ ಖೇಡಾ ಜಿಲ್ಲೆಯ ನಾಡಿಯಾನ್​ನಲ್ಲಿ ಸಲೂನ್ ಅಂಗಡಿಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಹೇರ್​ ಕಟ್ ಮಾಡುವ ಮುನ್ನ ಸಲೂನ್ ಸಿಬ್ಬಂದಿಯು PPE ಕಿಟ್​ಗಳನ್ನು ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಲೂನ್ ಮಾಲೀಕ ವಿಶಾಲ್ ಲಿಂಬಾಚಿಯಾ ತಿಳಿಸಿದ್ದಾರೆ. ಸದ್ಯ ಗುಜರಾತ್​ನಲ್ಲಿರುವ ಅವಸ್ಥೆ ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೂ ಬರಲಿದೆ.

Published On - 7:12 pm, Wed, 13 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us