AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮಾತಿನ ಅರ್ಥವೇ ಬೇರೆ; ಪಾಕಿಸ್ತಾನ ಮನೆಯಂತೆ ಭಾಸವಾಯಿತು ಎಂಬ ತಮ್ಮ ಹೇಳಿಕೆಗೆ ಸ್ಯಾಮ್ ಪಿತ್ರೋಡಾ ಸ್ಪಷ್ಟನೆ

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನನಗೆ ಮನೆಯಲ್ಲಿ ಇದ್ದಂತೆ ಭಾಸವಾಯಿತು ಎಂದು ಹೇಳುವ ಮೂಲಕ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿವಾದಕ್ಕೆ ನಾಂದಿ ಹಾಡಿದ್ದರು. ಅವರು ಈಗ ತಮ್ಮ ಹಿಂದಿನ ಹೇಳಿಕೆಗಳಿಗೆ ಸ್ಪಷ್ಟನೆಯನ್ನು ನೀಡಿದ್ದಾರೆ. ದೇಶಗಳ ನಡುವಿನ 'ಹಂಚಿಕೆಯ ಇತಿಹಾಸ' ಮತ್ತು ಜನರಿಂದ ಜನರ ನಡುವಿನ ಬಾಂಧವ್ಯವನ್ನು ಒತ್ತಿಹೇಳುವ ಉದ್ದೇಶದಿಂದ ಮಾತ್ರ ಆ ಹೇಳಿಕೆ ನೀಡಿದ್ದಾಗಿ ಅವರು ಹೇಳಿದ್ದಾರೆ.

ನನ್ನ ಮಾತಿನ ಅರ್ಥವೇ ಬೇರೆ; ಪಾಕಿಸ್ತಾನ ಮನೆಯಂತೆ ಭಾಸವಾಯಿತು ಎಂಬ ತಮ್ಮ ಹೇಳಿಕೆಗೆ ಸ್ಯಾಮ್ ಪಿತ್ರೋಡಾ ಸ್ಪಷ್ಟನೆ
Sam Pitroda
ಸುಷ್ಮಾ ಚಕ್ರೆ
|

Updated on: Sep 19, 2025 | 8:57 PM

Share

ನವದೆಹಲಿ, ಸೆಪ್ಟೆಂಬರ್ 19: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ “ಮನೆಯಲ್ಲಿರುವಂತೆ ಭಾಸವಾಯಿತು” ಎಂಬ ತಮ್ಮ ವಿವಾದಾತ್ಮಕ ಹೇಳಿಕೆಗೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda) ಸ್ಪಷ್ಟನೆ ನೀಡಿದ್ದಾರೆ. “ಹಂಚಿಕೆಯ ಇತಿಹಾಸ ಮತ್ತು ಜನರೊಂದಿಗಿನ ಬಾಂಧವ್ಯ”ವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ಆ ಪ್ರದೇಶದಲ್ಲಿನ ನೋವು, ಸಂಘರ್ಷ ಅಥವಾ ಭದ್ರತಾ ಸವಾಲುಗಳನ್ನು ನಾವು ಕಡೆಗಣಿಸಬಾರದು ಎಂದು ಅವರು ಹೇಳಿದ್ದಾರೆ.

ನೆರೆಯ ರಾಷ್ಟ್ರಗಳಲ್ಲಿದ್ದರೆ ಮನೆಯಲ್ಲಿರುವಂತೆ ಅನಿಸುತ್ತಿದೆ ಎಂದು ಹೇಳಿದ ನಂತರ ಸ್ಯಾಮ್ ಪಿತ್ರೋಡಾ ವಿವಾದಕ್ಕೆ ನಾಂದಿ ಹಾಡಿದರು. ಭಾರತದ ವಿದೇಶಾಂಗ ನೀತಿಯು ಮೊದಲು ಅದರ ನೆರೆಹೊರೆಯ ಮೇಲೆ ಕೇಂದ್ರೀಕರಿಸಬೇಕು ಎಂದು ಅವರು ತಿಳಿಸಿದರು. ಈ ಹೇಳಿಕೆಯು ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಯಿತು. ಕಾಂಗ್ರೆಸ್ ಪಾಕಿಸ್ತಾನದ ಬಗ್ಗೆ ಮೃದುಧೋರಣೆ ತಳೆದಿದೆ ಎಂದು ಬಿಜೆಪಿ ಆರೋಪಿಸಿತು.

ಇದನ್ನೂ ಓದಿ: ಪಾಕಿಸ್ತಾನದ ಅಮಾಯಕರ ಸಾವು ತಪ್ಪಿಸಲು ಮಧ್ಯರಾತ್ರಿ ಆಪರೇಷನ್ ಸಿಂಧೂರ್‌ ದಾಳಿ ನಡೆಸಿದೆವು; ಸಿಡಿಎಸ್ ಅನಿಲ್ ಚೌಹಾಣ್

“ನೆರೆಯ ದೇಶಗಳಿಗೆ ಭೇಟಿ ನೀಡುವಾಗ ನನಗೆ ಮನೆಯಲ್ಲಿರುವಂತೆ ಭಾಸವಾಗುತ್ತದೆ, ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ನಾವು ಬೇರುಗಳನ್ನು ಹಂಚಿಕೊಳ್ಳುತ್ತೇವೆ. ನಾನು ಹಂಚಿಕೊಂಡ ಇತಿಹಾಸ ಮತ್ತು ಜನರ ನಡುವಿನ ಬಾಂಧವ್ಯವನ್ನು ಒತ್ತಿಹೇಳಲು ಬಯಸಿದ್ದೆ. ಆ ಪ್ರದೇಶದ ನೋವು, ಸಂಘರ್ಷ ಅಥವಾ ಭಯೋತ್ಪಾದನೆ ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಂದ ನಾವು ಎದುರಿಸುತ್ತಿರುವ ಗಂಭೀರ ಸವಾಲುಗಳನ್ನು ನಿರ್ಲಕ್ಷಿಸುವಂತಿಲ್ಲ” ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ನನ್ನ ಹೇಳಿಕೆಗಳು ಕೆಲವರನ್ನು ಅಸಮಾಧಾನಗೊಳಿಸಿರಬಹುದು ಎಂದು ಒಪ್ಪಿಕೊಂಡ ಸ್ಯಾಮ್ ಪಿತ್ರೋಡಾ, “ನನ್ನ ಮಾತುಗಳು ಗೊಂದಲ ಅಥವಾ ನೋವನ್ನು ಉಂಟುಮಾಡಿದ್ದರೆ, ನನ್ನ ಉದ್ದೇಶವು ಯಾರ ನೋವನ್ನು ಕಡಿಮೆ ಮಾಡುವುದು ಅಥವಾ ಕಾನೂನುಬದ್ಧ ಕಾಳಜಿಗಳನ್ನು ದುರ್ಬಲಗೊಳಿಸುವುದಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Video: ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದ ಸ್ಯಾಮ್ ಪಿತ್ರೋಡಾ

ಸ್ಯಾಮ್ ಪಿತ್ರೋಡಾ ಹೇಳಿದ್ದೇನು?:

ಸ್ಯಾಮ್ ಪಿತ್ರೋಡಾ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದಾಗಲೆಲ್ಲಾ ತಾವು ಯಾವಾಗಲೂ ಮನೆಯಲ್ಲಿರುವಂತೆ ಭಾಸವಾಗುತ್ತಿತ್ತು ಎಂದು ಹೇಳಿದ್ದರು. ಇದು ವಿವಾದವನ್ನು ಹುಟ್ಟುಹಾಕಿತ್ತು. ಸ್ಯಾಮ್ ಪಿತ್ರೋಡಾ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡೂ ದೇಶಗಳ ನಡುವಿನ ಸಮಸ್ಯೆಗಳನ್ನು ಪರಿಹರಿಸಲು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಬಿಜೆಪಿ ಈ ಅವಕಾಶವನ್ನು ಕಾಂಗ್ರೆಸ್ ಮೇಲೆ ದಾಳಿ ಮಾಡಲು ಬಳಸಿಕೊಂಡಿತು. ಬಿಜೆಪಿ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆಗಳನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ಮಾಡಿದ ‘ಅವಮಾನ’ ಎಂದು ಕರೆದಿದೆ. ಆದರೆ, 26/11 ಮುಂಬೈ ಭಯೋತ್ಪಾದಕ ದಾಳಿಯ ನಂತರ ಕಾಂಗ್ರೆಸ್ ಪಾಕಿಸ್ತಾನದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ