AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi mosque row ಶಿವನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ಎಂಎಲ್​​ಸಿ ವಿರುದ್ಧ ಕೇಸು

ಜ್ಞಾನವಾಪಿ ಮಸೀದಿ ವಿವಾದದಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸುವಾಗ ಯಾದವ್ ಅವರು ಭಗವಾನ್ ಶಿವ ಮತ್ತು ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

Gyanvapi mosque row ಶಿವನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ಎಂಎಲ್​​ಸಿ ವಿರುದ್ಧ ಕೇಸು
ಲಾಲ್ ಬಿಹಾರಿ ಯಾದವ್
TV9 Web
| Edited By: |

Updated on:Jun 09, 2022 | 5:18 PM

Share

ಲಖನೌ: ಶಿವನ ಬಗ್ಗೆ (Lord Shiva) ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರು ಸಮಾಜವಾದಿ ಪಕ್ಷದ (Samajwadi Party) ಎಂಎಲ್​​ಸಿ ಲಾಲ್ ಬಿಹಾರಿ ಯಾದವ್ (Lal Bihari Yadav) ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೊರಾದಾಬಾದ್ ಪ್ರದೇಶದಲ್ಲಿರುವ ಕಾಂಥ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾದವ್ ವಿರುದ್ಧ ಐಪಿಸಿ 153A ಮತ್ತು 153B ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯಾದವ್ ವಿರುದ್ಧ ಬಜರಂಗ ದಳದ ನಾಯಕರೊಬ್ಬರು ದೂರು ನೀಡಿದ್ದರು. ಜ್ಞಾನವಾಪಿ ಮಸೀದಿ ವಿವಾದದಲ್ಲಿ(Gyanvapi mosque row) ತಮ್ಮ ಅಭಿಪ್ರಾಯಗಳನ್ನು ಮಂಡಿಸುವಾಗ ಯಾದವ್ ಅವರು ಭಗವಾನ್ ಶಿವ ಮತ್ತು ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಜ್ಞಾನವಾಪಿ ಮಸೀದಿಯಲ್ಲಿ ಕಲ್ಲಿನ ತುಂಡೊಂದು ಸಿಕ್ಕಿದೆ. ಅದನ್ನು ಶಿವಲಿಂಗ ಎಂದು ಹೇಗೆ ಹೇಳುತ್ತೀರಿ? ನನಗಿದು ಅರ್ಥವಾಗುತ್ತಿಲ್ಲ. ಶಿವ ಮನುಷ್ಯನೇ ಅಥವಾ ಕಲ್ಲೇ?, ಆದ್ಮಿ ಥಾ  ಯಾ ಪಥ್ಥರ್ ಥಾ?  ಎಂದು ಯಾದವ್ ಕೇಳಿದ್ದಾರೆ. ಹಿಂದೂಪರರು ಜ್ಞಾನಪಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಇದೆ ಎಂದು ವಾದಿಸಿದ್ದು ವಾರಣಾಸಿ ನ್ಯಾಯಾಲಯವು ವಿಡಿಯೊಗ್ರಫಿ ಸರ್ವೇ ನಡೆಸಲು ಆದೇಶಿಸಿತ್ತು. ಭಗವಾನ್ ಶಿವನ ಕುರಿತಾದ ಅವರ ಹೇಳಿಕೆಗಳ ವಿವಾದದ ನಡುವೆ, ಉತ್ತರ ಪ್ರದೇಶ ವಿಧಾನ ಪರಿಷತ್ತಿನಲ್ಲಿ ಹೊಸದಾಗಿ ಆಯ್ಕೆಯಾದ ವಿರೋಧ ಪಕ್ಷದ ನಾಯಕ ತಮ್ಮ ‘ಆದ್ಮಿ ಯಾ ಪಥ್ಥರ್’ ಹೇಳಿಕೆಯಿಂದ ಹಿಂದೆ ಸರಿಯಲಿಲ್ಲ.

ಟೈಮ್ಸ್ ನೌ ಜೊತೆ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ, ಕಲ್ಲನ್ನು ದೇವರ ರೂಪದಲ್ಲಿ ಮಾಡಲಾಗಿದೆ. ‘ಕಲಾವಿದನೊಬ್ಬ ಕಲ್ಲಿಗೆ ನೀಡುವ ರೂಪ.. ಅದನ್ನೇ ದೇವರೆಂದು ಒಪ್ಪಿಕೊಳ್ಳುತ್ತೇವೆ’ ಎಂದರು.

ಜ್ಞಾನವಾಪಿ ಮಸೀದಿ ವಿವಾದದ ಮಧ್ಯೆ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಇತ್ತೀಚೆಗೆ ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವುದು ಅವಿವೇಕದ ಸಂಗತಿ ಎಂದು ಹೇಳಿದ್ದಾರೆ. ಹಿಂದೂಗಳು ತಮ್ಮ ಮುಸ್ಲಿಂ ಸಹೋದರರೊಂದಿಗೆ ಕುಳಿತು ಎಲ್ಲಾ ವಿವಾದಗಳನ್ನು ಬಗೆಹರಿಸಿಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ
Image
ಎಲ್ಲ ಮಸೀದಿಗಳಲ್ಲಿ ಶಿವಲಿಂಗ ಹುಡುಕಬೇಡಿ: ಆರ್​ಎಸ್​ಎಸ್​ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ ಮೋಹನ್ ಭಾಗವತ್
Image
ವಾರಣಾಸಿಯ ಮಸೀದಿ ಸರ್ವೇ ವಿಡಿಯೋ ಮಾಧ್ಯಮಗಳಿಗೆ ಸೋರಿಕೆ: ಮಸೀದಿಯ ಒಳಗೆ ಏನೇನಿದೆ? ಇಲ್ಲಿದೆ ವಿಡಿಯೋ
Image
ಜ್ಞಾನವಾಪಿ ಮಸೀದಿ-ದೇಗುಲ ವಿವಾದದ ಸಮ್ಮುಖದಲ್ಲಿ ಜಗತ್ತಿನಲ್ಲಿ ಇನ್ನೂ ಯಾವೆಲ್ಲಾ ಧರ್ಮ ಸ್ಥಳಗಳ ಮಧ್ಯೆ ಕದನಗಳು ನಡೆಯುತಿವೆ ಗೊತ್ತಾ!?

“ಅಖಂಡ ಭಾರತದ ಇಬ್ಭಾಗವನ್ನು ಹಿಂದೂಗಳು ಒಪ್ಪಿಕೊಂಡಿದ್ದಾರೆ, ಅದು ಮುಸ್ಲಿಂ ರಾಷ್ಟ್ರವಾದ ಪಾಕಿಸ್ತಾನಕ್ಕೆ ದಾರಿ ಮಾಡಿಕೊಟ್ಟಿತು. ಇದರರ್ಥ ಭಾರತದಲ್ಲಿ ಮತ್ತೆ ಉಳಿದುಕೊಂಡಿರುವ ಮತ್ತು ಪಾಕಿಸ್ತಾನವನ್ನು ಆಯ್ಕೆ ಮಾಡದ ಉತ್ತಮ ಸಂಖ್ಯೆಯ ಮುಸ್ಲಿಮರು ನಮ್ಮ ಸಹೋದರರು ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದ್ದಾರೆ. ದೇಶದ ಜ್ಞಾನವಾಪಿ ಮತ್ತು ಇತರ ಮಸೀದಿಗಳನ್ನು ರಕ್ಷಿಸಲು 1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ಎತ್ತಿಹಿಡಿಯುವಂತೆ ಜಮಾತ್-ಎ-ಇಸ್ಲಾಮಿ ಹಿಂದ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:17 pm, Thu, 9 June 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್