11 ಪ್ರಬಲ ಸ್ಥಾನಗಳೊಂದಿಗೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಉತ್ತಮ ಆರಂಭ: ಅಖಿಲೇಶ್ ಯಾದವ್

|

Updated on: Jan 27, 2024 | 8:00 PM

11 ಪ್ರಬಲ ಸ್ಥಾನಗಳೊಂದಿಗೆ ಕಾಂಗ್ರೆಸ್‌ನೊಂದಿಗಿನ ನಮ್ಮ ಸೌಹಾರ್ದಯುತ ಮೈತ್ರಿಯು  ಉತ್ತಮ ಆರಂಭವಾಗಿದೆ. ಈ ಪ್ರವೃತ್ತಿಯು ಗೆಲುವಿನ ಸಮೀಕರಣದೊಂದಿಗೆ ಮುಂದುವರಿಯುತ್ತದೆ. 'ಇಂಡಿಯಾ' ತಂಡ ಮತ್ತು 'ಪಿಡಿಎ' ತಂತ್ರವು ಇತಿಹಾಸವನ್ನು ಬದಲಾಯಿಸುತ್ತದೆ" ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

11 ಪ್ರಬಲ ಸ್ಥಾನಗಳೊಂದಿಗೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಉತ್ತಮ ಆರಂಭ: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Follow us on

ಲಕ್ನೋ ಜನವರಿ 27: ಉತ್ತರ ಪ್ರದೇಶದಲ್ಲಿ (Uttar Pradesh ) 11 “ಪ್ರಬಲ” ಲೋಕಸಭಾ ಸ್ಥಾನಗಳೊಂದಿಗೆ ಕಾಂಗ್ರೆಸ್ (Congress) ಜೊತೆಗಿನ ತಮ್ಮ ಪಕ್ಷದ ಮೈತ್ರಿ “ಒಳ್ಳೆಯ ಆರಂಭ” ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh yadav) ಹೇಳಿದ್ದಾರೆ. ಉತ್ತರ ಪ್ರದೇಶವು 80 ಸದಸ್ಯರನ್ನು ಸಂಸತ್ತಿನ ಕೆಳಮನೆಗೆ ಕಳುಹಿಸುತ್ತದೆ. ಏಪ್ರಿಲ್-ಮೇನಲ್ಲಿ ಚುನಾವಣೆಗಳು ನಡೆಯಲಿವೆ.
11 ಪ್ರಬಲ ಸ್ಥಾನಗಳೊಂದಿಗೆ ಕಾಂಗ್ರೆಸ್‌ನೊಂದಿಗಿನ ನಮ್ಮ ಸೌಹಾರ್ದಯುತ ಮೈತ್ರಿಯು  ಉತ್ತಮ ಆರಂಭವಾಗಿದೆ. ಈ ಪ್ರವೃತ್ತಿಯು ಗೆಲುವಿನ ಸಮೀಕರಣದೊಂದಿಗೆ ಮುಂದುವರಿಯುತ್ತದೆ. ‘ಇಂಡಿಯಾ’ ತಂಡ ಮತ್ತು ‘ಪಿಡಿಎ’ ತಂತ್ರವು ಇತಿಹಾಸವನ್ನು ಬದಲಾಯಿಸುತ್ತದೆ” ಎಂದು ಯಾದವ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿ(ಯು) ಅಧ್ಯಕ್ಷ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಬಹುದು ಎಂಬ ಬಲವಾದ ಸೂಚನೆಗಳ ಮಧ್ಯೆ ಈ ಬೆಳವಣಿಗೆ ನಡೆದಿದೆ.

ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ನಂತರ ಆಗಸ್ಟ್ 2022 ರಲ್ಲಿ ತಮ್ಮ ಮಾಜಿ ಪ್ರತಿಸ್ಪರ್ಧಿ ಲಾಲು ಪ್ರಸಾದ್ ಸ್ಥಾಪಿಸಿದ ಆರ್ ಜೆಡಿಯೊಂದಿಗೆ ಕೈಜೋಡಿಸಿದರು.

ಬಿಹಾರದ ಬಹುಕಾಲದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಂತರ, ಬಿಜೆಪಿಯನ್ನು ಎದುರಿಸಲು ದೇಶಾದ್ಯಂತ ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಕೈಗೊಂಡರು. ಅದೇ ಇಂಡಿಯಾ ಮೈತ್ರಿಕೂಟ. ಒಂದು ವೇಳೆ ನಿತೀಶ್ ಕುಮಾರ್ ಎನ್‌ಡಿಎ ತೆಕ್ಕೆಗೆ ಮರಳಲು ನಿರ್ಧರಿಸಿದರೆ, ಪ್ರತಿಪಕ್ಷಗಳ ಒಕ್ಕೂಟಕ್ಕೆ ಭಾರಿ ಹೊಡೆತ ಬೀಳಲಿದೆ.

ಇದನ್ನೂ ಓದಿ: ಬಿಹಾರ ರಾಜಕೀಯ ಬಿಕ್ಕಟ್ಟು; ಲಾಲು ಪ್ರಸಾದ್ ಯಾದವ್ ಲೆಕ್ಕಾಚಾರ ಏನಿದೆ?

ಬಿಹಾರದಲ್ಲಿ ಇದುವರೆಗಿನ ಪ್ರಮುಖ 10 ಬೆಳವಣಿಗೆಗಳು ಇಲ್ಲಿವೆ

  1.  ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಪಾಟ್ನಾದಲ್ಲಿ ಏನಾಗುತ್ತಿದೆ ಎಂಬುದರ ಹಿರಿಯ ವೀಕ್ಷಕರಾಗಿ ಪಾಟ್ನಾಗೆ ಕಳುಹಿಸಲಾಗಿದೆ.
  2.  ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಲು ಪಕ್ಷವು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಮಲ್ಲಿಕಾರ್ಜುನ ಖರ್ಗೆ ಅವರು ನಿತೀಶ್ ಕುಮಾರ್ ಅವರಿಗೆ ಹಲವಾರು ಬಾರಿ ಕರೆ ಮಾಡಿದ್ದಾರೆ. ಆದರೆ ನಿತೀಶ್ ಕುಮಾರ್ ಅವರು ಸಭೆಯಲ್ಲಿದ್ದರು. ಬಿಹಾರ ಸಿಎಂ ಮರಳಿ ಕರೆ ಮಾಡಿದಾಗ, ಕಾಂಗ್ರೆಸ್ ಅಧ್ಯಕ್ಷರು ಕಾರ್ಯನಿರತರಾಗಿದ್ದರು, ಆದ್ದರಿಂದ ಅವರು ಇನ್ನೂ ಮಾತನಾಡಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
  3. ಶನಿವಾರ ನಡೆದ ಪಕ್ಷದ ಸಭೆಯಲ್ಲಿ ತೇಜಸ್ವಿ ಹಲವು ಅನಿರೀಕ್ಷಿತ ಬೆಳವಣಿಗೆಗಳು ನಡೆಯಬಹುದು ಎಂದು ಸೂಚಿಸಿದರು. ಮುಖ್ಯಮಂತ್ರಿಯವರು ನನ್ನೊಂದಿಗೆ ವೇದಿಕೆಯಲ್ಲಿ ಕುಳಿತು 2005 ರ ಮೊದಲು ಬಿಹಾರದಲ್ಲಿ ಏನಿತ್ತು? ಎಂದು ಕೇಳುತ್ತಿದ್ದರು, ನಾನು ಏನೂ ಪ್ರತಿಕ್ರಿಯಿಸಲಿಲ್ಲ. ಈಗ, ಹೆಚ್ಚು ಜನರು ನಮ್ಮೊಂದಿಗಿದ್ದಾರೆ. ಎರಡು ದಶಕಗಳಲ್ಲಿ ಏನು ಮಾಡದೆ ಉಳಿದಿದೆಯೋ ಅದನ್ನು ನಾವು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಉದ್ಯೋಗಗಳು, ಜಾತಿ ಜನಗಣತಿ, ಹೆಚ್ಚುತ್ತಿರುವ ಮೀಸಲಾತಿ ಇತ್ಯಾದಿ ಕಡಿಮೆ ಸಮಯದಲ್ಲಿ ಮಾಡಲ್ಪಟ್ಟಿದೆ.. ‘ಬಿಹಾರ ಮೇ ಅಭಿ ಖೇಲ್ ಹೋನಾ ಬಾಕಿ ಹೈ’ (ಬಿಹಾರದಲ್ಲಿ ಆಟ ಇನ್ನೂ ಪ್ರಾರಂಭವಾಗಿಲ್ಲ) ಎಂದು ತೇಜಸ್ವಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
  4. ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಯು ಹೊರಗೆ ಹೋಗುತ್ತಿದೆಯೇ ? ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿಲ್ಲ, ನಾನು ಅವರಿಗೆ (ಜೆಡಿ (ಯು) ನಾಯಕತ್ವಕ್ಕೆ ಪತ್ರ ಬರೆದಿದ್ದೇನೆ. ಮತ್ತು ಅವರೊಂದಿಗೆ ಮಾತನಾಡಲು ಪ್ರಯತ್ನಿಸಿದೆ. ಅವರ ಮನಸ್ಸಿನಲ್ಲಿ ಏನಿದೆ ಎಂದು ನನಗೆ ಸ್ಪಷ್ಟವಾಗಿ ತಿಳಿದಿಲ್ಲ ಎಂದು ಹೇಳಿದ್ದಾರೆ.
  5. ಬಿಹಾರ ಬಿಜೆಪಿ ಕೋರ್ ಕಮಿಟಿ ಸಭೆಯೂ ಶನಿವಾರ ನಡೆದಿದೆ. ನಿತೀಶ್ ಕುಮಾರ್ ಇನ್ನೂ ಸಿಎಂ, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
  6. ಬಿಹಾರದ ರಾಜಕೀಯ ಚಟುವಟಿಕೆಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ. “ನಾವು ಬಿಟ್ಟಿದ್ದೇವೆ ಎಂದು ಲಾಲು ಯಾದವ್ ಆಗಲೀ, ಬಿಟ್ಟು ಹೋಗುವುದಾಗಿ ನಿತೀಶ್ ಕುಮಾರ್ ಆಗಲೀ ಹೇಳಿಲ್ಲ. ಇದರ ಬಗ್ಗೆ ಬಿಜೆಪಿ ಏನು ಹೇಳಬಹುದು?” ಗಿರಿರಾಜ್ ಸಿಂಗ್ ಹೇಳಿದರು.
  7. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಅಲ್ಲಿ ಲೋಕ ಜನಶಾಂಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪವನ್ ಕೂಡ ಉಪಸ್ಥಿತರಿದ್ದರು. ಸಭೆಯ ಬಳಿಕ ಮಾತನಾಡಿದ ಚಿರಾಗ್, ನಿತೀಶ್ ಕುಮಾರ್ ಅವರು ಎನ್ ಡಿಎಗೆ ಬರುತ್ತಾರೋ ಇಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಮತ್ತು ಅವರು ಬರುತ್ತಿದ್ದರೆ ಅದರ ಸಮಯವನ್ನು ಸ್ಪಷ್ಟಪಡಿಸಬೇಕು ಎಂದಿದ್ದಾರೆ.
  8. ಇಷ್ಟೆಲ್ಲ ರಾಜಕೀಯ ಮೇಲಾಟದ ನಡುವೆ ನಿತೀಶ್ ಕುಮಾರ್ ಬಕ್ಸರ್‌ನ ಬ್ರಹ್ಮಪುರದಲ್ಲಿ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
  9. ನಿತೀಶ್ ಕುಮಾರ್ ಅವರನ್ನು ಕಾಂಗ್ರೆಸ್ ಪದೇ ಪದೇ ಅವಮಾನಿಸಿದೆ ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ. ನಿತೀಶ್ ಕುಮಾರ್ ಅವರು ಮೈತ್ರಿಕೂಟದಲ್ಲಿ ಯಾವುದೇ ಸ್ಥಾನಕ್ಕಾಗಿ ಹಾತೊರೆಯಲಿಲ್ಲ ಆದರೆ ಕಾಂಗ್ರೆಸ್ ನಾಯಕತ್ವದ ಒಂದು ವಿಭಾಗವು ಅವರನ್ನು ಅವಮಾನಿಸಿದೆ ಎಂದು ಜೆಡಿಯು ನಾಯಕ ಹೇಳಿದರು. ನಿತೀಶ್ ಕುಮಾರ್ ಅವರನ್ನು ಇಂಡಿಯಾ ಬ್ಲಾಕ್‌ನ ಸಂಚಾಲಕರನ್ನಾಗಿ ಹೆಸರಿಸಲಾಯಿತು ಆದರೆ ಅವರು ಅದನ್ನು ತಿರಸ್ಕರಿಸಿದರು.
  10. 79 ಶಾಸಕರನ್ನು ಹೊಂದಿರುವ ಆರ್‌ಜೆಡಿ ಬಿಹಾರ ವಿಧಾನಸಭೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿದೆ. ಜೆಡಿ(ಯು) ಹೊರತುಪಡಿಸಿ ಕಾಂಗ್ರೆಸ್ ಮತ್ತು ಮೂರು ಎಡಪಕ್ಷಗಳ ‘ಮಹಾಘಟಬಂಧನ್’ ಚುಕ್ಕಾಣಿ ಹಿಡಿದಿದೆ. ಜೆಡಿಯು ಮಹಾಘಟಬಂಧನ್‌ನಿಂದ ಹಿಂದೆ ಸರಿದರೆ, ಅದು ಬಹುಮತಕ್ಕೆ ಎಂಟು ಸದಸ್ಯರ ಕೊರತೆಯಾಗುತ್ತದೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ