AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲೇಶ್ ಯಾದವ್ ಬೆಂಗಾವಲು ವಾಹನ ಅಪಘಾತ; ಹಲವರಿಗೆ ಗಾಯ

ಅಖಿಲೇಶ್ ಹರ್ದೋಯ್‌ನ ಹರ್ಪಾಲ್‌ಪುರದ ಬೈಥಾಪುರ್ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದರು. ಫರ್ಹತ್ ನಗರ ರೈಲ್ವೆ ಕ್ರಾಸಿಂಗ್ ಬಳಿ, ತಿರುವಿನಲ್ಲಿ ವಾಹನವೊಂದು ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದು ಹಿಂಬಾಲಿಸಿದ ಇತರ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ

ಅಖಿಲೇಶ್ ಯಾದವ್ ಬೆಂಗಾವಲು ವಾಹನ ಅಪಘಾತ; ಹಲವರಿಗೆ ಗಾಯ
ಅಖಿಲೇಶ್ ಯಾದವ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 03, 2023 | 8:30 PM

Share

ಶುಕ್ರವಾರ ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರ ಬೆಂಗಾವಲು ವಾಹನ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಅಪಘಾತಕ್ಕೊಳಗಾಗಿದೆ(Accident). ಕನಿಷ್ಠ ಆರು ವಾಹನಗಳು ಹಾನಿಗೊಳಗಾಗಿದ್ದು, ಅಖಿಲೇಶ್​​ಗೆ ಗಾಯಗಳಾಗಿಲ್ಲ ಎಂದು ಲೈವ್ ಹಿಂದೂಸ್ತಾನ್ ವರದಿ ಮಾಡಿದೆ. ಅಖಿಲೇಶ್ ಹರ್ದೋಯ್‌ನ ಹರ್ಪಾಲ್‌ಪುರದ ಬೈಥಾಪುರ್ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದರು. ಫರ್ಹತ್ ನಗರ ರೈಲ್ವೆ ಕ್ರಾಸಿಂಗ್ ಬಳಿ, ತಿರುವಿನಲ್ಲಿ ವಾಹನವೊಂದು ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದು ಹಿಂಬಾಲಿಸಿದ ಇತರ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ.

ಅಖಿಲೇಶ್ ಯಾದವ್ ಅವರನ್ನು ಹಿಂಬಾಲಿಸಿಕೊಂಡು ಬಂದ ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಅವರ ಕಾರಿಗೆ ಯಾವುದೇ ಹಾನಿಯಾಗಿಲ್ಲ. “ಇದು ಹಠಾತ್ತನೆ ಸಂಭವಿಸಿದೆ. ಅಪಘಾತ ಹೇಗೆ ಸಂಭವಿಸಿತು ಎಂದು ನಮಗೆ ತಿಳಿದಿಲ್ಲ. ಕೆಲವು ಏಳು-ಎಂಟು ಕಾರುಗಳು ಅಪಘಾತಕ್ಕೊಳಗಾಗಿವೆ ಎಂದು ಗಾಯಗೊಂಡ ವ್ಯಕ್ತಿ ನಸೀಮ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಹಾನಿಗೊಳಗಾದ ಕಾರನ್ನು ತೋರಿಸುವ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ವಿಡಿಯೋಗಳಲ್ಲಿ ಕಾಣುವಂತೆ ಹಿಂದಿನಿಂದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದವು. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಖಿಲೇಶ್ ಅವರನ್ನು ಸುರಕ್ಷಿತವಾಗಿ  ಗಮ್ಯಸ್ಥಾನಕ್ಕೆ ಕರೆದೊಯ್ಯಲಾಯಿತು.

ಇದನ್ನೂ ಓದಿ:ನಾವು ಲಡಾಖ್ ಜನರು ಜಮ್ಮು ಕಾಶ್ಮೀರ ರಾಜ್ಯದ ಭಾಗವಾಗಿದ್ದಾಗ ಉತ್ತಮವಾಗಿದ್ದೆವು: ಸೋನಮ್ ವಾಂಗ್ಚುಕ್

ಗಾಯಗೊಂಡ ಸಮಾಜವಾದಿ ಪಕ್ಷದ  ಕಾರ್ಯಕರ್ತರಾದ ನಸೀಮ್ ಖಾನ್, ಮುನೇಂದ್ರ ಯಾದವ್, ಮತ್ತು ವಾಸಿಂ ವರ್ಸಿ, 60, ಅವರನ್ನು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಇನ್ನೋರ್ವ  ಕಾರ್ಯಕರ್ತ ಕಪ್ತಾನ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಲ್ಲಿ ಮುಖ್ಯ ಬೆಂಗಾವಲು ಪಡೆಯ ವಾಹನಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಇನ್ಸ್‌ಪೆಕ್ಟರ್ ಶೇಷ್ನಾಥ್ ಸಿಂಗ್ ಹೇಳಿದ್ದಾರೆ.

ಅಪಘಾತದಲ್ಲಿ ಏಳಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ ಎಂದು ಹರ್ದೋಯ್ ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಯಾದವ್ ತಿಳಿಸಿದ್ದಾರೆ. “ಅಖಿಲೇಶ್ ಬೆಂಗಾವಲು ಪಡೆಯ ಹಿಂದೆ ವೇಗವಾಗಿ ಚಾಲನೆ ಮಾಡುತ್ತಿದ್ದಾಗ ಒಂದು ಕಾರು  ಒಂದು ನಿಯಂತ್ರಣ ಕಳೆದುಕೊಂಡು ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Fri, 3 February 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!