AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಾಂ ಸಿಂಗ್ ಯಾದವ್​ ಆಸ್ಪತ್ರೆಗೆ ದಾಖಲು..

Mulayam Singh Yadav: ಮುಲಾಯಾಂ ಸಿಂಗ್​ ಯಾದವ್​ ಕಳೆದ ಕೆಲವು ವರ್ಷಗಳಿಂದಲೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಕಳೆದವರ್ಷವೂ ಕೂಡ ಅವರ ಯುರಿನರಿ ಟ್ರ್ಯಾಕ್​​ನಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಾಂ ಸಿಂಗ್ ಯಾದವ್​ ಆಸ್ಪತ್ರೆಗೆ ದಾಖಲು..
ಮುಲಾಯಾಂ ಸಿಂಗ್ ಯಾದವ್​
TV9 Web
| Edited By: |

Updated on: Jul 01, 2021 | 1:30 PM

Share

ದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ, ವರಿಷ್ಠ ಮುಲಾಯಾಂ ಸಿಂಗ್​ ಯಾದವ್​ ಇಂದು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 81ವರ್ಷದ ಮುಲಾಯಾಂ ಸಿಂಗ್​ ಯಾದವ್​ ಕೆಲವು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು ಗುರ್​ಗಾಂವ್​ನ ಮೇದಾಂತಾ ಆಸ್ಪತ್ರೆಗೆ ಅವರನ್ನು ಅಡ್ಮಿಟ್ ಮಾಡಲಾಗಿದೆ. ಆಸ್ಪತ್ರೆಯಿಂದ ಯಾವುದೇ ಹೆಲ್ತ್​ ಬುಲೆಟಿನ್​ ಬಿಡುಗಡೆಯಾಗಿಲ್ಲ.

ಮುಲಾಯಾಂ ಸಿಂಗ್ ಯಾದವ್​ ಸಮಾಜವಾದಿ ಪಕ್ಷದ ಸಂಸ್ಥಾಪಕರಾಗಿದ್ದು, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. 1996ರ ಜೂ.1ರಿಂದ 1998ರ ಮಾರ್ಚ್​ 19ರವರೆಗೆ ಕೇಂದ್ರ ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಮುಲಾಯಾಂ ಸಿಂಗ್​ ಯಾದವ್​ ಕಳೆದ ಕೆಲವು ವರ್ಷಗಳಿಂದಲೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಕಳೆದವರ್ಷವೂ ಕೂಡ ಅವರ ಯುರಿನರಿ ಟ್ರ್ಯಾಕ್​​ನಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅದಾದ ಸ್ವಲ್ಪ ದಿನಗಳ ಬಳಿಕ ಹೊಟ್ಟೆ ಊದಿಕೊಂಡು, ನೋವಿನಿಂದ ಬಳಲುತ್ತಿದ್ದ ಅವರನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಮುಲಾಯಾಂ ಸಿಂಗ್​ ಯಾದವ್​ ದೊಡ್ಡ ಕರುಳಿನಲ್ಲಿ ಸಮಸ್ಯೆಯಿದೆ ಎಂದು ಆಗ ವೈದ್ಯರು ಹೇಳಿದ್ದರು. ಕೊಲೊನೊಸ್ಕೊಪಿ ಮೂಲಕ ಕರುಳನ್ನು ಸ್ವಚ್ಛಗೊಳಿಸಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಮಾಡಲಾಗಿತ್ತು. ನಂತರ ಆರೋಗ್ಯದಲ್ಲಿ ಸುಧಾರಣೆಯೂ ಕಾಣಿಸಿತ್ತು. ಮುಲಾಯಾಂ ಸಿಂಗ್​ ಯಾದವ್​ ಆರೋಗ್ಯ ವಿಚಾರಿಸಲು ಸಮಾಜವಾದಿ ಪಕ್ಷದ ಗಣ್ಯರು ಮೇದಾಂತಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇವರ ಪುತ್ರ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್​ ಸದ್ಯ ಮುಂದಿನ ಚುನಾವಣೆ ಸಿದ್ಧತೆಯಲ್ಲಿದ್ದಾರೆ. ಉತ್ತರ ಪ್ರದೇಶದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಾರಿ ಹೇಗಾದರೂ ಅಧಿಕಾರಕ್ಕೆ ಬರಬೇಕು ಎಂಬ ಪ್ರಯತ್ನದಲ್ಲಿದ್ದಾರೆ. ಇನ್ನು ಚುನಾವಣೆಯಲ್ಲಿ ಯಾವುದೇ ದೊಡ್ಡ ಪಕ್ಷಗಳೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Jaggesh’s Son Car Accident: ನಟ ಜಗ್ಗೇಶ್​ ಪುತ್ರ ಗುರುರಾಜ್​ ಇದ್ದ ಕಾರು ಅಪಘಾತ; ಹೈದರಾಬಾದ್​ ರಸ್ತೆಯಲ್ಲಿ ಅವಘಡ

Samajwadi Party Founder Mulayam Singh Yadav Hospitalised In Gurgaon

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ