AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಾಂ ಸಿಂಗ್ ಯಾದವ್​ ಆಸ್ಪತ್ರೆಗೆ ದಾಖಲು..

Mulayam Singh Yadav: ಮುಲಾಯಾಂ ಸಿಂಗ್​ ಯಾದವ್​ ಕಳೆದ ಕೆಲವು ವರ್ಷಗಳಿಂದಲೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಕಳೆದವರ್ಷವೂ ಕೂಡ ಅವರ ಯುರಿನರಿ ಟ್ರ್ಯಾಕ್​​ನಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಾಂ ಸಿಂಗ್ ಯಾದವ್​ ಆಸ್ಪತ್ರೆಗೆ ದಾಖಲು..
ಮುಲಾಯಾಂ ಸಿಂಗ್ ಯಾದವ್​
TV9 Web
| Edited By: |

Updated on: Jul 01, 2021 | 1:30 PM

Share

ದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ, ವರಿಷ್ಠ ಮುಲಾಯಾಂ ಸಿಂಗ್​ ಯಾದವ್​ ಇಂದು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 81ವರ್ಷದ ಮುಲಾಯಾಂ ಸಿಂಗ್​ ಯಾದವ್​ ಕೆಲವು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು ಗುರ್​ಗಾಂವ್​ನ ಮೇದಾಂತಾ ಆಸ್ಪತ್ರೆಗೆ ಅವರನ್ನು ಅಡ್ಮಿಟ್ ಮಾಡಲಾಗಿದೆ. ಆಸ್ಪತ್ರೆಯಿಂದ ಯಾವುದೇ ಹೆಲ್ತ್​ ಬುಲೆಟಿನ್​ ಬಿಡುಗಡೆಯಾಗಿಲ್ಲ.

ಮುಲಾಯಾಂ ಸಿಂಗ್ ಯಾದವ್​ ಸಮಾಜವಾದಿ ಪಕ್ಷದ ಸಂಸ್ಥಾಪಕರಾಗಿದ್ದು, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. 1996ರ ಜೂ.1ರಿಂದ 1998ರ ಮಾರ್ಚ್​ 19ರವರೆಗೆ ಕೇಂದ್ರ ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಮುಲಾಯಾಂ ಸಿಂಗ್​ ಯಾದವ್​ ಕಳೆದ ಕೆಲವು ವರ್ಷಗಳಿಂದಲೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಕಳೆದವರ್ಷವೂ ಕೂಡ ಅವರ ಯುರಿನರಿ ಟ್ರ್ಯಾಕ್​​ನಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅದಾದ ಸ್ವಲ್ಪ ದಿನಗಳ ಬಳಿಕ ಹೊಟ್ಟೆ ಊದಿಕೊಂಡು, ನೋವಿನಿಂದ ಬಳಲುತ್ತಿದ್ದ ಅವರನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಮುಲಾಯಾಂ ಸಿಂಗ್​ ಯಾದವ್​ ದೊಡ್ಡ ಕರುಳಿನಲ್ಲಿ ಸಮಸ್ಯೆಯಿದೆ ಎಂದು ಆಗ ವೈದ್ಯರು ಹೇಳಿದ್ದರು. ಕೊಲೊನೊಸ್ಕೊಪಿ ಮೂಲಕ ಕರುಳನ್ನು ಸ್ವಚ್ಛಗೊಳಿಸಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಮಾಡಲಾಗಿತ್ತು. ನಂತರ ಆರೋಗ್ಯದಲ್ಲಿ ಸುಧಾರಣೆಯೂ ಕಾಣಿಸಿತ್ತು. ಮುಲಾಯಾಂ ಸಿಂಗ್​ ಯಾದವ್​ ಆರೋಗ್ಯ ವಿಚಾರಿಸಲು ಸಮಾಜವಾದಿ ಪಕ್ಷದ ಗಣ್ಯರು ಮೇದಾಂತಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇವರ ಪುತ್ರ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್​ ಸದ್ಯ ಮುಂದಿನ ಚುನಾವಣೆ ಸಿದ್ಧತೆಯಲ್ಲಿದ್ದಾರೆ. ಉತ್ತರ ಪ್ರದೇಶದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಾರಿ ಹೇಗಾದರೂ ಅಧಿಕಾರಕ್ಕೆ ಬರಬೇಕು ಎಂಬ ಪ್ರಯತ್ನದಲ್ಲಿದ್ದಾರೆ. ಇನ್ನು ಚುನಾವಣೆಯಲ್ಲಿ ಯಾವುದೇ ದೊಡ್ಡ ಪಕ್ಷಗಳೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Jaggesh’s Son Car Accident: ನಟ ಜಗ್ಗೇಶ್​ ಪುತ್ರ ಗುರುರಾಜ್​ ಇದ್ದ ಕಾರು ಅಪಘಾತ; ಹೈದರಾಬಾದ್​ ರಸ್ತೆಯಲ್ಲಿ ಅವಘಡ

Samajwadi Party Founder Mulayam Singh Yadav Hospitalised In Gurgaon

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ