ರಾಜೀವ್ ಗಾಂಧಿ ಮೃತದೇಹದ ಒಂದು ಚೂರೂ ಸಿಗಲಿಲ್ಲ; ವಿವಾದಕ್ಕೀಡಾದ ಆಜಂ ಖಾನ್ ಹೇಳಿಕೆ

ತಮ್ಮ ರಾಜಕೀಯ ಜೀವನದ ಅನುಭವ ಮತ್ತು ಆಡಳಿತದ ಸಂಪೂರ್ಣ ವಸ್ಥೆಯ ಬಗ್ಗೆ ಪ್ರಸ್ತಾಪಿಸಿದ ಅವರು, ಇದು 40-42 ವರ್ಷಗಳ ರಾಜಕೀಯ ಜೀವನದ ಅನುಭವ. ರೋಟಿಯನ್ನು ಯಾವಾಗ ಮಗಚಿ ಹಾಕಲಾಗುತ್ತದೆ ಎಂಬುದು ನಿಮಗೆ ಗೊತ್ತಾಗುವುದಿಲ್ಲ.ಅಧಿಕಾರಿಗಳು ಮತ್ತು ಪೋಲೀಸರು ಬದಲಾಗುತ್ತಾರೆ

ರಾಜೀವ್ ಗಾಂಧಿ ಮೃತದೇಹದ ಒಂದು ಚೂರೂ ಸಿಗಲಿಲ್ಲ; ವಿವಾದಕ್ಕೀಡಾದ ಆಜಂ ಖಾನ್ ಹೇಳಿಕೆ
ಆಜಂ ಖಾನ್
Follow us
|

Updated on: May 01, 2023 | 6:04 PM

ದೇವರ ಪ್ರತಿಕಾರ ಎಷ್ಟು ತೀವ್ರವಾಗಿರುತ್ತದೆ ಎಂದರೆ ಒಂದು ಕಾಲದಲ್ಲಿ ಅತಿ ಹೆಚ್ಚು ಸಂಸದರನ್ನು ಹೊಂದಿದ್ದ ರಾಜೀವ್ ಗಾಂಧಿಯ(Rajiv Gandhi) ಮೃತದೇಹದ ಒಂದು ತುಣುಕೂ ಸಿಗಲಿಲ್ಲ ಎಂದು ಹೇಳುವ ಮೂಲಕ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ (Azam Khan) ವಿವಾದಕ್ಕೀಡಾಗಿದ್ದಾರೆ. ರಾಂಪುರ (Rampur) ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಖಾನ್ ಈ ರೀತಿ ಹೇಳಿದ್ದಾರೆ. ನಾನು ಇಂದಿರಾಗಾಂಧಿ ಅವರ ಕಾಲವನ್ನು ನೋಡಿದ್ದೇನೆ. ರಾಜೀವ್ ಗಾಂಧಿ ಅವರ ಸರ್ಕಾರದಲ್ಲಿ ಹೆಚ್ಚಿನ ಸಂಸದರಿದ್ದರು ಆದರೆ ಅವರ ದೇಹದ ಒಂದು ತುಂಡು ಕೂಡಾ ಸಿಗಲಿಲ್ಲ ನೋಡಿ. ಸಂಜಯ್ ಗಾಂಧಿಯಂತಹ ಜನರು ಆಕಾಶದಲ್ಲಿ ಹಾರುತ್ತಾರೆ. ಅವರು ತುಂಡುಗಳಾಗಿಯೇ ಸಿಕ್ಕಿದರು. ದೊಡ್ಡ ಗೆರೆಯನ್ನು ಗುರುತಿಸಲಾಗುವುದು ಎಂದು ಹೇಳಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ರಾಜಕೀಯ ಜೀವನದ ಅನುಭವ ಮತ್ತು ಆಡಳಿತದ ಸಂಪೂರ್ಣ ವಸ್ಥೆಯ ಬಗ್ಗೆ ಪ್ರಸ್ತಾಪಿಸಿದ ಅವರು, ಇದು 40-42 ವರ್ಷಗಳ ರಾಜಕೀಯ ಜೀವನದ ಅನುಭವ. ರೋಟಿಯನ್ನು ಯಾವಾಗ ಮಗಚಿ ಹಾಕಲಾಗುತ್ತದೆ ಎಂಬುದು ನಿಮಗೆ ಗೊತ್ತಾಗುವುದಿಲ್ಲ.ಅಧಿಕಾರಿಗಳು ಮತ್ತು ಪೋಲೀಸರು ಬದಲಾಗುತ್ತಾರೆ, ನಿಮ್ಮ ಮನೆಯ ಬಾಗಿಲು ಒಡೆದ ಮತ್ತು ನಿಮ್ಮನ್ನು ಎಡವಿದ ಪೊಲೀಸರು ಇಲ್ಲಿ ನಿಂತು ಈ ಬೂಟಿನಿಂದ ನಿಮಗೆ ಸೆಲ್ಯೂಟ್ ಮಾಡುತ್ತಾರೆ ಎಂದು ಖಾನ್ ಹೇಳಿದ್ದಾರೆ.

ರಾಂಪುರ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಮಾಜವಾದಿ ಪಕ್ಷದ ಅಭ್ಯರ್ಥಿ ಫಾತಿಮಾ ಝಬಿ ಪರ ಖಾನ್ ಪ್ರಚಾರ ನಡೆಸುತ್ತಿದ್ದರವರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ 2017 ರಲ್ಲಿ ಅಧಿಕಾರಕ್ಕೆ ಬಂದ ನಂತರ ರಾಂಪುರದ ಮಾಜಿ ಶಾಸಕ ವಿರುದ್ಧ 90 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ದ್ವೇಷ ಭಾಷಣದ ಪ್ರಕರಣದಲ್ಲಿ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅಕ್ಟೋಬರ್‌ನಲ್ಲಿ ರಾಜ್ಯ ಅಸೆಂಬ್ಲಿ ಸೆಕ್ರೆಟರಿಯೇಟ್ ಖಾನ್ ಅವರನ್ನು ಸದನದಿಂದ ಅನರ್ಹಗೊಳಿಸುವುದಾಗಿ ಘೋಷಿಸಿತು. 2019 ರ ಏಪ್ರಿಲ್‌ನಲ್ಲಿ ರಾಮ್‌ಪುರದಲ್ಲಿ ನಿಯೋಜಿಸಲಾದ ಆಡಳಿತಾತ್ಮಕ ಅಧಿಕಾರಿಗಳು, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ಚುನಾವಣಾ ಸಭೆಯ ಸಂದರ್ಭದಲ್ಲಿ ಗಂಭೀರ ಆರೋಪಗಳನ್ನು ಹೊರಿಸಿದ್ದಕ್ಕೆ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: 1000 ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆ ಅಂತಾರೆ, ನಾನೇನು ಶಿಲಾಜಿತ್​​ನಿಂದ ಮಾಡಿದ ರೋಟಿ ತಿಂದಿದ್ದೇನಾ?: ಬ್ರಿಜ್ ಭೂಷಣ್ ವಿವಾದಾತ್ಮಕ ಹೇಳಿಕೆ

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಮಿಲಾಕ್ ಕೊತ್ವಾಲಿ ಪ್ರದೇಶದ ಖತಾನಗಾರಿಯಾ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಉದ್ರೇಕಕಾರಿ ಭಾಷಣಗಳನ್ನು ಮಾಡಿದ್ದಕ್ಕಾಗಿಯೂ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು, ಅಲಹಾಬಾದ್ ಹೈಕೋರ್ಟ್ ಮೇ 2022 ರಲ್ಲಿ ವಕ್ಫ್ ಬೋರ್ಡ್ ಆಸ್ತಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಪ್ರಕರಣದಲ್ಲಿ ಅಜಂ ಖಾನ್‌ಗೆ ಮಧ್ಯಂತರ ಜಾಮೀನು ನೀಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’