Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಮೃತದೇಹದ ಒಂದು ಚೂರೂ ಸಿಗಲಿಲ್ಲ; ವಿವಾದಕ್ಕೀಡಾದ ಆಜಂ ಖಾನ್ ಹೇಳಿಕೆ

ತಮ್ಮ ರಾಜಕೀಯ ಜೀವನದ ಅನುಭವ ಮತ್ತು ಆಡಳಿತದ ಸಂಪೂರ್ಣ ವಸ್ಥೆಯ ಬಗ್ಗೆ ಪ್ರಸ್ತಾಪಿಸಿದ ಅವರು, ಇದು 40-42 ವರ್ಷಗಳ ರಾಜಕೀಯ ಜೀವನದ ಅನುಭವ. ರೋಟಿಯನ್ನು ಯಾವಾಗ ಮಗಚಿ ಹಾಕಲಾಗುತ್ತದೆ ಎಂಬುದು ನಿಮಗೆ ಗೊತ್ತಾಗುವುದಿಲ್ಲ.ಅಧಿಕಾರಿಗಳು ಮತ್ತು ಪೋಲೀಸರು ಬದಲಾಗುತ್ತಾರೆ

ರಾಜೀವ್ ಗಾಂಧಿ ಮೃತದೇಹದ ಒಂದು ಚೂರೂ ಸಿಗಲಿಲ್ಲ; ವಿವಾದಕ್ಕೀಡಾದ ಆಜಂ ಖಾನ್ ಹೇಳಿಕೆ
ಆಜಂ ಖಾನ್
Follow us
ರಶ್ಮಿ ಕಲ್ಲಕಟ್ಟ
|

Updated on: May 01, 2023 | 6:04 PM

ದೇವರ ಪ್ರತಿಕಾರ ಎಷ್ಟು ತೀವ್ರವಾಗಿರುತ್ತದೆ ಎಂದರೆ ಒಂದು ಕಾಲದಲ್ಲಿ ಅತಿ ಹೆಚ್ಚು ಸಂಸದರನ್ನು ಹೊಂದಿದ್ದ ರಾಜೀವ್ ಗಾಂಧಿಯ(Rajiv Gandhi) ಮೃತದೇಹದ ಒಂದು ತುಣುಕೂ ಸಿಗಲಿಲ್ಲ ಎಂದು ಹೇಳುವ ಮೂಲಕ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ (Azam Khan) ವಿವಾದಕ್ಕೀಡಾಗಿದ್ದಾರೆ. ರಾಂಪುರ (Rampur) ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಖಾನ್ ಈ ರೀತಿ ಹೇಳಿದ್ದಾರೆ. ನಾನು ಇಂದಿರಾಗಾಂಧಿ ಅವರ ಕಾಲವನ್ನು ನೋಡಿದ್ದೇನೆ. ರಾಜೀವ್ ಗಾಂಧಿ ಅವರ ಸರ್ಕಾರದಲ್ಲಿ ಹೆಚ್ಚಿನ ಸಂಸದರಿದ್ದರು ಆದರೆ ಅವರ ದೇಹದ ಒಂದು ತುಂಡು ಕೂಡಾ ಸಿಗಲಿಲ್ಲ ನೋಡಿ. ಸಂಜಯ್ ಗಾಂಧಿಯಂತಹ ಜನರು ಆಕಾಶದಲ್ಲಿ ಹಾರುತ್ತಾರೆ. ಅವರು ತುಂಡುಗಳಾಗಿಯೇ ಸಿಕ್ಕಿದರು. ದೊಡ್ಡ ಗೆರೆಯನ್ನು ಗುರುತಿಸಲಾಗುವುದು ಎಂದು ಹೇಳಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ರಾಜಕೀಯ ಜೀವನದ ಅನುಭವ ಮತ್ತು ಆಡಳಿತದ ಸಂಪೂರ್ಣ ವಸ್ಥೆಯ ಬಗ್ಗೆ ಪ್ರಸ್ತಾಪಿಸಿದ ಅವರು, ಇದು 40-42 ವರ್ಷಗಳ ರಾಜಕೀಯ ಜೀವನದ ಅನುಭವ. ರೋಟಿಯನ್ನು ಯಾವಾಗ ಮಗಚಿ ಹಾಕಲಾಗುತ್ತದೆ ಎಂಬುದು ನಿಮಗೆ ಗೊತ್ತಾಗುವುದಿಲ್ಲ.ಅಧಿಕಾರಿಗಳು ಮತ್ತು ಪೋಲೀಸರು ಬದಲಾಗುತ್ತಾರೆ, ನಿಮ್ಮ ಮನೆಯ ಬಾಗಿಲು ಒಡೆದ ಮತ್ತು ನಿಮ್ಮನ್ನು ಎಡವಿದ ಪೊಲೀಸರು ಇಲ್ಲಿ ನಿಂತು ಈ ಬೂಟಿನಿಂದ ನಿಮಗೆ ಸೆಲ್ಯೂಟ್ ಮಾಡುತ್ತಾರೆ ಎಂದು ಖಾನ್ ಹೇಳಿದ್ದಾರೆ.

ರಾಂಪುರ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಮಾಜವಾದಿ ಪಕ್ಷದ ಅಭ್ಯರ್ಥಿ ಫಾತಿಮಾ ಝಬಿ ಪರ ಖಾನ್ ಪ್ರಚಾರ ನಡೆಸುತ್ತಿದ್ದರವರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ 2017 ರಲ್ಲಿ ಅಧಿಕಾರಕ್ಕೆ ಬಂದ ನಂತರ ರಾಂಪುರದ ಮಾಜಿ ಶಾಸಕ ವಿರುದ್ಧ 90 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ದ್ವೇಷ ಭಾಷಣದ ಪ್ರಕರಣದಲ್ಲಿ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅಕ್ಟೋಬರ್‌ನಲ್ಲಿ ರಾಜ್ಯ ಅಸೆಂಬ್ಲಿ ಸೆಕ್ರೆಟರಿಯೇಟ್ ಖಾನ್ ಅವರನ್ನು ಸದನದಿಂದ ಅನರ್ಹಗೊಳಿಸುವುದಾಗಿ ಘೋಷಿಸಿತು. 2019 ರ ಏಪ್ರಿಲ್‌ನಲ್ಲಿ ರಾಮ್‌ಪುರದಲ್ಲಿ ನಿಯೋಜಿಸಲಾದ ಆಡಳಿತಾತ್ಮಕ ಅಧಿಕಾರಿಗಳು, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ಚುನಾವಣಾ ಸಭೆಯ ಸಂದರ್ಭದಲ್ಲಿ ಗಂಭೀರ ಆರೋಪಗಳನ್ನು ಹೊರಿಸಿದ್ದಕ್ಕೆ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: 1000 ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆ ಅಂತಾರೆ, ನಾನೇನು ಶಿಲಾಜಿತ್​​ನಿಂದ ಮಾಡಿದ ರೋಟಿ ತಿಂದಿದ್ದೇನಾ?: ಬ್ರಿಜ್ ಭೂಷಣ್ ವಿವಾದಾತ್ಮಕ ಹೇಳಿಕೆ

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಮಿಲಾಕ್ ಕೊತ್ವಾಲಿ ಪ್ರದೇಶದ ಖತಾನಗಾರಿಯಾ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಉದ್ರೇಕಕಾರಿ ಭಾಷಣಗಳನ್ನು ಮಾಡಿದ್ದಕ್ಕಾಗಿಯೂ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು, ಅಲಹಾಬಾದ್ ಹೈಕೋರ್ಟ್ ಮೇ 2022 ರಲ್ಲಿ ವಕ್ಫ್ ಬೋರ್ಡ್ ಆಸ್ತಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಪ್ರಕರಣದಲ್ಲಿ ಅಜಂ ಖಾನ್‌ಗೆ ಮಧ್ಯಂತರ ಜಾಮೀನು ನೀಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ