AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಪತ್ರ ಎಣಿಕೆಯಲ್ಲಿ ಎಸ್​​ಪಿ 309 ಸ್ಥಾನ ಗೆದ್ದಿತ್ತು, ಆದರೆ ಇವಿಎಂ ಎಣಿಕೆ ಮಾಡಿದಾಗ ಸೋತಿತು: ಇವಿಎಂ ಬಗ್ಗೆ ಪ್ರಶ್ನಿಸಿದ ಸ್ವಾಮಿ ಪ್ರಸಾದ್ ಮೌರ್ಯ

ಮತಪತ್ರ ಎಣಿಕೆಯಲ್ಲಿ ಸಮಾಜವಾದಿ ಪಕ್ಷ 304 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಇವಿಎಂನಿಂದ ಮತ ಎಣಿಕೆ ನಡೆದಾಗ ಬಿಜೆಪಿ ಗೆಲುವು ಸಾಧಿಸಿದೆ. ಇದರರ್ಥ ಇದರಲ್ಲಿ ಕೆಲವು ಮೋಸ ಇದೆ.

ಮತಪತ್ರ ಎಣಿಕೆಯಲ್ಲಿ ಎಸ್​​ಪಿ 309 ಸ್ಥಾನ ಗೆದ್ದಿತ್ತು, ಆದರೆ ಇವಿಎಂ ಎಣಿಕೆ ಮಾಡಿದಾಗ ಸೋತಿತು: ಇವಿಎಂ ಬಗ್ಗೆ ಪ್ರಶ್ನಿಸಿದ ಸ್ವಾಮಿ ಪ್ರಸಾದ್ ಮೌರ್ಯ
ಸ್ವಾಮಿ ಪ್ರಸಾದ್ ಮೌರ್ಯ
TV9 Web
| Edited By: |

Updated on:Mar 14, 2022 | 5:38 PM

Share

ಲಖನೌ: ಯೋಗಿ ಆದಿತ್ಯನಾಥ ಸರ್ಕಾರದ ಮಾಜಿ ಸಚಿವ ಮತ್ತು ಸಮಾಜವಾದಿ ಪಕ್ಷದ (Samajwadi Party) ನಾಯಕ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) ಅವರು 2022 ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸೋತ ಕೆಲವು ದಿನಗಳ ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಫಾಜಿಲ್‌ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಸ್‌ಪಿ ನಾಯಕ ಈ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.  “ಮತಪತ್ರ ಎಣಿಕೆಯಲ್ಲಿ ಸಮಾಜವಾದಿ ಪಕ್ಷ 304 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಇವಿಎಂನಿಂದ ಮತ ಎಣಿಕೆ ನಡೆದಾಗ ಬಿಜೆಪಿ ಗೆಲುವು ಸಾಧಿಸಿದೆ. ಇದರರ್ಥ ಇದರಲ್ಲಿ ಕೆಲವು ಮೋಸ ಇದೆ ಎಂದು ಮೌರ್ಯ ಟ್ವೀಟ್ ಮಾಡಿದ್ದಾರೆ.   ಯೋಗಿ ಆದಿತ್ಯನಾಥ ಸಂಪುಟದ ಮಾಜಿ ಸಚಿವ ಮೌರ್ಯ, ಯೋಗಿ ಸರ್ಕಾರದಲ್ಲಿ ಹಿಂದುಳಿದವರು ಮತ್ತು ದಲಿತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಚುನಾವಣೆಗೆ ಕೆಲವು ದಿನಗಳ ಮೊದಲು ಬಂಡಾಯವೆದ್ದು ಸಮಾಜವಾದಿ ಪಕ್ಷಕ್ಕೆ ಸೇರಿದ್ದರು. ಕುಶಿನಗರದ ಪದ್ರೌನಾ ಕ್ಷೇತ್ರದಿಂದ ಮೂರು ಬಾರಿ ಹಾಲಿ ಶಾಸಕರಾಗಿದ್ದ ಮೌರ್ಯ ಈ ಬಾರಿ ಫಾಜಿಲ್‌ನಗರದಿಂದ ಸ್ಪರ್ಧಿಸಿದ್ದರು. ಮೌರ್ಯ ಅವರನ್ನು ಬಿಜೆಪಿಯ ಸುರೇಂದ್ರ ಕುಮಾರ್ ಕುಶ್ವಾಹ ಅವರು 45,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು.

ಬಿಜೆಪಿ ತನ್ನ ಮೈತ್ರಿಗಳೊಂದಿಗೆ 273 ವಿಧಾನಸಭಾ ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿರುವವರು ಪ್ರತಿ ಐದು ವರ್ಷಗಳಿಗೊಮ್ಮೆ ಯುಪಿ ಜನರಿಂದ ಬದಲಾಗುತ್ತಾರೆ ಎಂಬ ಅಪಹಾಸ್ಯವನ್ನು ಮುರಿಯಿತು. 2017ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 320ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷದ ಮೈತ್ರಿಕೂಟ 47 ಸ್ಥಾನಗಳಿಂದ 125 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

ಏತನ್ಮಧ್ಯೆ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲು ಅಜಂಗಢದಿಂದ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಔಪಚಾರಿಕವಾಗಿ ಸ್ಥಾನವನ್ನು ಬಿಟ್ಟುಕೊಡಲು ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಎಸ್ಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಆಲೋಚನೆ ಸಮಾಜವಾದಿ ಪಕ್ಷಕ್ಕಿದೆ ಎಂಬ ವದಂತಿಗಳು ಹರಿದಾಡುತ್ತಿದೆ.

ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಕಣಕ್ಕಿಳಿಸುವ ಆಲೋಚನೆಯನ್ನು ಅಖಿಲೇಶ್‌ಗೆ ನಿಕಟವಾಗಿರುವ ಹಿರಿಯ ನಾಯಕರೊಬ್ಬರು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದಲ್ಲಿ ಯಾದವ್ ಅಲ್ಲದ ಒಬಿಸಿಗಳಿರುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ, ಉತ್ತರ ಪ್ರದೇಶದ ಮಾಜಿ ಸಿಎಂ ಮೌರ್ಯ ಅವರೊಂದಿಗೆ ಭಾನುವಾರ ಸಂಜೆ ಸಭೆ ನಡೆಸಿದ ನಂತರ ಪಕ್ಷದೊಳಗೆ, ಎಸ್‌ಪಿ ಮುಖ್ಯಸ್ಥ ಗಂಭೀರ ಚಿಂತನೆ ನಡೆಸುತ್ತಾರೆ ಎಂಬ ಊಹಾಪೋಹಗಳು ವೇಗ ಪಡೆದುಕೊಂಡವು.

ಇದನ್ನೂ ಓದಿ: ವಿಮಾನ ನಿಲ್ದಾಣಗಳಲ್ಲಿ ಸಿಖ್ ಸಿಬ್ಬಂದಿ ಕಿರ್ಪಾನ್ ಧರಿಸುವುದನ್ನು ನಿರ್ಬಂಧಿಸುವ ಆದೇಶ ಮಾರ್ಪಡಿಸಿದ ಕೇಂದ್ರ

Published On - 5:32 pm, Mon, 14 March 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ