AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಪತ್ರ ಎಣಿಕೆಯಲ್ಲಿ ಎಸ್​​ಪಿ 309 ಸ್ಥಾನ ಗೆದ್ದಿತ್ತು, ಆದರೆ ಇವಿಎಂ ಎಣಿಕೆ ಮಾಡಿದಾಗ ಸೋತಿತು: ಇವಿಎಂ ಬಗ್ಗೆ ಪ್ರಶ್ನಿಸಿದ ಸ್ವಾಮಿ ಪ್ರಸಾದ್ ಮೌರ್ಯ

ಮತಪತ್ರ ಎಣಿಕೆಯಲ್ಲಿ ಸಮಾಜವಾದಿ ಪಕ್ಷ 304 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಇವಿಎಂನಿಂದ ಮತ ಎಣಿಕೆ ನಡೆದಾಗ ಬಿಜೆಪಿ ಗೆಲುವು ಸಾಧಿಸಿದೆ. ಇದರರ್ಥ ಇದರಲ್ಲಿ ಕೆಲವು ಮೋಸ ಇದೆ.

ಮತಪತ್ರ ಎಣಿಕೆಯಲ್ಲಿ ಎಸ್​​ಪಿ 309 ಸ್ಥಾನ ಗೆದ್ದಿತ್ತು, ಆದರೆ ಇವಿಎಂ ಎಣಿಕೆ ಮಾಡಿದಾಗ ಸೋತಿತು: ಇವಿಎಂ ಬಗ್ಗೆ ಪ್ರಶ್ನಿಸಿದ ಸ್ವಾಮಿ ಪ್ರಸಾದ್ ಮೌರ್ಯ
ಸ್ವಾಮಿ ಪ್ರಸಾದ್ ಮೌರ್ಯ
TV9 Web
| Edited By: |

Updated on:Mar 14, 2022 | 5:38 PM

Share

ಲಖನೌ: ಯೋಗಿ ಆದಿತ್ಯನಾಥ ಸರ್ಕಾರದ ಮಾಜಿ ಸಚಿವ ಮತ್ತು ಸಮಾಜವಾದಿ ಪಕ್ಷದ (Samajwadi Party) ನಾಯಕ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) ಅವರು 2022 ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸೋತ ಕೆಲವು ದಿನಗಳ ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಫಾಜಿಲ್‌ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಸ್‌ಪಿ ನಾಯಕ ಈ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.  “ಮತಪತ್ರ ಎಣಿಕೆಯಲ್ಲಿ ಸಮಾಜವಾದಿ ಪಕ್ಷ 304 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಇವಿಎಂನಿಂದ ಮತ ಎಣಿಕೆ ನಡೆದಾಗ ಬಿಜೆಪಿ ಗೆಲುವು ಸಾಧಿಸಿದೆ. ಇದರರ್ಥ ಇದರಲ್ಲಿ ಕೆಲವು ಮೋಸ ಇದೆ ಎಂದು ಮೌರ್ಯ ಟ್ವೀಟ್ ಮಾಡಿದ್ದಾರೆ.   ಯೋಗಿ ಆದಿತ್ಯನಾಥ ಸಂಪುಟದ ಮಾಜಿ ಸಚಿವ ಮೌರ್ಯ, ಯೋಗಿ ಸರ್ಕಾರದಲ್ಲಿ ಹಿಂದುಳಿದವರು ಮತ್ತು ದಲಿತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಚುನಾವಣೆಗೆ ಕೆಲವು ದಿನಗಳ ಮೊದಲು ಬಂಡಾಯವೆದ್ದು ಸಮಾಜವಾದಿ ಪಕ್ಷಕ್ಕೆ ಸೇರಿದ್ದರು. ಕುಶಿನಗರದ ಪದ್ರೌನಾ ಕ್ಷೇತ್ರದಿಂದ ಮೂರು ಬಾರಿ ಹಾಲಿ ಶಾಸಕರಾಗಿದ್ದ ಮೌರ್ಯ ಈ ಬಾರಿ ಫಾಜಿಲ್‌ನಗರದಿಂದ ಸ್ಪರ್ಧಿಸಿದ್ದರು. ಮೌರ್ಯ ಅವರನ್ನು ಬಿಜೆಪಿಯ ಸುರೇಂದ್ರ ಕುಮಾರ್ ಕುಶ್ವಾಹ ಅವರು 45,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು.

ಬಿಜೆಪಿ ತನ್ನ ಮೈತ್ರಿಗಳೊಂದಿಗೆ 273 ವಿಧಾನಸಭಾ ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿರುವವರು ಪ್ರತಿ ಐದು ವರ್ಷಗಳಿಗೊಮ್ಮೆ ಯುಪಿ ಜನರಿಂದ ಬದಲಾಗುತ್ತಾರೆ ಎಂಬ ಅಪಹಾಸ್ಯವನ್ನು ಮುರಿಯಿತು. 2017ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 320ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷದ ಮೈತ್ರಿಕೂಟ 47 ಸ್ಥಾನಗಳಿಂದ 125 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

ಏತನ್ಮಧ್ಯೆ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲು ಅಜಂಗಢದಿಂದ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಔಪಚಾರಿಕವಾಗಿ ಸ್ಥಾನವನ್ನು ಬಿಟ್ಟುಕೊಡಲು ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಎಸ್ಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಆಲೋಚನೆ ಸಮಾಜವಾದಿ ಪಕ್ಷಕ್ಕಿದೆ ಎಂಬ ವದಂತಿಗಳು ಹರಿದಾಡುತ್ತಿದೆ.

ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಕಣಕ್ಕಿಳಿಸುವ ಆಲೋಚನೆಯನ್ನು ಅಖಿಲೇಶ್‌ಗೆ ನಿಕಟವಾಗಿರುವ ಹಿರಿಯ ನಾಯಕರೊಬ್ಬರು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದಲ್ಲಿ ಯಾದವ್ ಅಲ್ಲದ ಒಬಿಸಿಗಳಿರುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ, ಉತ್ತರ ಪ್ರದೇಶದ ಮಾಜಿ ಸಿಎಂ ಮೌರ್ಯ ಅವರೊಂದಿಗೆ ಭಾನುವಾರ ಸಂಜೆ ಸಭೆ ನಡೆಸಿದ ನಂತರ ಪಕ್ಷದೊಳಗೆ, ಎಸ್‌ಪಿ ಮುಖ್ಯಸ್ಥ ಗಂಭೀರ ಚಿಂತನೆ ನಡೆಸುತ್ತಾರೆ ಎಂಬ ಊಹಾಪೋಹಗಳು ವೇಗ ಪಡೆದುಕೊಂಡವು.

ಇದನ್ನೂ ಓದಿ: ವಿಮಾನ ನಿಲ್ದಾಣಗಳಲ್ಲಿ ಸಿಖ್ ಸಿಬ್ಬಂದಿ ಕಿರ್ಪಾನ್ ಧರಿಸುವುದನ್ನು ನಿರ್ಬಂಧಿಸುವ ಆದೇಶ ಮಾರ್ಪಡಿಸಿದ ಕೇಂದ್ರ

Published On - 5:32 pm, Mon, 14 March 22

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ