AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಪತ್ರ ಎಣಿಕೆಯಲ್ಲಿ ಎಸ್​​ಪಿ 309 ಸ್ಥಾನ ಗೆದ್ದಿತ್ತು, ಆದರೆ ಇವಿಎಂ ಎಣಿಕೆ ಮಾಡಿದಾಗ ಸೋತಿತು: ಇವಿಎಂ ಬಗ್ಗೆ ಪ್ರಶ್ನಿಸಿದ ಸ್ವಾಮಿ ಪ್ರಸಾದ್ ಮೌರ್ಯ

ಮತಪತ್ರ ಎಣಿಕೆಯಲ್ಲಿ ಸಮಾಜವಾದಿ ಪಕ್ಷ 304 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಇವಿಎಂನಿಂದ ಮತ ಎಣಿಕೆ ನಡೆದಾಗ ಬಿಜೆಪಿ ಗೆಲುವು ಸಾಧಿಸಿದೆ. ಇದರರ್ಥ ಇದರಲ್ಲಿ ಕೆಲವು ಮೋಸ ಇದೆ.

ಮತಪತ್ರ ಎಣಿಕೆಯಲ್ಲಿ ಎಸ್​​ಪಿ 309 ಸ್ಥಾನ ಗೆದ್ದಿತ್ತು, ಆದರೆ ಇವಿಎಂ ಎಣಿಕೆ ಮಾಡಿದಾಗ ಸೋತಿತು: ಇವಿಎಂ ಬಗ್ಗೆ ಪ್ರಶ್ನಿಸಿದ ಸ್ವಾಮಿ ಪ್ರಸಾದ್ ಮೌರ್ಯ
ಸ್ವಾಮಿ ಪ್ರಸಾದ್ ಮೌರ್ಯ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Mar 14, 2022 | 5:38 PM

Share

ಲಖನೌ: ಯೋಗಿ ಆದಿತ್ಯನಾಥ ಸರ್ಕಾರದ ಮಾಜಿ ಸಚಿವ ಮತ್ತು ಸಮಾಜವಾದಿ ಪಕ್ಷದ (Samajwadi Party) ನಾಯಕ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) ಅವರು 2022 ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸೋತ ಕೆಲವು ದಿನಗಳ ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಫಾಜಿಲ್‌ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಸ್‌ಪಿ ನಾಯಕ ಈ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.  “ಮತಪತ್ರ ಎಣಿಕೆಯಲ್ಲಿ ಸಮಾಜವಾದಿ ಪಕ್ಷ 304 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಇವಿಎಂನಿಂದ ಮತ ಎಣಿಕೆ ನಡೆದಾಗ ಬಿಜೆಪಿ ಗೆಲುವು ಸಾಧಿಸಿದೆ. ಇದರರ್ಥ ಇದರಲ್ಲಿ ಕೆಲವು ಮೋಸ ಇದೆ ಎಂದು ಮೌರ್ಯ ಟ್ವೀಟ್ ಮಾಡಿದ್ದಾರೆ.   ಯೋಗಿ ಆದಿತ್ಯನಾಥ ಸಂಪುಟದ ಮಾಜಿ ಸಚಿವ ಮೌರ್ಯ, ಯೋಗಿ ಸರ್ಕಾರದಲ್ಲಿ ಹಿಂದುಳಿದವರು ಮತ್ತು ದಲಿತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಚುನಾವಣೆಗೆ ಕೆಲವು ದಿನಗಳ ಮೊದಲು ಬಂಡಾಯವೆದ್ದು ಸಮಾಜವಾದಿ ಪಕ್ಷಕ್ಕೆ ಸೇರಿದ್ದರು. ಕುಶಿನಗರದ ಪದ್ರೌನಾ ಕ್ಷೇತ್ರದಿಂದ ಮೂರು ಬಾರಿ ಹಾಲಿ ಶಾಸಕರಾಗಿದ್ದ ಮೌರ್ಯ ಈ ಬಾರಿ ಫಾಜಿಲ್‌ನಗರದಿಂದ ಸ್ಪರ್ಧಿಸಿದ್ದರು. ಮೌರ್ಯ ಅವರನ್ನು ಬಿಜೆಪಿಯ ಸುರೇಂದ್ರ ಕುಮಾರ್ ಕುಶ್ವಾಹ ಅವರು 45,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು.

ಬಿಜೆಪಿ ತನ್ನ ಮೈತ್ರಿಗಳೊಂದಿಗೆ 273 ವಿಧಾನಸಭಾ ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿರುವವರು ಪ್ರತಿ ಐದು ವರ್ಷಗಳಿಗೊಮ್ಮೆ ಯುಪಿ ಜನರಿಂದ ಬದಲಾಗುತ್ತಾರೆ ಎಂಬ ಅಪಹಾಸ್ಯವನ್ನು ಮುರಿಯಿತು. 2017ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 320ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷದ ಮೈತ್ರಿಕೂಟ 47 ಸ್ಥಾನಗಳಿಂದ 125 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

ಏತನ್ಮಧ್ಯೆ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲು ಅಜಂಗಢದಿಂದ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಔಪಚಾರಿಕವಾಗಿ ಸ್ಥಾನವನ್ನು ಬಿಟ್ಟುಕೊಡಲು ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಎಸ್ಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಆಲೋಚನೆ ಸಮಾಜವಾದಿ ಪಕ್ಷಕ್ಕಿದೆ ಎಂಬ ವದಂತಿಗಳು ಹರಿದಾಡುತ್ತಿದೆ.

ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಕಣಕ್ಕಿಳಿಸುವ ಆಲೋಚನೆಯನ್ನು ಅಖಿಲೇಶ್‌ಗೆ ನಿಕಟವಾಗಿರುವ ಹಿರಿಯ ನಾಯಕರೊಬ್ಬರು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದಲ್ಲಿ ಯಾದವ್ ಅಲ್ಲದ ಒಬಿಸಿಗಳಿರುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ, ಉತ್ತರ ಪ್ರದೇಶದ ಮಾಜಿ ಸಿಎಂ ಮೌರ್ಯ ಅವರೊಂದಿಗೆ ಭಾನುವಾರ ಸಂಜೆ ಸಭೆ ನಡೆಸಿದ ನಂತರ ಪಕ್ಷದೊಳಗೆ, ಎಸ್‌ಪಿ ಮುಖ್ಯಸ್ಥ ಗಂಭೀರ ಚಿಂತನೆ ನಡೆಸುತ್ತಾರೆ ಎಂಬ ಊಹಾಪೋಹಗಳು ವೇಗ ಪಡೆದುಕೊಂಡವು.

ಇದನ್ನೂ ಓದಿ: ವಿಮಾನ ನಿಲ್ದಾಣಗಳಲ್ಲಿ ಸಿಖ್ ಸಿಬ್ಬಂದಿ ಕಿರ್ಪಾನ್ ಧರಿಸುವುದನ್ನು ನಿರ್ಬಂಧಿಸುವ ಆದೇಶ ಮಾರ್ಪಡಿಸಿದ ಕೇಂದ್ರ

Published On - 5:32 pm, Mon, 14 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ