AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amethi: ಎಸ್​ಪಿ ಶಾಸಕನ ಗೂಂಡಾಗಿರಿ, ಬಿಜೆಪಿ ನಾಯಕಿಯ ಪತಿಗೆ ಪೊಲೀಸ್ ಠಾಣೆ ಎದುರು ಥಳಿತ

ಉತ್ತರ ಪ್ರದೇಶ(Uttar Pradesh)ದ ಅಮೇಥಿಯಲ್ಲಿ ಸಮಾಜವಾದಿ(Samajwadi) ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಗೂಂಡಾಗಿರಿ ನಡೆಸುತ್ತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ.

Amethi: ಎಸ್​ಪಿ ಶಾಸಕನ ಗೂಂಡಾಗಿರಿ, ಬಿಜೆಪಿ ನಾಯಕಿಯ ಪತಿಗೆ ಪೊಲೀಸ್ ಠಾಣೆ ಎದುರು ಥಳಿತ
ರಾಕೇಶ್​ ಸಿಂಗ್, ದೀಪಕ್ ಸಿಂಗ್
ನಯನಾ ರಾಜೀವ್
|

Updated on:May 10, 2023 | 3:34 PM

Share

ಉತ್ತರ ಪ್ರದೇಶ(Uttar Pradesh)ದ ಅಮೇಥಿಯಲ್ಲಿ ಸಮಾಜವಾದಿ(Samajwadi) ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಗೂಂಡಾಗಿರಿ ನಡೆಸುತ್ತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ. ಸಮಾಜವಾದಿ ಪಕ್ಷದ ಕಾರ್ಯಕರ್ತರು ಮೊದಲು ಪೊಲೀಸ್ ಠಾಣೆಯ ಮುಂದೆ ಸಾಗುತ್ತಿದ್ದ ಬಿಜೆಪಿಯ ಪುರಸಭೆ ಅಭ್ಯರ್ಥಿ ರಶ್ಮಿ ಸಿಂಗ್ ಅವರ ಪತಿ ದೀಪಕ್ ಸಿಂಗ್ ಅವರ ವಾಹನವನ್ನು ಸುತ್ತುವರೆದರು. ಇದಾದ ಬಳಿಕ ಎಸ್‌ಪಿ ಶಾಸಕರು ಬಿಜೆಪಿ ಅಭ್ಯರ್ಥಿಯ ಪತಿಯನ್ನು ತೀವ್ರವಾಗಿ ಥಳಿಸಿದ್ದಾರೆ. ಅಮೇಥಿಯಲ್ಲಿ ಎಸ್‌ಪಿ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಅವರ ಬಹಿರಂಗ ಗೂಂಡಾಗಿರಿಯ ವಿಡಿಯೋ ಇದೀಗ ಮುನ್ನೆಲೆಗೆ ಬಂದಿದೆ.

ಮತ್ತಷ್ಟು ಓದಿ: 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಜನರು ಇದಕ್ಕೆ ಉತ್ತರಿಸುತ್ತಾರೆ: ಸಿಸೋಡಿಯಾ ಬಂಧನ ಖಂಡಿಸಿ ಅಖಿಲೇಶ್ ಟ್ವೀಟ್

ದೀಪಕ್ ಸಿಂಗ್ ಅವರನ್ನು ರಕ್ಷಿಸಲು ಪೊಲೀಸರು ಅವರನ್ನು ಠಾಣೆಯೊಳಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಎಸ್‌ಪಿ ಶಾಸಕರು ಅಲ್ಲಿಯೂ ಶಾಂತವಾಗಿರದೆ ದೀಪಕ್​ ಸಿಂಗ್ ಜತೆ ಜಗಳವಾಡಿದ್ದಾರೆ, ಈಗಾಗಲೇ ಪೊಲೀಸ್ ಠಾಣೆಯೊಳಗೆ ಹಾಜರಿದ್ದ ಎಸ್‌ಪಿ ಶಾಸಕ ರಾಕೇಶ್ ಪ್ರತಾಪ್ ಸಿಂಗ್, ದೀಪಕ್ ಸಿಂಗ್‌ಗೆ ತೀವ್ರವಾಗಿ ಥಳಿಸಿದ್ದಾರೆ.

ಇದೀಗ ಸಮಸ್ಯೆ ಬಗೆಹರಿದಿದ್ದು, ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೊದಲು ದೀಪಕ್ ಸಿಂಗ್ ಬೆಂಬಲಿಗರು ನಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ರಾಕೇಶ್​ ಸಿಂಗ್ ಕೂಡ ದೂರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Wed, 10 May 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ