AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amethi: ಎಸ್​ಪಿ ಶಾಸಕನ ಗೂಂಡಾಗಿರಿ, ಬಿಜೆಪಿ ನಾಯಕಿಯ ಪತಿಗೆ ಪೊಲೀಸ್ ಠಾಣೆ ಎದುರು ಥಳಿತ

ಉತ್ತರ ಪ್ರದೇಶ(Uttar Pradesh)ದ ಅಮೇಥಿಯಲ್ಲಿ ಸಮಾಜವಾದಿ(Samajwadi) ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಗೂಂಡಾಗಿರಿ ನಡೆಸುತ್ತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ.

Amethi: ಎಸ್​ಪಿ ಶಾಸಕನ ಗೂಂಡಾಗಿರಿ, ಬಿಜೆಪಿ ನಾಯಕಿಯ ಪತಿಗೆ ಪೊಲೀಸ್ ಠಾಣೆ ಎದುರು ಥಳಿತ
ರಾಕೇಶ್​ ಸಿಂಗ್, ದೀಪಕ್ ಸಿಂಗ್
ನಯನಾ ರಾಜೀವ್
|

Updated on:May 10, 2023 | 3:34 PM

Share

ಉತ್ತರ ಪ್ರದೇಶ(Uttar Pradesh)ದ ಅಮೇಥಿಯಲ್ಲಿ ಸಮಾಜವಾದಿ(Samajwadi) ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಗೂಂಡಾಗಿರಿ ನಡೆಸುತ್ತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ. ಸಮಾಜವಾದಿ ಪಕ್ಷದ ಕಾರ್ಯಕರ್ತರು ಮೊದಲು ಪೊಲೀಸ್ ಠಾಣೆಯ ಮುಂದೆ ಸಾಗುತ್ತಿದ್ದ ಬಿಜೆಪಿಯ ಪುರಸಭೆ ಅಭ್ಯರ್ಥಿ ರಶ್ಮಿ ಸಿಂಗ್ ಅವರ ಪತಿ ದೀಪಕ್ ಸಿಂಗ್ ಅವರ ವಾಹನವನ್ನು ಸುತ್ತುವರೆದರು. ಇದಾದ ಬಳಿಕ ಎಸ್‌ಪಿ ಶಾಸಕರು ಬಿಜೆಪಿ ಅಭ್ಯರ್ಥಿಯ ಪತಿಯನ್ನು ತೀವ್ರವಾಗಿ ಥಳಿಸಿದ್ದಾರೆ. ಅಮೇಥಿಯಲ್ಲಿ ಎಸ್‌ಪಿ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಅವರ ಬಹಿರಂಗ ಗೂಂಡಾಗಿರಿಯ ವಿಡಿಯೋ ಇದೀಗ ಮುನ್ನೆಲೆಗೆ ಬಂದಿದೆ.

ಮತ್ತಷ್ಟು ಓದಿ: 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಜನರು ಇದಕ್ಕೆ ಉತ್ತರಿಸುತ್ತಾರೆ: ಸಿಸೋಡಿಯಾ ಬಂಧನ ಖಂಡಿಸಿ ಅಖಿಲೇಶ್ ಟ್ವೀಟ್

ದೀಪಕ್ ಸಿಂಗ್ ಅವರನ್ನು ರಕ್ಷಿಸಲು ಪೊಲೀಸರು ಅವರನ್ನು ಠಾಣೆಯೊಳಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಎಸ್‌ಪಿ ಶಾಸಕರು ಅಲ್ಲಿಯೂ ಶಾಂತವಾಗಿರದೆ ದೀಪಕ್​ ಸಿಂಗ್ ಜತೆ ಜಗಳವಾಡಿದ್ದಾರೆ, ಈಗಾಗಲೇ ಪೊಲೀಸ್ ಠಾಣೆಯೊಳಗೆ ಹಾಜರಿದ್ದ ಎಸ್‌ಪಿ ಶಾಸಕ ರಾಕೇಶ್ ಪ್ರತಾಪ್ ಸಿಂಗ್, ದೀಪಕ್ ಸಿಂಗ್‌ಗೆ ತೀವ್ರವಾಗಿ ಥಳಿಸಿದ್ದಾರೆ.

ಇದೀಗ ಸಮಸ್ಯೆ ಬಗೆಹರಿದಿದ್ದು, ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೊದಲು ದೀಪಕ್ ಸಿಂಗ್ ಬೆಂಬಲಿಗರು ನಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ರಾಕೇಶ್​ ಸಿಂಗ್ ಕೂಡ ದೂರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Wed, 10 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!