AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​ ಭೇಟಿ ಕೊಟ್ಟ ಹೆಲಿಪ್ಯಾಡ್​, ಆಸ್ಪತ್ರೆ, ಆಮ್ಲಜನಕ ಘಟಕಗಳ ಶುದ್ಧೀಕರಣ..

ನಾವು ಕೊರೊನಾ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದೇವೆ. ಅದರ ಫಲವಾಗಿ ಉತ್ತರ ಪ್ರದೇಶದಲ್ಲಿ ಸದ್ಯ ಕೊರೊನಾದಿಂದ ಚೇತರಿಸಿಕೊಳ್ಳುವವರ ಪ್ರಮಾಣ ಶೇ.93ರಷ್ಟಿದೆ. ಈ ಚೇತರಿಕೆ ಪ್ರಮಾಣದಲ್ಲಿ ನಮ್ಮ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್​ ಭೇಟಿ ಕೊಟ್ಟ ಹೆಲಿಪ್ಯಾಡ್​, ಆಸ್ಪತ್ರೆ, ಆಮ್ಲಜನಕ ಘಟಕಗಳ ಶುದ್ಧೀಕರಣ..
ಯೋಗಿ ಆದಿತ್ಯನಾಥ್
Lakshmi Hegde
|

Updated on: May 25, 2021 | 10:27 PM

Share

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಭೇಟಿ ನೀಡಿದ್ದ ಸೈಫೈ ಹೆಲಿಪ್ಯಾಡ್​ನ್ನು ಸಮಾಜವಾದಿ ಪಕ್ಷದ ಕಾರ್ಯಕರ್ತರು ಗಂಗಾಜಲ ಹಾಕಿ ಶುದ್ಧೀಕರಿಸಿದ್ದಾರೆ. ಅಂದು ಯೋಗಿ ಆದಿತ್ಯನಾಥ್​ ಅವರು ಮುಖ್ಯಮಂತ್ರಿಯಾದ ಬಳಿಕ ಅಖಿಲೇಶ್ ಯಾದವ್ ಮುಖ್ಯಮಂತ್ರಿ ಕಚೇರಿಯನ್ನು ಬಿಟ್ಟುಕೊಟ್ಟಿದ್ದರು. ಯೋಗಿ ಆದಿತ್ಯನಾಥ್ ಆ ಕಚೇರಿಗೆ ಪ್ರವೇಶಿಸುವುದಕ್ಕೂ ಮೊದಲು ಅದನ್ನು ಗಂಗಾಜಲ ಹಾಕಿ ಶುದ್ಧೀಕರಿಸಲಾಗಿತ್ತು.

ಅಂದು ಯೋಗಿ ಆದಿತ್ಯನಾಥ್​ ಮಾಡಿಸಿದ ಕೆಲಸಕ್ಕೆ ಪ್ರತೀಕಾರವಾಗಿ ಇದೀಗ ಅವರು ಭೇಟಿ ಕೊಟ್ಟ ಸೈಫೈ ಹೆಲಿಪ್ಯಾಡ್​ನ್ನು ಶುದ್ಧೀಕರಿಸುತ್ತಿದ್ದೇವೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಹೇಳಿಕೊಂಡಿದ್ದಾರೆ. ಇನ್ನು ಸೈಫೈ ಹೆಲಿಪ್ಯಾಡ್​ ಮಾತ್ರವಲ್ಲ, ಸೈಫೈ ಆಸ್ಪತ್ರೆ, ಆಮ್ಲಜನಕ ಘಟಕ ಸೇರಿ, ಅವರು ಎಲ್ಲೆಲ್ಲೆ ಹೋಗಿದ್ದರೋ ಅಲ್ಲೆಲ್ಲ ಶುದ್ಧೀಕರಣ ಮಾಡಿದ್ದೇವೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ತಿಳಿಸಿದ್ದಾರೆ.

ಇಟಾವಾ ಜಿಲ್ಲೆಯ ಸೈಫೈನಲ್ಲಿ ಸಮಾಜವಾದಿ ಪಕ್ಷದ ಬಾಹುಳ್ಯ ಹೆಚ್ಚಾಗಿದೆ. ಶನಿವಾರ ಯೋಗಿ ಆದಿತ್ಯನಾಥ್​ ಅವರು ಅಲ್ಲಿನ ಕೊವಿಡ್​ 19 ಸ್ಥಿತಿ-ಗತಿ ಪರಿಶೀಲನೆ ಮಾಡಲು ತೆರಳಿದ್ದರು. ಅದಾದ ಬಳಿಕ ಮಾತನಾಡಿದ್ದ ಅವರು ಪ್ರಾರಂಭದಲ್ಲಿ ಲಸಿಕೆಯನ್ನು ವಿರೋಧಿಸಿದವರು ಇದೀಗ ಅದನ್ನು ಪಡೆಯಲು ಸಾಲಾಗಿ ನಿಂತಿದ್ದಾರೆ ಎಂದು ಹೇಳಿದ್ದರು. ಈ ಮೂಲಕ ಕೊವ್ಯಾಕ್ಸಿನ್​​ನ್ನು ಬಿಜೆಪಿ ಲಸಿಕೆ ಎಂದು ಹೇಳಿದ್ದ ಅಖಿಲೇಶ್ ಯಾದವ್​ಗೂ ತಿರುಗೇಟು ನೀಡಿದ್ದರು.

ನಾವು ಕೊರೊನಾ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದೇವೆ. ಅದರ ಫಲವಾಗಿ ಉತ್ತರ ಪ್ರದೇಶದಲ್ಲಿ ಸದ್ಯ ಕೊರೊನಾದಿಂದ ಚೇತರಿಸಿಕೊಳ್ಳುವವರ ಪ್ರಮಾಣ ಶೇ.93ರಷ್ಟಿದೆ. ಈ ಚೇತರಿಕೆ ಪ್ರಮಾಣದಲ್ಲಿ ನಮ್ಮ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿ ಇದೆ. ಇಟಾವಾ ಜಿಲ್ಲೆಯ ಆರೋಗ್ಯ ಕಾರ್ಯಕರ್ತರು, ಪೊಲೀಸರು ಕೂಡ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಈ ಜಿಲ್ಲೆಯಲ್ಲಿ ಕೊವಿಡ್​ ಪಾಸಿಟಿವಿಟಿ ದರ ಶೇ.30ರಷ್ಟಿದ್ದದ್ದು, ಇದೀಗ ಶೇ. 2ಕ್ಕೆ ಇಳಿದಿದೆ. ಇದು ನಿಜಕ್ಕೂ ಶ್ಲಾಘನೀಯ ವಿಷಯ ಎಂದು ಯೋಗಿ ಆದಿತ್ಯನಾಥ್ ಹೇಳಿದರು.

ಇದನ್ನೂ ಓದಿ: ವಿವಾಹಿತ ಮಹಿಳೆಯ ಜತೆ ಪ್ರೀತಿಯಲ್ಲಿ ಬಿದ್ದ ರಾಜಮೌಳಿ; ಯಾವ ಸಿನಿಮಾಕ್ಕೂ ಕಮ್ಮಿ ಇಲ್ಲ ಈ ನಿರ್ದೇಶಕನ ಪ್ರೇಮಕಥೆ

Follow Us
Lakshmi Hegde
Lakshmi Hegde
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ