AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​ ಭೇಟಿ ಕೊಟ್ಟ ಹೆಲಿಪ್ಯಾಡ್​, ಆಸ್ಪತ್ರೆ, ಆಮ್ಲಜನಕ ಘಟಕಗಳ ಶುದ್ಧೀಕರಣ..

ನಾವು ಕೊರೊನಾ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದೇವೆ. ಅದರ ಫಲವಾಗಿ ಉತ್ತರ ಪ್ರದೇಶದಲ್ಲಿ ಸದ್ಯ ಕೊರೊನಾದಿಂದ ಚೇತರಿಸಿಕೊಳ್ಳುವವರ ಪ್ರಮಾಣ ಶೇ.93ರಷ್ಟಿದೆ. ಈ ಚೇತರಿಕೆ ಪ್ರಮಾಣದಲ್ಲಿ ನಮ್ಮ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್​ ಭೇಟಿ ಕೊಟ್ಟ ಹೆಲಿಪ್ಯಾಡ್​, ಆಸ್ಪತ್ರೆ, ಆಮ್ಲಜನಕ ಘಟಕಗಳ ಶುದ್ಧೀಕರಣ..
ಯೋಗಿ ಆದಿತ್ಯನಾಥ್
Lakshmi Hegde
|

Updated on: May 25, 2021 | 10:27 PM

Share

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಭೇಟಿ ನೀಡಿದ್ದ ಸೈಫೈ ಹೆಲಿಪ್ಯಾಡ್​ನ್ನು ಸಮಾಜವಾದಿ ಪಕ್ಷದ ಕಾರ್ಯಕರ್ತರು ಗಂಗಾಜಲ ಹಾಕಿ ಶುದ್ಧೀಕರಿಸಿದ್ದಾರೆ. ಅಂದು ಯೋಗಿ ಆದಿತ್ಯನಾಥ್​ ಅವರು ಮುಖ್ಯಮಂತ್ರಿಯಾದ ಬಳಿಕ ಅಖಿಲೇಶ್ ಯಾದವ್ ಮುಖ್ಯಮಂತ್ರಿ ಕಚೇರಿಯನ್ನು ಬಿಟ್ಟುಕೊಟ್ಟಿದ್ದರು. ಯೋಗಿ ಆದಿತ್ಯನಾಥ್ ಆ ಕಚೇರಿಗೆ ಪ್ರವೇಶಿಸುವುದಕ್ಕೂ ಮೊದಲು ಅದನ್ನು ಗಂಗಾಜಲ ಹಾಕಿ ಶುದ್ಧೀಕರಿಸಲಾಗಿತ್ತು.

ಅಂದು ಯೋಗಿ ಆದಿತ್ಯನಾಥ್​ ಮಾಡಿಸಿದ ಕೆಲಸಕ್ಕೆ ಪ್ರತೀಕಾರವಾಗಿ ಇದೀಗ ಅವರು ಭೇಟಿ ಕೊಟ್ಟ ಸೈಫೈ ಹೆಲಿಪ್ಯಾಡ್​ನ್ನು ಶುದ್ಧೀಕರಿಸುತ್ತಿದ್ದೇವೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಹೇಳಿಕೊಂಡಿದ್ದಾರೆ. ಇನ್ನು ಸೈಫೈ ಹೆಲಿಪ್ಯಾಡ್​ ಮಾತ್ರವಲ್ಲ, ಸೈಫೈ ಆಸ್ಪತ್ರೆ, ಆಮ್ಲಜನಕ ಘಟಕ ಸೇರಿ, ಅವರು ಎಲ್ಲೆಲ್ಲೆ ಹೋಗಿದ್ದರೋ ಅಲ್ಲೆಲ್ಲ ಶುದ್ಧೀಕರಣ ಮಾಡಿದ್ದೇವೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ತಿಳಿಸಿದ್ದಾರೆ.

ಇಟಾವಾ ಜಿಲ್ಲೆಯ ಸೈಫೈನಲ್ಲಿ ಸಮಾಜವಾದಿ ಪಕ್ಷದ ಬಾಹುಳ್ಯ ಹೆಚ್ಚಾಗಿದೆ. ಶನಿವಾರ ಯೋಗಿ ಆದಿತ್ಯನಾಥ್​ ಅವರು ಅಲ್ಲಿನ ಕೊವಿಡ್​ 19 ಸ್ಥಿತಿ-ಗತಿ ಪರಿಶೀಲನೆ ಮಾಡಲು ತೆರಳಿದ್ದರು. ಅದಾದ ಬಳಿಕ ಮಾತನಾಡಿದ್ದ ಅವರು ಪ್ರಾರಂಭದಲ್ಲಿ ಲಸಿಕೆಯನ್ನು ವಿರೋಧಿಸಿದವರು ಇದೀಗ ಅದನ್ನು ಪಡೆಯಲು ಸಾಲಾಗಿ ನಿಂತಿದ್ದಾರೆ ಎಂದು ಹೇಳಿದ್ದರು. ಈ ಮೂಲಕ ಕೊವ್ಯಾಕ್ಸಿನ್​​ನ್ನು ಬಿಜೆಪಿ ಲಸಿಕೆ ಎಂದು ಹೇಳಿದ್ದ ಅಖಿಲೇಶ್ ಯಾದವ್​ಗೂ ತಿರುಗೇಟು ನೀಡಿದ್ದರು.

ನಾವು ಕೊರೊನಾ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದೇವೆ. ಅದರ ಫಲವಾಗಿ ಉತ್ತರ ಪ್ರದೇಶದಲ್ಲಿ ಸದ್ಯ ಕೊರೊನಾದಿಂದ ಚೇತರಿಸಿಕೊಳ್ಳುವವರ ಪ್ರಮಾಣ ಶೇ.93ರಷ್ಟಿದೆ. ಈ ಚೇತರಿಕೆ ಪ್ರಮಾಣದಲ್ಲಿ ನಮ್ಮ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿ ಇದೆ. ಇಟಾವಾ ಜಿಲ್ಲೆಯ ಆರೋಗ್ಯ ಕಾರ್ಯಕರ್ತರು, ಪೊಲೀಸರು ಕೂಡ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಈ ಜಿಲ್ಲೆಯಲ್ಲಿ ಕೊವಿಡ್​ ಪಾಸಿಟಿವಿಟಿ ದರ ಶೇ.30ರಷ್ಟಿದ್ದದ್ದು, ಇದೀಗ ಶೇ. 2ಕ್ಕೆ ಇಳಿದಿದೆ. ಇದು ನಿಜಕ್ಕೂ ಶ್ಲಾಘನೀಯ ವಿಷಯ ಎಂದು ಯೋಗಿ ಆದಿತ್ಯನಾಥ್ ಹೇಳಿದರು.

ಇದನ್ನೂ ಓದಿ: ವಿವಾಹಿತ ಮಹಿಳೆಯ ಜತೆ ಪ್ರೀತಿಯಲ್ಲಿ ಬಿದ್ದ ರಾಜಮೌಳಿ; ಯಾವ ಸಿನಿಮಾಕ್ಕೂ ಕಮ್ಮಿ ಇಲ್ಲ ಈ ನಿರ್ದೇಶಕನ ಪ್ರೇಮಕಥೆ

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು