Sign In

By signing in or creating an account, you agree with Associated Broadcasting Company's Terms & Conditions and Privacy Policy.

Same Sex Marriage: ಸಲಿಂಗ ವಿವಾಹ ವಿರೋಧಿಸಿ ಹಕ್ಕುಗಳನ್ನು ನಿರಾಕರಿಸಬೇಡಿ; ಸುಶೀಲ್​ ಕುಮಾರ್ ಮೋದಿಗೆ ಅಕೈ ಪದ್ಮಶಾಲಿ ಪತ್ರ

Same Sex Marriage Debate; ಸಲಿಂಗ ವಿವಾಹವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಸುಶೀಲ್ ಮೋದಿ ಅವರು ಸಂಸತ್​ನಲ್ಲಿ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿ ಬಹಿರಂಗ ಪತ್ರ ಬರೆದಿರುವ ಅಕೈ ಪದ್ಮಶಾಲಿ, ಕ್ಷಮೆಯಾಚಿಸುವಂತೆ ಸುಶೀಲ್ ಮೋದಿ ಅವರನ್ನು ಆಗ್ರಹಿಸಿದ್ದಾರೆ.

Same Sex Marriage: ಸಲಿಂಗ ವಿವಾಹ ವಿರೋಧಿಸಿ ಹಕ್ಕುಗಳನ್ನು ನಿರಾಕರಿಸಬೇಡಿ; ಸುಶೀಲ್​ ಕುಮಾರ್ ಮೋದಿಗೆ ಅಕೈ ಪದ್ಮಶಾಲಿ ಪತ್ರ
ಅಕೈ ಪದ್ಮಶಾಲಿImage Credit source: Facebook
Follow us
TV9 Web
| Updated By: Ganapathi Sharma

Updated on:Dec 24, 2022 | 8:26 PM

ನವದೆಹಲಿ: ಸಲಿಂಗ ವಿವಾಹವನ್ನು (Same Sex Marriage) ವಿರೋಧಿಸುವ ಮೂಲಕ ನಮ್ಮ ಹಕ್ಕುಗಳನ್ನು ನಿರಾಕರಿಸಬೇಡಿ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿಗೆ (Sushil Kumar Modi) ಲೈಂಗಿಕ ಅಲ್ಪಸಂಖ್ಯಾತರಾದ (LGBT) ಅಕೈ ಪದ್ಮಶಾಲಿ (Akkai Padmashali) ಹೇಳಿದ್ದಾರೆ. ಸಲಿಂಗ ವಿವಾಹವನ್ನು ಬಿಜೆಪಿ (BJP) ವಿರೋಧಿಸುತ್ತದೆ ಎಂದು ಸುಶೀಲ್ ಮೋದಿ ಅವರು ಸಂಸತ್​ನಲ್ಲಿ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿ ಬಹಿರಂಗ ಪತ್ರ ಬರೆದಿರುವ ಅಕೈ ಪದ್ಮಶಾಲಿ, ಲೈಂಗಿಕ ಅಲ್ಪಸಂಖ್ಯಾತರ ಕಷ್ಟಗಳನ್ನು ತೋಡಿಕೊಂಡಿದ್ದಲ್ಲದೆ, ಕ್ಷಮೆ ಯಾಚಿಸುವಂತೆ ಸುಶೀಲ್ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

‘ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವುದರ ವಿರುದ್ಧ ನೀವು (ಸುಶೀಲ್ ಮೋದಿ) ರಾಜ್ಯಸಭೆಯಲ್ಲಿ ಆಡಿರುವ ಮಾತುಗಳಿಂದ ತೀವ್ರ ಆಘಾತವಾಗಿದೆ. ಎಲ್​ಜಿಬಿಟಿಯಲ್ಲಿ ಒಬ್ಬಳಾಗಿರುವ ನಾನು ಮದುವೆಯಾಗುವ ಹಕ್ಕು ಕೇವಲ ಪುರುಷ ಮತ್ತು ಮಹಿಳೆಯರಿಗಷ್ಟೇ ಸೀಮಿತವಾಗಿ ಇರಬಾರದು ಎಂದು ಭಾವಿಸುತ್ತೇನೆ’ ಎಂದು ಪದ್ಮಶಾಲಿ ಅವರು ಮೂರು ಪುಟಗಳ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ನೀವು ಸಲಿಂಗ ವಿವಾಹವನ್ನು ವಿರೋಧಿಸುತ್ತೀರಿ. ಯಾಕೆಂದರೆ ನಿಮ್ಮ ದೃಷ್ಟಿಯಲ್ಲಿ ಮದುವೆ ಎಂಬುದು ಪುರುಷ ಮತ್ತು ಮಹಿಳೆಗಷ್ಟೇ ಸೀಮಿತವಾಗಿದೆ ಮತ್ತು ಅದು ಮಾತ್ರ ಪರಿಶುದ್ಧ ಎಂಬುದು ನಿಮ್ಮ ಭಾವನೆ. ಆದರೆ ಎಲ್​ಜಿಬಿಟಿ ಆಂದೋಲನವು ಇದಕ್ಕೆ ವಿರುದ್ಧವಾಗಿದೆ. ಎಲ್ಲ ರೀತಿಯ ಲೈಂಗಿಕ ಅಲ್ಪಸಂಖ್ಯಾತರನ್ನೂ ಸಮಾನವಾಗಿ ನೋಡಬೇಕಿದೆ. ನನ್ನ ಉದಾಹರಣೆಯನ್ನೇ ತೆಗೆದುಕೊಳ್ಳಿ. ನಾನು ಪುರುನಾಗಿ ಜನಿಸಿದೆ. ಆದರೆ, ಸದಾ ಮಹಿಳೆಯಾಗಿ ಗುರುತಿಸಿಕೊಂಡೆ. ಅರಿವಿನ ಹೆಚ್ಚಳ, ಆತ್ಮವಿಶ್ವಾಸ ವೃದ್ಧಿ ಮತ್ತು ಸ್ವಂತ ಬಲದಿಂದ ನಾನೀಗ ಮಹಿಳೆಯಾಗಿ ಪರಿವರ್ತನೆ ಹೊಂದಿದ್ದೇನೆ. ಆದಾಗ್ಯೂ, ನಿಮ್ಮ ವ್ಯಾಖ್ಯಾನದ ಪ್ರಕಾರ ನಾನು ಜೈವಿಕವಾಗಿ ಮಹಿಳೆಯಲ್ಲ. ಹೀಗಾಗಿ ಮದುವೆಯಾಗಲು ಅರ್ಹಳಲ್ಲ. ಜೈವಿಕವಾಗಿ ಸ್ತ್ರೀಯರಲ್ಲದ ನಮ್ಮಂತಹವರಿಗೆ ಈ ನಿರಾಕರಣೆಯು ಸಮಾನತೆ ಮತ್ತು ಗೌರವಯುತ ಜೀವನವನ್ನು ನಡೆಸುವ ಹಕ್ಕನ್ನು ನಿರಾಕರಿಸಿದಂತೆ’ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಮಾನ್ಯತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಲಿಂಗಿಗಳು

ಕ್ಷಮೆಯಾಚಿಸಿ; ಸುಶೀಲ್​ ಮೋದಿಗೆ ಪದ್ಮಶಾಲಿ ಆಗ್ರಹ

ನನ್ನಂತೆಯೇ ಜೈವಿಕವಾಗಿ ಪುರುಷರಲ್ಲದ, ಮಹಿಳೆಯೂ ಅಲ್ಲದ ಅನೇಕರಿದ್ದಾರೆ. ಜೈವಿಕವಾಗಿ ಪುರುಷ ಮತ್ತು ಮಹಿಳೆಯಾಗಿದ್ದರೆ ಮಾತ್ರ ಮದುವೆಯಾಗಬಹುದೇ? ಇದು ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆಶಯವನ್ನು ಉಲ್ಲಂಘಿಸಿದಂತೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ. ಟೀಕೆಗಳ ಮೂಲಕ ನೀವು ಎಲ್​ಜಿಬಿಟಿ ಸಮುದಾಯಕ್ಕೆ ಉಂಟುಮಾಡಿದ ನೋವಿಗೆ ಸಮುದಾಯದ ಕ್ಷಮೆ ಯಾಚಿಸುವಂತೆ ಒತ್ತಾಯಿಸುತ್ತೇವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸಲಿಂಗ ವಿವಾಹದ ಬಗ್ಗೆ ಏನು ಹೇಳಿದ್ದರು ಸುಶೀಲ್ ಕುಮಾರ್ ಮೋದಿ?

ರಾಜ್ಯಸಭೆ ಕಲಾಪದ ಸಂದರ್ಭ ಶೂನ್ಯ ವೇಳೆಯಲ್ಲಿ ಮಾತನಾಡಿದ್ದ ಸುಶೀಲ್ ಕುಮಾರ್ ಮೋದಿ ಸಲಿಂಗ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕೆಲವು ಮಂದಿ ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ದೊರಕಿಸಿಕೊಡಲು ಹೋರಾಟ ಮಾಡುತ್ತಿದ್ದಾರೆ. ಇಂಥ ಕಾನೂನು ರೂಪಿಸುವುದರಿಂದ ದೇಶದ ಸಂಸ್ಕೃತಿಗೆ ಧಕ್ಕೆಯಾಗಲಿದೆ. ಹೀಗಾಗಿ ಈ ವಿಚಾರವಾಗಿ ನ್ಯಾಯಾಂಗವು ಯಾವುದೇ ತೀರ್ಪು ನೀಡಬಾರದು ಎಂದು ಹೇಳಿದ್ದರು. ಜತೆಗೆ, ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ದೊರಕಿಸಿಕೊಡಲು ನಡೆಯುವ ಹೋರಾಟವನ್ನು ಸರ್ಕಾರ ತೀವ್ರವಾಗಿ ವಿರೋಧಿಸಬೇಕು. ಈ ವಿಚಾರವಾಗಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು. ಬಿಜೆಪಿಯಂತೂ ಸಲಿಂಗ ವಿವಾಹವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Sat, 24 December 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್