AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಾಬ್​ ಮಲ್ಲಿಕ್​ ಬೆನ್ನು ಬಿದ್ದ ಸಮೀರ್​ ವಾಂಖೆಡೆ ತಂದೆ; ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲು

ನವಾಬ್​ ಮಲ್ಲಿಕ್​ ಸಂಬಂಧಿ ಸಮೀರ್​ ಖಾನ್​ ಡ್ರಗ್ಸ್​ ಕೇಸ್​​ನಲ್ಲಿ ಬಂಧಿತರಾಗಿ ಎಂಟು ತಿಂಗಳು ಜೈಲಿನಲ್ಲಿದ್ದರು. ಇದೇ ಕಾರಣಕ್ಕೆ ಅವರೀಗ ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಧ್ಯಾನ್​ದೇವ್​ ಹೇಳಿದ್ದಾರೆ. 

ನವಾಬ್​ ಮಲ್ಲಿಕ್​ ಬೆನ್ನು ಬಿದ್ದ ಸಮೀರ್​ ವಾಂಖೆಡೆ ತಂದೆ; ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲು
ನವಾಬ್​ ಮಲ್ಲಿಕ್​​
TV9 Web
| Edited By: |

Updated on: Nov 08, 2021 | 11:17 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಾಗಿನಿಂದ ಎನ್​ಸಿಬಿ ವಲಯ ನಿರ್ದೇಶಕ ಸಮೀರ್​ ವಾಂಖೆಡೆ ಸುದ್ದಿಯಲ್ಲಿದ್ದಾರೆ. ಈಗಂತೂ  ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈ ಮಧ್ಯೆ ಸಮೀರ್​ ವಾಂಖೆಡೆ ಅವರ ಕುಟುಂಬದ ಬಗ್ಗೆ ಹಲವು ಆರೋಪಗಳನ್ನು ಮಾಡಿರುವ  ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್ ವಿರುದ್ಧ ಸಮೀರ್​ ವಾಂಖೆಡೆ ತಂದೆ ಧ್ಯಾನ್​​ದೇವ್​ ಕಚ್ರುಜಿ ವಾಂಖೆಡೆ 1.25 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಆದರೆ ಅಷ್ಟಕ್ಕೇ ಸುಮ್ಮನಾಗದೆ ಈಗ ಮತ್ತೆ ನವಾಬ್​ ಮಲ್ಲಿಕ್​ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ. ಮುಂಬೈನ ಓಶಿವಾರಾ ವಿಭಾಗದ ಎಸಿಪಿಗೇ ನೇರವಾಗಿ ದೂರು ನೀಡಿದ್ದಾರೆ.  

ನಾವು ಪರಿಶಿಷ್ಟ ಜಾತಿಗಳ ಅಡಿಯಲ್ಲಿ ಬರುವ ಮಹಾರ್​ ಸಮುದಾಯಕ್ಕೆ ಸೇರಿದ್ದೇವೆ. ಈ ಸಂಬಂಧ ಸರ್ಕಾರಿ ಅಧಿಕಾರಿಗಳು ನೀಡಿರುವ ಜಾತಿ-ಪ್ರಮಾಣ ಪತ್ರವೂ ನಮ್ಮ ಬಳಿ ಇದೆ.  ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಅವರು ನಮ್ಮ ಕುಟುಂಬ ಮತ್ತು ಜಾತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮಾನಹಾನಿಕರ, ನಿಂದನೀಯ ಮಾತುಗಳನ್ನಾಡಿದ್ದಾರೆ. ಟೀಕೆ ಮಾಡಿದ್ದಾರೆ ಎಂದು ಧ್ಯಾನ್​ದೇವ್​ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.  ನವಾಬ್​ ಮಲ್ಲಿಕ್​ ಸಂಬಂಧಿ ಸಮೀರ್​ ಖಾನ್​ ಡ್ರಗ್ಸ್​ ಕೇಸ್​​ನಲ್ಲಿ ಬಂಧಿತರಾಗಿ ಎಂಟು ತಿಂಗಳು ಜೈಲಿನಲ್ಲಿದ್ದರು. ಇದೇ ಕಾರಣಕ್ಕೆ ಅವರೀಗ ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಧ್ಯಾನ್​ದೇವ್​ ಹೇಳಿದ್ದಾರೆ.  ನವಾಬ್​ ಮಲ್ಲಿಕ್​ ಉದ್ದೇಶಪೂರ್ವಕವಾಗಿಯೇ ನಮ್ಮ ಜಾತಿ, ಕುಟುಂಬವನ್ನು ಕೀಳಾಗಿ ನೋಡುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.   ನವಾಬ್​ ಮಲ್ಲಿಕ್​ ನಮ್ಮ ಕುಟುಂಬದ ವಿರುದ್ಧ ಮಾಡಿದ ಆರೋಪಗಳ ವಿಡಿಯೋ, ಹೇಳಿಕೆಗಳೆಲ್ಲವೂ ನನ್ನ ಬಳಿ ಇದ್ದು, ಸಾಕ್ಷಿಗೆ ಬೇಕಾದರೆ ಕೊಡುತ್ತೇನೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಮೀನುಗಾರನ ಹತ್ಯೆ ಮಾಡಿದ ಪಾಕ್​ ನೌಕಾಪಡೆ ವಿರುದ್ಧ ಭಾರತ ಸರ್ಕಾರ ಕೆಂಡಾಮಂಡಲ; ಹಿರಿಯ ರಾಜತಾಂತ್ರಿಕನಿಗೆ ಖಡಕ್​ ಎಚ್ಚರಿಕೆ​

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ