AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಾಬ್​ ಮಲ್ಲಿಕ್​ ಬೆನ್ನು ಬಿದ್ದ ಸಮೀರ್​ ವಾಂಖೆಡೆ ತಂದೆ; ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲು

ನವಾಬ್​ ಮಲ್ಲಿಕ್​ ಸಂಬಂಧಿ ಸಮೀರ್​ ಖಾನ್​ ಡ್ರಗ್ಸ್​ ಕೇಸ್​​ನಲ್ಲಿ ಬಂಧಿತರಾಗಿ ಎಂಟು ತಿಂಗಳು ಜೈಲಿನಲ್ಲಿದ್ದರು. ಇದೇ ಕಾರಣಕ್ಕೆ ಅವರೀಗ ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಧ್ಯಾನ್​ದೇವ್​ ಹೇಳಿದ್ದಾರೆ. 

ನವಾಬ್​ ಮಲ್ಲಿಕ್​ ಬೆನ್ನು ಬಿದ್ದ ಸಮೀರ್​ ವಾಂಖೆಡೆ ತಂದೆ; ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲು
ನವಾಬ್​ ಮಲ್ಲಿಕ್​​
TV9 Web
| Edited By: |

Updated on: Nov 08, 2021 | 11:17 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಾಗಿನಿಂದ ಎನ್​ಸಿಬಿ ವಲಯ ನಿರ್ದೇಶಕ ಸಮೀರ್​ ವಾಂಖೆಡೆ ಸುದ್ದಿಯಲ್ಲಿದ್ದಾರೆ. ಈಗಂತೂ  ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈ ಮಧ್ಯೆ ಸಮೀರ್​ ವಾಂಖೆಡೆ ಅವರ ಕುಟುಂಬದ ಬಗ್ಗೆ ಹಲವು ಆರೋಪಗಳನ್ನು ಮಾಡಿರುವ  ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್ ವಿರುದ್ಧ ಸಮೀರ್​ ವಾಂಖೆಡೆ ತಂದೆ ಧ್ಯಾನ್​​ದೇವ್​ ಕಚ್ರುಜಿ ವಾಂಖೆಡೆ 1.25 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಆದರೆ ಅಷ್ಟಕ್ಕೇ ಸುಮ್ಮನಾಗದೆ ಈಗ ಮತ್ತೆ ನವಾಬ್​ ಮಲ್ಲಿಕ್​ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ. ಮುಂಬೈನ ಓಶಿವಾರಾ ವಿಭಾಗದ ಎಸಿಪಿಗೇ ನೇರವಾಗಿ ದೂರು ನೀಡಿದ್ದಾರೆ.  

ನಾವು ಪರಿಶಿಷ್ಟ ಜಾತಿಗಳ ಅಡಿಯಲ್ಲಿ ಬರುವ ಮಹಾರ್​ ಸಮುದಾಯಕ್ಕೆ ಸೇರಿದ್ದೇವೆ. ಈ ಸಂಬಂಧ ಸರ್ಕಾರಿ ಅಧಿಕಾರಿಗಳು ನೀಡಿರುವ ಜಾತಿ-ಪ್ರಮಾಣ ಪತ್ರವೂ ನಮ್ಮ ಬಳಿ ಇದೆ.  ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಅವರು ನಮ್ಮ ಕುಟುಂಬ ಮತ್ತು ಜಾತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮಾನಹಾನಿಕರ, ನಿಂದನೀಯ ಮಾತುಗಳನ್ನಾಡಿದ್ದಾರೆ. ಟೀಕೆ ಮಾಡಿದ್ದಾರೆ ಎಂದು ಧ್ಯಾನ್​ದೇವ್​ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.  ನವಾಬ್​ ಮಲ್ಲಿಕ್​ ಸಂಬಂಧಿ ಸಮೀರ್​ ಖಾನ್​ ಡ್ರಗ್ಸ್​ ಕೇಸ್​​ನಲ್ಲಿ ಬಂಧಿತರಾಗಿ ಎಂಟು ತಿಂಗಳು ಜೈಲಿನಲ್ಲಿದ್ದರು. ಇದೇ ಕಾರಣಕ್ಕೆ ಅವರೀಗ ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಧ್ಯಾನ್​ದೇವ್​ ಹೇಳಿದ್ದಾರೆ.  ನವಾಬ್​ ಮಲ್ಲಿಕ್​ ಉದ್ದೇಶಪೂರ್ವಕವಾಗಿಯೇ ನಮ್ಮ ಜಾತಿ, ಕುಟುಂಬವನ್ನು ಕೀಳಾಗಿ ನೋಡುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.   ನವಾಬ್​ ಮಲ್ಲಿಕ್​ ನಮ್ಮ ಕುಟುಂಬದ ವಿರುದ್ಧ ಮಾಡಿದ ಆರೋಪಗಳ ವಿಡಿಯೋ, ಹೇಳಿಕೆಗಳೆಲ್ಲವೂ ನನ್ನ ಬಳಿ ಇದ್ದು, ಸಾಕ್ಷಿಗೆ ಬೇಕಾದರೆ ಕೊಡುತ್ತೇನೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಮೀನುಗಾರನ ಹತ್ಯೆ ಮಾಡಿದ ಪಾಕ್​ ನೌಕಾಪಡೆ ವಿರುದ್ಧ ಭಾರತ ಸರ್ಕಾರ ಕೆಂಡಾಮಂಡಲ; ಹಿರಿಯ ರಾಜತಾಂತ್ರಿಕನಿಗೆ ಖಡಕ್​ ಎಚ್ಚರಿಕೆ​

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?