AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಾಬ್​ ಮಲ್ಲಿಕ್​ ಬೆನ್ನು ಬಿದ್ದ ಸಮೀರ್​ ವಾಂಖೆಡೆ ತಂದೆ; ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲು

ನವಾಬ್​ ಮಲ್ಲಿಕ್​ ಸಂಬಂಧಿ ಸಮೀರ್​ ಖಾನ್​ ಡ್ರಗ್ಸ್​ ಕೇಸ್​​ನಲ್ಲಿ ಬಂಧಿತರಾಗಿ ಎಂಟು ತಿಂಗಳು ಜೈಲಿನಲ್ಲಿದ್ದರು. ಇದೇ ಕಾರಣಕ್ಕೆ ಅವರೀಗ ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಧ್ಯಾನ್​ದೇವ್​ ಹೇಳಿದ್ದಾರೆ. 

ನವಾಬ್​ ಮಲ್ಲಿಕ್​ ಬೆನ್ನು ಬಿದ್ದ ಸಮೀರ್​ ವಾಂಖೆಡೆ ತಂದೆ; ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲು
ನವಾಬ್​ ಮಲ್ಲಿಕ್​​
TV9 Web
| Edited By: |

Updated on: Nov 08, 2021 | 11:17 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಾಗಿನಿಂದ ಎನ್​ಸಿಬಿ ವಲಯ ನಿರ್ದೇಶಕ ಸಮೀರ್​ ವಾಂಖೆಡೆ ಸುದ್ದಿಯಲ್ಲಿದ್ದಾರೆ. ಈಗಂತೂ  ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈ ಮಧ್ಯೆ ಸಮೀರ್​ ವಾಂಖೆಡೆ ಅವರ ಕುಟುಂಬದ ಬಗ್ಗೆ ಹಲವು ಆರೋಪಗಳನ್ನು ಮಾಡಿರುವ  ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್ ವಿರುದ್ಧ ಸಮೀರ್​ ವಾಂಖೆಡೆ ತಂದೆ ಧ್ಯಾನ್​​ದೇವ್​ ಕಚ್ರುಜಿ ವಾಂಖೆಡೆ 1.25 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಆದರೆ ಅಷ್ಟಕ್ಕೇ ಸುಮ್ಮನಾಗದೆ ಈಗ ಮತ್ತೆ ನವಾಬ್​ ಮಲ್ಲಿಕ್​ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ. ಮುಂಬೈನ ಓಶಿವಾರಾ ವಿಭಾಗದ ಎಸಿಪಿಗೇ ನೇರವಾಗಿ ದೂರು ನೀಡಿದ್ದಾರೆ.  

ನಾವು ಪರಿಶಿಷ್ಟ ಜಾತಿಗಳ ಅಡಿಯಲ್ಲಿ ಬರುವ ಮಹಾರ್​ ಸಮುದಾಯಕ್ಕೆ ಸೇರಿದ್ದೇವೆ. ಈ ಸಂಬಂಧ ಸರ್ಕಾರಿ ಅಧಿಕಾರಿಗಳು ನೀಡಿರುವ ಜಾತಿ-ಪ್ರಮಾಣ ಪತ್ರವೂ ನಮ್ಮ ಬಳಿ ಇದೆ.  ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಅವರು ನಮ್ಮ ಕುಟುಂಬ ಮತ್ತು ಜಾತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮಾನಹಾನಿಕರ, ನಿಂದನೀಯ ಮಾತುಗಳನ್ನಾಡಿದ್ದಾರೆ. ಟೀಕೆ ಮಾಡಿದ್ದಾರೆ ಎಂದು ಧ್ಯಾನ್​ದೇವ್​ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.  ನವಾಬ್​ ಮಲ್ಲಿಕ್​ ಸಂಬಂಧಿ ಸಮೀರ್​ ಖಾನ್​ ಡ್ರಗ್ಸ್​ ಕೇಸ್​​ನಲ್ಲಿ ಬಂಧಿತರಾಗಿ ಎಂಟು ತಿಂಗಳು ಜೈಲಿನಲ್ಲಿದ್ದರು. ಇದೇ ಕಾರಣಕ್ಕೆ ಅವರೀಗ ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಧ್ಯಾನ್​ದೇವ್​ ಹೇಳಿದ್ದಾರೆ.  ನವಾಬ್​ ಮಲ್ಲಿಕ್​ ಉದ್ದೇಶಪೂರ್ವಕವಾಗಿಯೇ ನಮ್ಮ ಜಾತಿ, ಕುಟುಂಬವನ್ನು ಕೀಳಾಗಿ ನೋಡುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.   ನವಾಬ್​ ಮಲ್ಲಿಕ್​ ನಮ್ಮ ಕುಟುಂಬದ ವಿರುದ್ಧ ಮಾಡಿದ ಆರೋಪಗಳ ವಿಡಿಯೋ, ಹೇಳಿಕೆಗಳೆಲ್ಲವೂ ನನ್ನ ಬಳಿ ಇದ್ದು, ಸಾಕ್ಷಿಗೆ ಬೇಕಾದರೆ ಕೊಡುತ್ತೇನೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಮೀನುಗಾರನ ಹತ್ಯೆ ಮಾಡಿದ ಪಾಕ್​ ನೌಕಾಪಡೆ ವಿರುದ್ಧ ಭಾರತ ಸರ್ಕಾರ ಕೆಂಡಾಮಂಡಲ; ಹಿರಿಯ ರಾಜತಾಂತ್ರಿಕನಿಗೆ ಖಡಕ್​ ಎಚ್ಚರಿಕೆ​

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ