AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sameer Wankhede: ಸಮೀರ್ ವಾಂಖೆಡೆ ಜನ್ಮತಃ ಮುಸ್ಲಿಂ ಅಲ್ಲ; ಎನ್​ಸಿಬಿ ಮಾಜಿ ಅಧಿಕಾರಿಗೆ ಜಾತಿ ಸರ್ಟಿಫಿಕೆಟ್​ ಕೇಸ್​​ನಲ್ಲಿ ಕ್ಲೀನ್ ಚಿಟ್

ಸಮೀರ್ ವಾಂಖೆಡೆ ಜನ್ಮತಃ ಮುಸ್ಲಿಂ ಅಲ್ಲ. ಅವರು ಮತ್ತು ಅವರ ತಂದೆ ಇಸ್ಲಾಂಗೆ ಮತಾಂತರಗೊಂಡಿರುವುದು ಸಾಬೀತಾಗಿಲ್ಲ. ಅವರು ಪರಿಶಿಷ್ಟ ಮಹಾರ್-37 ಸಮುದಾಯಕ್ಕೆ ಸೇರಿದವರು ಎಂದು ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹೇಳಲಾಗಿದೆ.

Sameer Wankhede: ಸಮೀರ್ ವಾಂಖೆಡೆ ಜನ್ಮತಃ ಮುಸ್ಲಿಂ ಅಲ್ಲ; ಎನ್​ಸಿಬಿ ಮಾಜಿ ಅಧಿಕಾರಿಗೆ ಜಾತಿ ಸರ್ಟಿಫಿಕೆಟ್​ ಕೇಸ್​​ನಲ್ಲಿ ಕ್ಲೀನ್ ಚಿಟ್
TV9 Web
| Updated By: ಸುಷ್ಮಾ ಚಕ್ರೆ|

Updated on:Aug 13, 2022 | 1:41 PM

Share

ನವದೆಹಲಿ: ಎನ್​ಸಿಬಿಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ​ (Sameer Wankhede) ಮೂಲತಃ ಮುಸ್ಲಿಂ ಆಗಿದ್ದು, ಅವರು ನಕಲಿ ಜಾತಿ ಪ್ರಮಾಣಪತ್ರ ನೀಡಿ ಮೀಸಲಾತಿ ಕೋಟಾದಡಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎಂದು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಆರೋಪಿಸಿದ್ದರು. ಆದರೆ, ಈ ಆರೋಪದಲ್ಲಿ ಸಮೀರ್ ವಾಂಖೆಡೆಗೆ ಜಾತಿ ಪರಿಶೀಲನಾ ಸಮಿತಿಯಿಂದ ಕ್ಲೀನ್​ಚಿಟ್ ಸಿಕ್ಕಿದೆ. ಸಮೀರ್ ವಾಂಖೆಡೆ ಜನ್ಮತಃ ಮುಸ್ಲಿಂ ಅಲ್ಲ. ಅವರು ಮೂಲತಃ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಸಮೀರ್ ವಾಂಖೆಡೆ ಹಾಗೂ ಅವರ ತಂದೆ ಧ್ಯಾನೇಶ್ವರ್ ವಾಂಖೆಡೆ ಮುಸ್ಲಿಂ ಧರ್ಮಕ್ಕೆ ಮತಾಂತರದ ಯಾವುದೇ ಸಾಕ್ಷ್ಯ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಮುಂಬೈ ಎನ್‌ಸಿಬಿ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಜಾತಿ ಪರಿಶೀಲನಾ ಸಮಿತಿಯಿಂದ ಕ್ಲೀನ್ ಚಿಟ್ ಪಡೆದಿದ್ದಾರೆ. ಸಮೀರ್ ವಾಂಖೆಡೆ ಜನ್ಮತಃ ಮುಸ್ಲಿಂ ಅಲ್ಲ. ಅವರು ಮತ್ತು ಅವರ ತಂದೆ ಇಸ್ಲಾಂಗೆ ಮತಾಂತರಗೊಂಡಿರುವುದು ಸಾಬೀತಾಗಿಲ್ಲ. ಅವರು ಪರಿಶಿಷ್ಟ ಮಹಾರ್-37 ಸಮುದಾಯಕ್ಕೆ ಸೇರಿದವರು ಎಂಬುದು ಸಾಬೀತಾಗಿದೆ ಎಂದು ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ
Image
Rahul Gandhi: ಪ್ರಧಾನಿ ಮೋದಿ ಚೀನಾ ಜೊತೆ ಸೇರಿ ತ್ರಿವರ್ಣ ಧ್ವಜದ ಒಪ್ಪಂದ ಮಾಡಿಕೊಂಡಿದ್ದಾರೆ; ರಾಹುಲ್ ಗಾಂಧಿ ಟೀಕೆ
Image
Independence Day 2022: ಭಾರತದ ಇತಿಹಾಸದಲ್ಲಿ ವಿಭಜನೆಯ ಭೀಕರತೆಯನ್ನು ಮರೆಯಬಾರದು, ಯುಪಿಯಲ್ಲಿ ವಿಭಜನೆಯ ಸ್ಮರಣೆ
Image
ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜ ಹಾಕಿಕೊಂಡ ಆರ್​ಎಸ್​ಎಸ್​

ಸದ್ಯಕ್ಕೆ ಮಹಾರಾಷ್ಟ್ರದಲ್ಲಿ ಅಧಿಕಾರ ಬದಲಾವಣೆ ಆಗಿದೆ. ಉದ್ಧವ್ ಠಾಕ್ರೆಯವರ ಸರ್ಕಾರ ಕೆಳಗುರುಳಿ, ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಮಹಾ ವಿಕಾಸ್ ಅಘಾಡಿ ಸರ್ಕಾರದ ಅವಧಿಯಲ್ಲಿ ಸಮೀರ್ ವಾಂಖೆಡೆ ಅವರ ನಿಖರವಾದ ಜಾತಿಯ ಬಗ್ಗೆ ಅವರು ಮುಸ್ಲಿಮರೆಂದು, ದಲಿತರೆಂದು ಅನೇಕ ವಾದಗಳನ್ನು ಮಾಡಲಾಗಿತ್ತು. ನವಾಬ್ ಮಲಿಕ್ ಈ ವಿಷಯವನ್ನು ಮುಂದಿಟ್ಟುಕೊಂಡು ಸಮೀರ್ ವಾಂಖೆಡೆ ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಆದರೆ ಇದೀಗ ವಾಂಖೆಡೆಗೆ ಕ್ಲೀನ್ ಚಿಟ್ ಸಿಕ್ಕಿದೆ.

ಇದನ್ನೂ ಓದಿ: Nawab Malik: ಸಮೀರ್ ವಾಂಖೆಡೆ ವಿರುದ್ಧದ ಹೇಳಿಕೆಗೆ ಬಾಂಬೆ ಹೈಕೋರ್ಟ್​ಗೆ ಬೇಷರತ್ ಕ್ಷಮೆ ಯಾಚಿಸಿದ ನವಾಬ್ ಮಲಿಕ್

ನಕಲಿ ಜಾತಿ ಪ್ರಮಾಣ ಪತ್ರ ತೋರಿಸಿ ಸಮೀರ್ ವಾಂಖೆಡೆ ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎಂದು ಅಂದಿನ ಅಲ್ಪಸಂಖ್ಯಾತ ಸಚಿವ ನವಾಬ್ ಮಲಿಕ್ ಆರೋಪಿಸಿದ್ದರು. ಸಮೀರ್ ವಾಂಖೆಡೆ ಮುಸ್ಲಿಂ. ಆದರೆ, ದಲಿತನೆಂಬ ನಕಲಿ ಜಾತಿ ಸರ್ಟಿಫಿಕೇಟ್ ತೋರಿಸಿ ಮೀಸಲಾತಿ ಲಾಭ ಪಡೆದು ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎಂದು ನವಾಬ್ ಮಲಿಕ್ ಹೇಳಿದ್ದರು.

ಸಮೀರ್ ವಾಂಖೆಡೆ ಅವರ ಜಾತಿ ಪ್ರಮಾಣ ಪತ್ರವನ್ನು ಮುಂಬೈ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಪರಿಶೀಲಿಸಿತ್ತು. ಸಮೀರ್ ವಾಂಖೆಡೆ ಸಲ್ಲಿಸಿರುವ ದಾಖಲೆಗಳನ್ನೂ ಪರಿಶೀಲಿಸಲಾಗಿತ್ತು. ಈ ಎಲ್ಲಾ ಪರಿಶೀಲನೆಯ ನಂತರ ಜಾತಿ ಪರಿಶೀಲನಾ ಸಮಿತಿಯು ಸಮೀರ್ ವಾಂಖೆಡೆ ಮುಸ್ಲಿಂ ಎಂದು ಪತ್ತೆ ಮಾಡಿತ್ತು. ಇದರಿಂದಾಗಿ ಏಪ್ರಿಲ್ 29ರಂದು ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಸಮೀರ್ ವಾಂಖೆಡೆ ಅವರ ಜಾತಿ ಪ್ರಮಾಣ ಪತ್ರವನ್ನು ಏಕೆ ಮುಟ್ಟುಗೋಲು ಹಾಕಿಕೊಳ್ಳಬಾರದು ಅಥವಾ ರದ್ದುಗೊಳಿಸಬಾರದು ಎಂದು ಕೋರಿ ಸಮೀರ್ ವಾಂಖೆಡೆ ಅವರಿಗೆ ಶೋಕಾಸ್ ನೋಟಿಸ್ ಕಳುಹಿಸಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಜಾತಿ ಪರಿಶೀಲನಾ ಸಮಿತಿಯಿಂದ ಸಮೀರ್ ವಾಂಖೆಡೆ ಕ್ಲೀನ್ ಚಿಟ್ ಪಡೆದಿದ್ದಾರೆ.

ಇದನ್ನೂ ಓದಿ: Sameer Wankhede: ಆರ್ಯನ್ ಖಾನ್​ಗೆ ಕ್ಲೀನ್ ಚಿಟ್​ ಬೆನ್ನಲ್ಲೇ ಎನ್​ಸಿಬಿ ಮಾಜಿ ಮುಖ್ಯಸ್ಥ ಸಮೀರ್ ವಾಂಖೆಡೆ ಚೆನ್ನೈಗೆ ವರ್ಗಾವಣೆ

ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್​ನನ್ನು ಬಂಧಿಸಿದ ನಂತರ ಸಮೀರ್ ವಾಂಖೆಡೆ ವಿರುದ್ಧ ಆರೋಪಗಳು ಕೇಳಿಬಂದಿತ್ತು. ಸಮೀರ್ ವಾಂಖೆಡೆ ವಿರುದ್ಧದ ನಕಲಿ ಜಾತಿ ಪ್ರಮಾಣಪತ್ರ ಪ್ರಕರಣದ ತನಿಖೆ ನಡೆಸುವುದಾಗಿ ಅಂದಿನ ಮಹಾರಾಷ್ಟ್ರ ಸರ್ಕಾರ ಹೇಳಿತ್ತು. ಇತ್ತೀಚೆಗಷ್ಟೇ ಆರ್ಯನ್ ಖಾನ್ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಗದ ಕಾರಣ ಕ್ಲೀನ್ ಚಿಟ್ ನೀಡಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Sat, 13 August 22

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ