AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಾಬ್​ ಮಲ್ಲಿಕ್​ ವಿರುದ್ಧ 1.25 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಮೀರ್​ ವಾಂಖೆಡೆ ತಂದೆ

ಈಗಾಗಲೇ ಟಿವಿ, ಪತ್ರಿಕೆಗಳಲ್ಲಿ ಪ್ರಕಟವಾದ ನವಾಬ್​ ಮಲ್ಲಿಕ್​ ತಮ್ಮ ಬಗ್ಗೆ ಮಾಡಿರುವ ಆರೋಪದ ಸಂಬಂಧ ಲೇಖನಗಳು, ಟ್ವೀಟ್​ಗಳು, ಸಂದರ್ಶನಗಳನ್ನು ಡಿಲೀಟ್ ಮಾಡಬೇಕು ಎಂದೂ ಧ್ಯಾನ್​ದೇವ್ ಮನವಿ ಮಾಡಿದ್ದಾರೆ.

ನವಾಬ್​ ಮಲ್ಲಿಕ್​ ವಿರುದ್ಧ 1.25 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಮೀರ್​ ವಾಂಖೆಡೆ ತಂದೆ
ನವಾಬ್​ ಮಲ್ಲಿಕ್​​
TV9 Web
| Edited By: |

Updated on: Nov 07, 2021 | 9:29 AM

Share

ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್​ಸಿಬಿ) ವಲಯ ನಿರ್ದೇಶಕ ಸಮೀರ್​ ವಾಂಖೆಡೆ ತಂದೆ ಧ್ಯಾನ್​ದೇವ್​ ಧ್ಯಾನದೇವ್ ಕಚ್ರುಜಿ ವಾಂಖೆಡೆ ಅವರು ಮಹಾರಾಷ್ಟ್ರ ಸಂಪುಟ ಸಚಿವ ನವಾಬ್​ ಮಲ್ಲಿಕ್​ ಬಾಂಬೆ ಹೈಕೋರ್ಟ್​​​ನಲ್ಲಿ ಮಾನನಷ್ಟ 1.25 ಕೋಟಿ ರೂಪಾಯಿ ಮೊಕದ್ದಮೆ ಹೂಡಿದ್ದಾರೆ.  ಈ ಸಮೀರ್​ ವಾಂಖೆಡೆ ಕಳೆದ ತಿಂಗಳು ಶಾರುಖ್​ ಖಾನ್​ ಪುತ್ರ ಆರ್ಯನ್​​​ರನ್ನು ಬಂಧಿಸಿದಾಗಿನಿಂದಲೂ ಸುದ್ದಿಯಲ್ಲಿದ್ದಾರೆ. ಸದ್ಯ ಅವರನ್ನು ಆರ್ಯನ್​ ಖಾನ್​ ಕೇಸ್​ ಸೇರಿ ಎಲ್ಲ ಕೇಸ್​ಗಳಿಂದಲೂ ವಜಾ ಗೊಳಿಸಲಾಗಿದ್ದು ಅವರ ಜಾಗಕ್ಕೆ ಐಪಿಎಸ್​ ಅಧಿಕಾರಿ ಸಂಜಯ್​ ಕುಮಾರ್​​ರನ್ನು ನೇಮಕ ಮಾಡಲಾಗಿದೆ.

ವಾಂಖೆಡೆ ವಕೀಲ ಪರ ಅರ್ಷದ್ ಶೇಖ್ ಮಾನನಷ್ಟ ಮೊಕದ್ದಮೆ ಹೂಡಿದ್ದು, ನವಾಬ್​ ಮಲ್ಲಿಕ್​ ಅವರು, ಸಮೀರ್​ ವಾಂಖೆಡೆ ಕುಟುಂಬವನ್ನು ವಂಚಕ ಕುಟುಂಬ ಎಂದು ಕರೆದಿದ್ದಾರೆ. ಅಷ್ಟೇ ಅಲ್ಲ, ಅವರ ಧಾರ್ಮಿಕ ನಂಬಿಕೆಯನ್ನೇ ಪ್ರಶ್ನಿಸಿದ್ದಾರೆ. ವಾಂಖೆಡೆ ಕುಟುಂಬ ಹಿಂದೂಗಳಲ್ಲ ಎಂದು ಹೇಳಿದ್ದಾರೆ. ಅವರ ಇಡೀ ಕುಟುಂಬದ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಸಮೀರ್​ ವಾಂಖೆಡೆ ಕುಟುಂಬದ ಗೌರವ, ಸಾಮಾಜಿಕ ಗೌರವ, ಅವರೆಲ್ಲರ ಹೆಸರಿಗೆ ಹಾನಿ ಉಂಟು ಮಾಡಿದ್ದಾರೆ. ಇದು ಸರಿಪಡಿಸಲಾಗದ ನಷ್ಟವಾಗಿದೆ ಎಂದೂ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.  ಅಷ್ಟೇ ಅಲ್ಲ, ನವಾಬ್​ ಮಲ್ಲಿಕ್​ ಆಗಲೀ, ಅವರ ಪಕ್ಷದ ಇತರ ಸದಸ್ಯರಾಗಲೀ ತಮ್ಮ ಕುಟುಂಬದ ವಿರುದ್ಧ ಮಾತನಾಡುವುದನ್ನು ಶಾಶ್ವತವಾಗಿ ನಿಲ್ಲಿಸಬೇಕು. ಅವರಿಗೆ ಹಾಗೆ ಸೂಚನೆ ನೀಡಬೇಕು ಎಂದು ಧ್ಯಾನ್​ದೇವ್​ ಬಯಸುತ್ತಾರೆ ಎಂದು ಮಾನನಷ್ಟ ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಅದಿಷ್ಟೇ ಅಲ್ಲ, ಈಗಾಗಲೇ ಟಿವಿ, ಪತ್ರಿಕೆಗಳಲ್ಲಿ ಪ್ರಕಟವಾದ ನವಾಬ್​ ಮಲ್ಲಿಕ್​ ತಮ್ಮ ಬಗ್ಗೆ ಮಾಡಿರುವ ಆರೋಪದ ಸಂಬಂಧ ಲೇಖನಗಳು, ಟ್ವೀಟ್​ಗಳು, ಸಂದರ್ಶನಗಳನ್ನು ಡಿಲೀಟ್ ಮಾಡಬೇಕು. ಹಾಗೇ, ಈಗ ಬಾಕಿ ಉಳಿದಿರುವ ಮೊಕದ್ದಮೆಯ ಅಂತಿಮ ತೀರ್ಪು ಬರುವವರೆಗೂ ಯಾವುದೇ ಮಾಧ್ಯಮದಲ್ಲಿ ಈ ಬಗ್ಗೆ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಬೇಕು. ಈ ಸಂಬಂಧ ಕೋರ್ಟ್​ ಸೂಚನೆ ನೀಡಬೇಕು ಎಂದು ಧ್ಯಾನ್​ದೇವ್​ ಮನವಿ ಮಾಡಿದ್ದಾರೆ.

ಇನ್ನು ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರ ವಿರುದ್ಧ ಪ್ರತಿಕ್ರಿಯೆ ನೀಡಿರುವ ನವಾಬ್​ ಮಲ್ಲಿಕ್​, ನಾನು ಅನ್ಯಾಯ ಇದ್ದಲ್ಲಿ ಮಾತನಾಡುತ್ತೇನೆ. ಮಾನನಷ್ಟ ಮೊಕದ್ದಮೆಗೆಲ್ಲ ಹೆದರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Puneeth Rajkumar: ಇಂದು ಸಂಜೆ 6 ಗಂಟೆಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಕಾರ್ಯಕ್ರಮ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?