AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಾಬ್​ ಮಲ್ಲಿಕ್​ ವಿರುದ್ಧ 1.25 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಮೀರ್​ ವಾಂಖೆಡೆ ತಂದೆ

ಈಗಾಗಲೇ ಟಿವಿ, ಪತ್ರಿಕೆಗಳಲ್ಲಿ ಪ್ರಕಟವಾದ ನವಾಬ್​ ಮಲ್ಲಿಕ್​ ತಮ್ಮ ಬಗ್ಗೆ ಮಾಡಿರುವ ಆರೋಪದ ಸಂಬಂಧ ಲೇಖನಗಳು, ಟ್ವೀಟ್​ಗಳು, ಸಂದರ್ಶನಗಳನ್ನು ಡಿಲೀಟ್ ಮಾಡಬೇಕು ಎಂದೂ ಧ್ಯಾನ್​ದೇವ್ ಮನವಿ ಮಾಡಿದ್ದಾರೆ.

ನವಾಬ್​ ಮಲ್ಲಿಕ್​ ವಿರುದ್ಧ 1.25 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಮೀರ್​ ವಾಂಖೆಡೆ ತಂದೆ
ನವಾಬ್​ ಮಲ್ಲಿಕ್​​
TV9 Web
| Edited By: |

Updated on: Nov 07, 2021 | 9:29 AM

Share

ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್​ಸಿಬಿ) ವಲಯ ನಿರ್ದೇಶಕ ಸಮೀರ್​ ವಾಂಖೆಡೆ ತಂದೆ ಧ್ಯಾನ್​ದೇವ್​ ಧ್ಯಾನದೇವ್ ಕಚ್ರುಜಿ ವಾಂಖೆಡೆ ಅವರು ಮಹಾರಾಷ್ಟ್ರ ಸಂಪುಟ ಸಚಿವ ನವಾಬ್​ ಮಲ್ಲಿಕ್​ ಬಾಂಬೆ ಹೈಕೋರ್ಟ್​​​ನಲ್ಲಿ ಮಾನನಷ್ಟ 1.25 ಕೋಟಿ ರೂಪಾಯಿ ಮೊಕದ್ದಮೆ ಹೂಡಿದ್ದಾರೆ.  ಈ ಸಮೀರ್​ ವಾಂಖೆಡೆ ಕಳೆದ ತಿಂಗಳು ಶಾರುಖ್​ ಖಾನ್​ ಪುತ್ರ ಆರ್ಯನ್​​​ರನ್ನು ಬಂಧಿಸಿದಾಗಿನಿಂದಲೂ ಸುದ್ದಿಯಲ್ಲಿದ್ದಾರೆ. ಸದ್ಯ ಅವರನ್ನು ಆರ್ಯನ್​ ಖಾನ್​ ಕೇಸ್​ ಸೇರಿ ಎಲ್ಲ ಕೇಸ್​ಗಳಿಂದಲೂ ವಜಾ ಗೊಳಿಸಲಾಗಿದ್ದು ಅವರ ಜಾಗಕ್ಕೆ ಐಪಿಎಸ್​ ಅಧಿಕಾರಿ ಸಂಜಯ್​ ಕುಮಾರ್​​ರನ್ನು ನೇಮಕ ಮಾಡಲಾಗಿದೆ.

ವಾಂಖೆಡೆ ವಕೀಲ ಪರ ಅರ್ಷದ್ ಶೇಖ್ ಮಾನನಷ್ಟ ಮೊಕದ್ದಮೆ ಹೂಡಿದ್ದು, ನವಾಬ್​ ಮಲ್ಲಿಕ್​ ಅವರು, ಸಮೀರ್​ ವಾಂಖೆಡೆ ಕುಟುಂಬವನ್ನು ವಂಚಕ ಕುಟುಂಬ ಎಂದು ಕರೆದಿದ್ದಾರೆ. ಅಷ್ಟೇ ಅಲ್ಲ, ಅವರ ಧಾರ್ಮಿಕ ನಂಬಿಕೆಯನ್ನೇ ಪ್ರಶ್ನಿಸಿದ್ದಾರೆ. ವಾಂಖೆಡೆ ಕುಟುಂಬ ಹಿಂದೂಗಳಲ್ಲ ಎಂದು ಹೇಳಿದ್ದಾರೆ. ಅವರ ಇಡೀ ಕುಟುಂಬದ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಸಮೀರ್​ ವಾಂಖೆಡೆ ಕುಟುಂಬದ ಗೌರವ, ಸಾಮಾಜಿಕ ಗೌರವ, ಅವರೆಲ್ಲರ ಹೆಸರಿಗೆ ಹಾನಿ ಉಂಟು ಮಾಡಿದ್ದಾರೆ. ಇದು ಸರಿಪಡಿಸಲಾಗದ ನಷ್ಟವಾಗಿದೆ ಎಂದೂ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.  ಅಷ್ಟೇ ಅಲ್ಲ, ನವಾಬ್​ ಮಲ್ಲಿಕ್​ ಆಗಲೀ, ಅವರ ಪಕ್ಷದ ಇತರ ಸದಸ್ಯರಾಗಲೀ ತಮ್ಮ ಕುಟುಂಬದ ವಿರುದ್ಧ ಮಾತನಾಡುವುದನ್ನು ಶಾಶ್ವತವಾಗಿ ನಿಲ್ಲಿಸಬೇಕು. ಅವರಿಗೆ ಹಾಗೆ ಸೂಚನೆ ನೀಡಬೇಕು ಎಂದು ಧ್ಯಾನ್​ದೇವ್​ ಬಯಸುತ್ತಾರೆ ಎಂದು ಮಾನನಷ್ಟ ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಅದಿಷ್ಟೇ ಅಲ್ಲ, ಈಗಾಗಲೇ ಟಿವಿ, ಪತ್ರಿಕೆಗಳಲ್ಲಿ ಪ್ರಕಟವಾದ ನವಾಬ್​ ಮಲ್ಲಿಕ್​ ತಮ್ಮ ಬಗ್ಗೆ ಮಾಡಿರುವ ಆರೋಪದ ಸಂಬಂಧ ಲೇಖನಗಳು, ಟ್ವೀಟ್​ಗಳು, ಸಂದರ್ಶನಗಳನ್ನು ಡಿಲೀಟ್ ಮಾಡಬೇಕು. ಹಾಗೇ, ಈಗ ಬಾಕಿ ಉಳಿದಿರುವ ಮೊಕದ್ದಮೆಯ ಅಂತಿಮ ತೀರ್ಪು ಬರುವವರೆಗೂ ಯಾವುದೇ ಮಾಧ್ಯಮದಲ್ಲಿ ಈ ಬಗ್ಗೆ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಬೇಕು. ಈ ಸಂಬಂಧ ಕೋರ್ಟ್​ ಸೂಚನೆ ನೀಡಬೇಕು ಎಂದು ಧ್ಯಾನ್​ದೇವ್​ ಮನವಿ ಮಾಡಿದ್ದಾರೆ.

ಇನ್ನು ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರ ವಿರುದ್ಧ ಪ್ರತಿಕ್ರಿಯೆ ನೀಡಿರುವ ನವಾಬ್​ ಮಲ್ಲಿಕ್​, ನಾನು ಅನ್ಯಾಯ ಇದ್ದಲ್ಲಿ ಮಾತನಾಡುತ್ತೇನೆ. ಮಾನನಷ್ಟ ಮೊಕದ್ದಮೆಗೆಲ್ಲ ಹೆದರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Puneeth Rajkumar: ಇಂದು ಸಂಜೆ 6 ಗಂಟೆಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಕಾರ್ಯಕ್ರಮ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ