AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!

ಸ್ಯಾಮ್ಸಂಗ್ ತನ್ನ ಉತ್ಪಾದನೆಯ ಬಹುಪಾಲು ಭಾಗವನ್ನು ವಿಯೆಟ್ನಾಂ ಹಾಗೂ ಇತರ ದೇಶಗಳಿಂದ ಭಾರತಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ದೇಶದಲ್ಲಿ 40 ಬಿಲಿಯನ್ ಮೌಲ್ಯದ ಸಾಧನಗಳನ್ನು ತಯಾರಿಸಲು ಸ್ಯಾಮ್‌ಸಂಗ್ ಯೋಜಿಸಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ. “ಪಿಎಲ್‌ಐ (ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆಯಡಿ ಭಾರತಕ್ಕೆ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಲು ಸ್ಯಾಮ್‌ಸಂಗ್ ತನ್ನ ಉತ್ಪಾದನಾ ಮಾರ್ಗಗಳನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸ್ಯಾಮ್‌ಸಂಗ್​ನ ಈ ಕ್ರಮ ವಿಯೆಟ್ನಾಂನಂತಹ ವಿವಿಧ ದೇಶಗಳಲ್ಲಿರುವ ಉತ್ಪಾದನಾ ಘಟಕಗಳ ಸಾಮರ್ಥ್ಯದ ಮೇಲೆ ಭಾರಿ ಪರಿಣಾಮ ಬೀರಲಿದೆ. ಇದು ಕಾರ್ಯಗತವಾದಲ್ಲಿ, […]

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!
ಸಾಧು ಶ್ರೀನಾಥ್​
|

Updated on:Aug 18, 2020 | 5:37 PM

Share

ಸ್ಯಾಮ್ಸಂಗ್ ತನ್ನ ಉತ್ಪಾದನೆಯ ಬಹುಪಾಲು ಭಾಗವನ್ನು ವಿಯೆಟ್ನಾಂ ಹಾಗೂ ಇತರ ದೇಶಗಳಿಂದ ಭಾರತಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ದೇಶದಲ್ಲಿ 40 ಬಿಲಿಯನ್ ಮೌಲ್ಯದ ಸಾಧನಗಳನ್ನು ತಯಾರಿಸಲು ಸ್ಯಾಮ್‌ಸಂಗ್ ಯೋಜಿಸಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

“ಪಿಎಲ್‌ಐ (ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆಯಡಿ ಭಾರತಕ್ಕೆ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಲು ಸ್ಯಾಮ್‌ಸಂಗ್ ತನ್ನ ಉತ್ಪಾದನಾ ಮಾರ್ಗಗಳನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸ್ಯಾಮ್‌ಸಂಗ್​ನ ಈ ಕ್ರಮ ವಿಯೆಟ್ನಾಂನಂತಹ ವಿವಿಧ ದೇಶಗಳಲ್ಲಿರುವ ಉತ್ಪಾದನಾ ಘಟಕಗಳ ಸಾಮರ್ಥ್ಯದ ಮೇಲೆ ಭಾರಿ ಪರಿಣಾಮ ಬೀರಲಿದೆ.

ಇದು ಕಾರ್ಯಗತವಾದಲ್ಲಿ, ಭಾರತದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವುದು ಸ್ಯಾಮ್‌ಸಂಗ್‌ನ ಬಹು ದೊಡ್ಡ ಯೋಜನೆಯಾಗಿದೆ. ಸ್ಯಾಮ್‌ಸಂಗ್ ಪ್ರಸ್ತುತ ನೋಯ್ಡಾದಲ್ಲಿ ತನ್ನ ಅತಿದೊಡ್ಡ ಉತ್ಪಾದನಾ ಘಟಕವನ್ನು ಹೊಂದಿದ್ದು, ಅಲ್ಲಿ ಅದು ಭಾರತದಲ್ಲಿ ಮಾರಾಟ ಮಾಡುವ ಎಲ್ಲಾ ಫೋನ್‌ಗಳನ್ನು ತಯಾರಿಸುತ್ತಿದೆ.

ಕಂಪನಿಯು ತನ್ನ ಉತ್ಪಾದಕಗಳನ್ನು ಜಾಗತಿಕ ಮಾರುಕಟ್ಟೆಗಳಿಗೆ ಹೇರಳವಾಗಿ ರಫ್ತು ಮಾಡುವ ಗುರಿ ಹೊಂದಿದೆ. ಜೊತೆಗೆ ಭಾರತದಲ್ಲಿ ಕಾರ್ಮಿಕ ವೆಚ್ಚಗಳು ಅತ್ಯಂತ ಕಡಿಮೆ ಇರುವುದರಿಂದ ಸ್ಯಾಮ್‌ಸಂಗ್ ತನ್ನ ಉತ್ಪದನಾ ಘಟಕಗಳನ್ನು ಭಾರತದಲ್ಲಿ ನಿರ್ಮಿಸಲು ಯೋಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ:ಚೀನಾಕ್ಕೆ ಮತ್ತೊಂದು ಹೊಡೆತ! 24 ದೈತ್ಯ ಕಂಪನಿಗಳು ಭಾರತಕ್ಕೆ ಬರಲು ರೆಡಿ

Published On - 5:26 pm, Tue, 18 August 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!