AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!

ಸ್ಯಾಮ್ಸಂಗ್ ತನ್ನ ಉತ್ಪಾದನೆಯ ಬಹುಪಾಲು ಭಾಗವನ್ನು ವಿಯೆಟ್ನಾಂ ಹಾಗೂ ಇತರ ದೇಶಗಳಿಂದ ಭಾರತಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ದೇಶದಲ್ಲಿ 40 ಬಿಲಿಯನ್ ಮೌಲ್ಯದ ಸಾಧನಗಳನ್ನು ತಯಾರಿಸಲು ಸ್ಯಾಮ್‌ಸಂಗ್ ಯೋಜಿಸಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ. “ಪಿಎಲ್‌ಐ (ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆಯಡಿ ಭಾರತಕ್ಕೆ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಲು ಸ್ಯಾಮ್‌ಸಂಗ್ ತನ್ನ ಉತ್ಪಾದನಾ ಮಾರ್ಗಗಳನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸ್ಯಾಮ್‌ಸಂಗ್​ನ ಈ ಕ್ರಮ ವಿಯೆಟ್ನಾಂನಂತಹ ವಿವಿಧ ದೇಶಗಳಲ್ಲಿರುವ ಉತ್ಪಾದನಾ ಘಟಕಗಳ ಸಾಮರ್ಥ್ಯದ ಮೇಲೆ ಭಾರಿ ಪರಿಣಾಮ ಬೀರಲಿದೆ. ಇದು ಕಾರ್ಯಗತವಾದಲ್ಲಿ, […]

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 18, 2020 | 5:37 PM

Share

ಸ್ಯಾಮ್ಸಂಗ್ ತನ್ನ ಉತ್ಪಾದನೆಯ ಬಹುಪಾಲು ಭಾಗವನ್ನು ವಿಯೆಟ್ನಾಂ ಹಾಗೂ ಇತರ ದೇಶಗಳಿಂದ ಭಾರತಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ದೇಶದಲ್ಲಿ 40 ಬಿಲಿಯನ್ ಮೌಲ್ಯದ ಸಾಧನಗಳನ್ನು ತಯಾರಿಸಲು ಸ್ಯಾಮ್‌ಸಂಗ್ ಯೋಜಿಸಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

“ಪಿಎಲ್‌ಐ (ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆಯಡಿ ಭಾರತಕ್ಕೆ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಲು ಸ್ಯಾಮ್‌ಸಂಗ್ ತನ್ನ ಉತ್ಪಾದನಾ ಮಾರ್ಗಗಳನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸ್ಯಾಮ್‌ಸಂಗ್​ನ ಈ ಕ್ರಮ ವಿಯೆಟ್ನಾಂನಂತಹ ವಿವಿಧ ದೇಶಗಳಲ್ಲಿರುವ ಉತ್ಪಾದನಾ ಘಟಕಗಳ ಸಾಮರ್ಥ್ಯದ ಮೇಲೆ ಭಾರಿ ಪರಿಣಾಮ ಬೀರಲಿದೆ.

ಇದು ಕಾರ್ಯಗತವಾದಲ್ಲಿ, ಭಾರತದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವುದು ಸ್ಯಾಮ್‌ಸಂಗ್‌ನ ಬಹು ದೊಡ್ಡ ಯೋಜನೆಯಾಗಿದೆ. ಸ್ಯಾಮ್‌ಸಂಗ್ ಪ್ರಸ್ತುತ ನೋಯ್ಡಾದಲ್ಲಿ ತನ್ನ ಅತಿದೊಡ್ಡ ಉತ್ಪಾದನಾ ಘಟಕವನ್ನು ಹೊಂದಿದ್ದು, ಅಲ್ಲಿ ಅದು ಭಾರತದಲ್ಲಿ ಮಾರಾಟ ಮಾಡುವ ಎಲ್ಲಾ ಫೋನ್‌ಗಳನ್ನು ತಯಾರಿಸುತ್ತಿದೆ.

ಕಂಪನಿಯು ತನ್ನ ಉತ್ಪಾದಕಗಳನ್ನು ಜಾಗತಿಕ ಮಾರುಕಟ್ಟೆಗಳಿಗೆ ಹೇರಳವಾಗಿ ರಫ್ತು ಮಾಡುವ ಗುರಿ ಹೊಂದಿದೆ. ಜೊತೆಗೆ ಭಾರತದಲ್ಲಿ ಕಾರ್ಮಿಕ ವೆಚ್ಚಗಳು ಅತ್ಯಂತ ಕಡಿಮೆ ಇರುವುದರಿಂದ ಸ್ಯಾಮ್‌ಸಂಗ್ ತನ್ನ ಉತ್ಪದನಾ ಘಟಕಗಳನ್ನು ಭಾರತದಲ್ಲಿ ನಿರ್ಮಿಸಲು ಯೋಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ:ಚೀನಾಕ್ಕೆ ಮತ್ತೊಂದು ಹೊಡೆತ! 24 ದೈತ್ಯ ಕಂಪನಿಗಳು ಭಾರತಕ್ಕೆ ಬರಲು ರೆಡಿ

Published On - 5:26 pm, Tue, 18 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​