AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಮ್​ಸಂಗ್​ ಡಿಸ್​​ಪ್ಲೇ ತಯಾರಿಕಾ ಘಟಕ ಚೀನಾದಿಂದ ಉತ್ತರ ಪ್ರದೇಶಕ್ಕೆ ಶಿಫ್ಟ್​!

ಈ ಘಟಕ ಸ್ಥಾಪನೆಯಿಂದ ನೇರವಾಗಿ 510 ಜನರಿಗೆ ಉದ್ಯೋಗಾವಕಾಶ ಸಿಗಲಿದೆ. ಇದಲ್ಲದೆ, ನೂರಾರು ಮಂದಿಗೆ ಪರೋಕ್ಷವಾಗಿ ಕೆಲಸ ದೊರೆಯಲಿದೆ ಎಂದು ಸರ್ಕಾರ ಹೇಳಿದೆ.

ಸ್ಯಾಮ್​ಸಂಗ್​ ಡಿಸ್​​ಪ್ಲೇ ತಯಾರಿಕಾ ಘಟಕ ಚೀನಾದಿಂದ ಉತ್ತರ ಪ್ರದೇಶಕ್ಕೆ ಶಿಫ್ಟ್​!
ಸ್ಯಾಮ್​ಸಂಗ್ (ಸಂಗ್ರಹ ಚಿತ್ರ)
Follow us
ರಾಜೇಶ್ ದುಗ್ಗುಮನೆ
|

Updated on: Dec 12, 2020 | 9:51 PM

ನವದೆಹಲಿ: ಪ್ರಮುಖ ಸ್ಮಾರ್ಟ್​​ಫೋನ್​ ತಯಾರಿಕಾ ಸಂಸ್ಥೆ ಸ್ಯಾಮ್​ಸಂಗ್​ ತನ್ನ ಮೊಬೈಲ್​ ಮತ್ತು ಐಟಿ ಡಿಸ್​​ಪ್ಲೇ ನಿರ್ಮಾಣ ಘಟಕವನ್ನು ಚೀನಾದಿಂದ ಉತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡುವ ನಿರ್ಧಾರಕ್ಕೆ ಬಂದಿದೆ. ಇದಕ್ಕಾಗಿ 4,825 ಕೋಟಿ ರೂಪಾಯಿ ಹೂಡಿಕೆ ಮಾಡಲು ಕಂಪೆನಿ ಮುಂದಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿರುವುದಾಗಿ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು. ಈ ವೇಳೆ ಉತ್ತರ ಪ್ರದೇಶದಲ್ಲಿ ಸ್ಯಾಮ್​ಸಂಗ್​ ಘಟಕ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದ್ದು, ಉತ್ತರ ಕೊರಿಯಾದ ದೊಡ್ಡ ಕಂಪೆನಿ ಭಾರತದಲ್ಲಿ ಇಷ್ಟು ಬೃಹತ್​​ ಮಟ್ಟದಲ್ಲಿ ಘಟಕ ಸ್ಥಾಪನೆ ಮಾಡುತ್ತಿರುವುದು ಇದೇ ಮೊದಲು ಎಂದು ಹೆಮ್ಮೆ ವ್ಯಕ್ತಪಡಿಸಿದೆ.

ಈ ಘಟಕ ಸ್ಥಾಪನೆಯಿಂದ ನೇರವಾಗಿ 510 ಜನರಿಗೆ ಉದ್ಯೋಗಾವಕಾಶ ಸಿಗಲಿದೆ. ಇದಲ್ಲದೆ, ನೂರಾರು ಮಂದಿಗೆ ಪರೋಕ್ಷವಾಗಿ ಕೆಲಸ ದೊರೆಯಲಿದೆ ಎಂದು ಸರ್ಕಾರ ಹೇಳಿದೆ.

ಮೊಬೈಲ್​, ಟಿವಿ, ಟ್ಯಾಬ್ಲೆಟ್​ ಹಾಗೂ ವಾಚ್​ ಸೇರಿ ಇತರ ಇಲೆಕ್ಟ್ರಾನಿಕ್​ ವಸ್ತುಗಳಿಗೆ ಡಿಸ್​ಪ್ಲೇ ಅತ್ಯಗತ್ಯ. ಸ್ಯಾಮ್​ಸಂಗ್​ ತಯಾರಿಸುವ ಒಟ್ಟು ಡಿಸ್​ಪ್ಲೇ ಪೈಕಿ ಶೇ. 70 ಉತ್ತರ ಕೊರಿಯಾ, ವಿಯೆಟ್ನಾಂ ಹಾಗೂ ಚೀನಾದಲ್ಲಿ ಸಿದ್ಧವಾಗುತ್ತಿತ್ತು. ಈಗ ಚೀನಾದಲ್ಲಿರುವ ಈ ಘಟಕ ಭಾರತಕ್ಕೆ ಶಿಫ್ಟ್​ ಆಗಲಿದೆ.  ಈಗಾಗಲೇ ಸ್ಯಾಮ್​ಸಂಗ್​ ನೋಯ್ಡಾದಲ್ಲಿ ಮೊಬೈಲ್​ ತಯಾರಿಕಾ ಘಟಕವನ್ನು ಹೊಂದಿದೆ. 2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಉದ್ಘಾಟನೆ ಮಾಡಿದ್ದರು.

ಕಂಪನಿಯು ತನ್ನ ಉತ್ಪಾದಕಗಳನ್ನು ಜಾಗತಿಕ ಮಾರುಕಟ್ಟೆಗಳಿಗೆ ಹೇರಳವಾಗಿ ರಫ್ತು ಮಾಡುವ ಗುರಿ ಹೊಂದಿದೆ. ಜೊತೆಗೆ ಭಾರತದಲ್ಲಿ ಕಾರ್ಮಿಕ ವೆಚ್ಚಗಳು ಅತ್ಯಂತ ಕಡಿಮೆ ಇರುವುದರಿಂದ ಸ್ಯಾಮ್‌ಸಂಗ್ ತನ್ನ ಉತ್ಪದನಾ ಘಟಕಗಳನ್ನು ಭಾರತದಲ್ಲಿ ನಿರ್ಮಿಸಲು ಯೋಚಿಸಿದೆ ಎನ್ನಲಾಗಿದೆ.

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!

ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ