AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಮ್​ಸಂಗ್​ ಡಿಸ್​​ಪ್ಲೇ ತಯಾರಿಕಾ ಘಟಕ ಚೀನಾದಿಂದ ಉತ್ತರ ಪ್ರದೇಶಕ್ಕೆ ಶಿಫ್ಟ್​!

ಈ ಘಟಕ ಸ್ಥಾಪನೆಯಿಂದ ನೇರವಾಗಿ 510 ಜನರಿಗೆ ಉದ್ಯೋಗಾವಕಾಶ ಸಿಗಲಿದೆ. ಇದಲ್ಲದೆ, ನೂರಾರು ಮಂದಿಗೆ ಪರೋಕ್ಷವಾಗಿ ಕೆಲಸ ದೊರೆಯಲಿದೆ ಎಂದು ಸರ್ಕಾರ ಹೇಳಿದೆ.

ಸ್ಯಾಮ್​ಸಂಗ್​ ಡಿಸ್​​ಪ್ಲೇ ತಯಾರಿಕಾ ಘಟಕ ಚೀನಾದಿಂದ ಉತ್ತರ ಪ್ರದೇಶಕ್ಕೆ ಶಿಫ್ಟ್​!
ಸ್ಯಾಮ್​ಸಂಗ್ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
|

Updated on: Dec 12, 2020 | 9:51 PM

Share

ನವದೆಹಲಿ: ಪ್ರಮುಖ ಸ್ಮಾರ್ಟ್​​ಫೋನ್​ ತಯಾರಿಕಾ ಸಂಸ್ಥೆ ಸ್ಯಾಮ್​ಸಂಗ್​ ತನ್ನ ಮೊಬೈಲ್​ ಮತ್ತು ಐಟಿ ಡಿಸ್​​ಪ್ಲೇ ನಿರ್ಮಾಣ ಘಟಕವನ್ನು ಚೀನಾದಿಂದ ಉತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡುವ ನಿರ್ಧಾರಕ್ಕೆ ಬಂದಿದೆ. ಇದಕ್ಕಾಗಿ 4,825 ಕೋಟಿ ರೂಪಾಯಿ ಹೂಡಿಕೆ ಮಾಡಲು ಕಂಪೆನಿ ಮುಂದಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿರುವುದಾಗಿ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು. ಈ ವೇಳೆ ಉತ್ತರ ಪ್ರದೇಶದಲ್ಲಿ ಸ್ಯಾಮ್​ಸಂಗ್​ ಘಟಕ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದ್ದು, ಉತ್ತರ ಕೊರಿಯಾದ ದೊಡ್ಡ ಕಂಪೆನಿ ಭಾರತದಲ್ಲಿ ಇಷ್ಟು ಬೃಹತ್​​ ಮಟ್ಟದಲ್ಲಿ ಘಟಕ ಸ್ಥಾಪನೆ ಮಾಡುತ್ತಿರುವುದು ಇದೇ ಮೊದಲು ಎಂದು ಹೆಮ್ಮೆ ವ್ಯಕ್ತಪಡಿಸಿದೆ.

ಈ ಘಟಕ ಸ್ಥಾಪನೆಯಿಂದ ನೇರವಾಗಿ 510 ಜನರಿಗೆ ಉದ್ಯೋಗಾವಕಾಶ ಸಿಗಲಿದೆ. ಇದಲ್ಲದೆ, ನೂರಾರು ಮಂದಿಗೆ ಪರೋಕ್ಷವಾಗಿ ಕೆಲಸ ದೊರೆಯಲಿದೆ ಎಂದು ಸರ್ಕಾರ ಹೇಳಿದೆ.

ಮೊಬೈಲ್​, ಟಿವಿ, ಟ್ಯಾಬ್ಲೆಟ್​ ಹಾಗೂ ವಾಚ್​ ಸೇರಿ ಇತರ ಇಲೆಕ್ಟ್ರಾನಿಕ್​ ವಸ್ತುಗಳಿಗೆ ಡಿಸ್​ಪ್ಲೇ ಅತ್ಯಗತ್ಯ. ಸ್ಯಾಮ್​ಸಂಗ್​ ತಯಾರಿಸುವ ಒಟ್ಟು ಡಿಸ್​ಪ್ಲೇ ಪೈಕಿ ಶೇ. 70 ಉತ್ತರ ಕೊರಿಯಾ, ವಿಯೆಟ್ನಾಂ ಹಾಗೂ ಚೀನಾದಲ್ಲಿ ಸಿದ್ಧವಾಗುತ್ತಿತ್ತು. ಈಗ ಚೀನಾದಲ್ಲಿರುವ ಈ ಘಟಕ ಭಾರತಕ್ಕೆ ಶಿಫ್ಟ್​ ಆಗಲಿದೆ.  ಈಗಾಗಲೇ ಸ್ಯಾಮ್​ಸಂಗ್​ ನೋಯ್ಡಾದಲ್ಲಿ ಮೊಬೈಲ್​ ತಯಾರಿಕಾ ಘಟಕವನ್ನು ಹೊಂದಿದೆ. 2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಉದ್ಘಾಟನೆ ಮಾಡಿದ್ದರು.

ಕಂಪನಿಯು ತನ್ನ ಉತ್ಪಾದಕಗಳನ್ನು ಜಾಗತಿಕ ಮಾರುಕಟ್ಟೆಗಳಿಗೆ ಹೇರಳವಾಗಿ ರಫ್ತು ಮಾಡುವ ಗುರಿ ಹೊಂದಿದೆ. ಜೊತೆಗೆ ಭಾರತದಲ್ಲಿ ಕಾರ್ಮಿಕ ವೆಚ್ಚಗಳು ಅತ್ಯಂತ ಕಡಿಮೆ ಇರುವುದರಿಂದ ಸ್ಯಾಮ್‌ಸಂಗ್ ತನ್ನ ಉತ್ಪದನಾ ಘಟಕಗಳನ್ನು ಭಾರತದಲ್ಲಿ ನಿರ್ಮಿಸಲು ಯೋಚಿಸಿದೆ ಎನ್ನಲಾಗಿದೆ.

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​