AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ರೈತರ ಮಹಾಪಂಚಾಯತ್; ಲಖನೌ ಚಲೋಗೆ ಕರೆ ನೀಡಿದ ಟಿಕಾಯತ್

ಭಾರತೀಯ ಕಿಸಾನ್ ಯೂನಿಯನ್ (BKU) ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ರಾಕೇಶ್ ಟಿಕಾಯತ್ ಅವರು ನವೆಂಬರ್ 22 ರಂದು ಲಖನೌ ಚಲೋ (ಲಖನೌಗೆ ಮೆರವಣಿಗೆ Lucknow Chalo) ಕರೆ ನೀಡಿದ್ದು ರೈತರು, ಕಾರ್ಮಿಕರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮಹಾಪಂಚಾಯತ್‌ಗೆ ಸೇರಲು ಆಹ್ವಾನಿಸಿದ್ದಾರೆ.

ನಾಳೆ ರೈತರ ಮಹಾಪಂಚಾಯತ್; ಲಖನೌ ಚಲೋಗೆ ಕರೆ ನೀಡಿದ ಟಿಕಾಯತ್
ರಾಕೇಶ್ ಟಿಕಾಯತ್
TV9 Web
| Edited By: |

Updated on: Nov 21, 2021 | 6:57 PM

Share

ಲಖನೌ: ಸಂಯುಕ್ತ ಕಿಸಾನ್ ಮೋರ್ಚಾ (SKM) ಸೋಮವಾರ ಲಖನೌ ಇಕೋಗಾರ್ಡನ್‌ನಲ್ಲಿ ಎಂಎಸ್​​ಪಿ ಅಧಿಕಾರ್ ಮಹಾಪಂಚಾಯತ್ (MSP Adhikar Mahapanchayat) ಆಯೋಜಿಸಲಿದೆ. ಭಾರತೀಯ ಕಿಸಾನ್ ಯೂನಿಯನ್ (BKU) ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ರಾಕೇಶ್ ಟಿಕಾಯತ್ ಅವರು ನವೆಂಬರ್ 22 ರಂದು ಲಖನೌ ಚಲೋ (ಲಖನೌಗೆ ಮೆರವಣಿಗೆ Lucknow Chalo) ಕರೆ ನೀಡಿದ್ದು ರೈತರು, ಕಾರ್ಮಿಕರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮಹಾಪಂಚಾಯತ್‌ಗೆ ಸೇರಲು ಆಹ್ವಾನಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿದ ಟಿಕಾಯತ್ ಸರ್ಕಾರದಿಂದ ಬರುತ್ತಿರುವ ಕೃಷಿ ಕ್ಷೇತ್ರದ ಸುಧಾರಣೆಗಳು ಹುಸಿಯಾಗಿದೆ. ಈ ಸುಧಾರಣೆಗಳು ರೈತರಿಗೆ ಸಂಕಷ್ಟ ತಂದೊಡ್ಡಲಿವೆ ಎಂದರು. ಎಂಎಸ್ ಪಿ ನಲ್ಲಿ ಬೆಳೆಗಳನ್ನು ಸಂಗ್ರಹಿಸುವ ಭರವಸೆಯು ಕೃಷಿ ಮತ್ತು ರೈತರಿಗೆ ಅತಿದೊಡ್ಡ ಸುಧಾರಣೆಯಾಗಿದೆ ಎಂದು ಅವರು ಹೇಳಿದರು. ಪಶ್ಚಿಮ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ರೈತರು ಮತ್ತು ಚಳುವಳಿ ಬೆಂಬಲಿಗರು ಸೋಮವಾರ ಮಹಾಪಂಚಾಯತ್‌ನಲ್ಲಿ ಸೇರುವ ನಿರೀಕ್ಷೆಯಿದೆ.

ಬಿಕೆಯು (Asli) ಪ್ರಧಾನ ಕಾರ್ಯದರ್ಶಿ ಸುರೇಂದ್ರ ಸಿಂಗ್ ಮಾತನಾಡಿ, 3 ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಂಡ ನಂತರ ರೈತರ ವಿಶ್ವಾಸವು ಹೆಚ್ಚುತ್ತಿದೆ. ಆದ್ದರಿಂದ ಅವರು ತಮ್ಮ ಶಕ್ತಿಯನ್ನು ಪ್ರದರ್ಶಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಹಾಪಂಚಾಯತ್‌ಗೆ ಹಾಜರಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ ಅವರು ಶನಿವಾರ ಮುಜಾಫರ್‌ನಗರದಲ್ಲಿ ನಡೆದ ‘ಪರಿವರ್ತನ್ ಸಂದೇಶ್ ರ್ಯಾಲಿ’ಯಲ್ಲಿ ರೈತರಿಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಲಹೆ ನೀಡಿದ್ದು “ಪಕ್ಷವು ಯಾವಾಗಲೂ ರೈತರು ತೆಗೆದುಕೊಳ್ಳುವ ನಿರ್ಧಾರಗಳೊಂದಿಗೆ ಇರುತ್ತದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಮಹಾಪಂಚಾಯತ್‌ನಲ್ಲಿ ಹೆಚ್ಚಿನ ಜನರು ಸೇರುವುದನ್ನು ಖಚಿತಪಡಿಸಿಕೊಳ್ಳಲು ರೈತ ಮುಖಂಡರು ಹಳ್ಳಿಗಳಲ್ಲಿ ಜನರನ್ನು ತಲುಪುತ್ತಿದ್ದಾರೆ. ಈ ನಾಯಕರು ರೈತರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ ಮತ್ತು ಎಂಎಸ್‌ಪಿ ಖಾತರಿಗಾಗಿ ಹೋರಾಟ ಯಾಕೆ ಮಾಡಬೇಕು  ಎಂಬುದನ್ನು ವಿವರಿಸುತ್ತಿದ್ದಾರೆ.

ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತ ಹೋರಾಟ ಮುಂದುವರಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ಮಾಹಿತಿ

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು