AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೇಶ್​ಖಾಲಿ ಪ್ರಕರಣ: 55 ದಿನಗಳ ಬಳಿಕ ಅಂತೂ ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧನ

ಸಂದೇಶ್​ಖಾಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಭೂಕಬಳಿಕೆ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್​ ನಾಯಕ ಶಹಜಹಾನ್ ಶೇಖ್​ ಅವರನ್ನು ಬಂಧಿಸಲಾಗಿದೆ.

ಸಂದೇಶ್​ಖಾಲಿ ಪ್ರಕರಣ: 55 ದಿನಗಳ ಬಳಿಕ ಅಂತೂ ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧನ
ಶಹಜಹಾನ್ ಶೇಖ್​Image Credit source: Telegraph
ನಯನಾ ರಾಜೀವ್
|

Updated on:Feb 29, 2024 | 7:42 AM

Share

ಸಂದೇಶ್​ಖಾಲಿ(SandeshKhali) ಲೈಂಗಿಕ ದೌರ್ಜನ್ಯ ಹಾಗೂ ಭೂಕಬಳಿಕೆ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್​ ನಾಯಕ ಶಹಜಹಾನ್ ಶೇಖ್(Shahjahan Sheikh)​ ಅವರನ್ನು ಬಂಧಿಸಲಾಗಿದೆ. ಜನವರಿ 5 ರಿಂದ ಜಾರಿ ನಿರ್ದೇಶನಾಲಯ (ಇಡಿ) ತಂಡವು ಟಿಎಂಸಿ ನಾಯಕನ ನಿವಾಸಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಗುಂಪೊಂದು ದಾಳಿ ನಡೆಸಿತ್ತು, ನಂತರ ಶಹಜಹಾನ್ ಶೇಖ್ ಪರಾರಿಯಾಗಿದ್ದರು. ದಾಳಿಯಲ್ಲಿ ಕನಿಷ್ಠ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದರು.

55 ದಿನಗಳ ನಂತರ ಷಹಜಹಾನ್ ಶೇಖ್ ಬಂಧನ ಉತ್ತರ 24 ಪರಗಣ ಜಿಲ್ಲೆಯ ಮಿನಾಖಾನ್‌ನ ಅಜ್ಞಾತ ಸ್ಥಳದಿಂದ 3.00 AM ಸುಮಾರಿಗೆ ಷಹಜಹಾನ್ ಶೇಖ್ ಅವರನ್ನು ಬಂಧಿಸಲಾಯಿತು. ಬಸಿರ್‌ಹತ್‌ಗೆ ಕರೆದೊಯ್ದ ಟಿಎಂಸಿ ನಾಯಕನನ್ನು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಮಾತನಾಡಿ, ತಮ್ಮ ಸರ್ಕಾರವು ಷಹಜಾನ್ ಅವರನ್ನು ರಕ್ಷಿಸುತ್ತಿಲ್ಲ, ಹೈಕೋರ್ಟ್ ಆದೇಶವನ್ನು ಅನುಸರಿಸುತ್ತಿದೆ ಎಂದು ಹೇಳಿಕೆ ನೀಡಿದ್ದರು.

ಮತ್ತಷ್ಟು ಓದಿ: ಸಂದೇಶ್​​ಖಾಲಿ ಪ್ರಕರಣದಲ್ಲಿ ಷಹಜಹಾನ್‌ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಡಿಜಿಪಿ ಹೇಳಿದ್ದಾರೆ: ಎನ್‌ಸಿಡಬ್ಲ್ಯೂ ಅಧ್ಯಕ್ಷೆ

ಶಹಜಹಾನ್ ಶೇಖ್, ಟಿಎಂಸಿಯ ಪ್ರಬಲ ನಾಯಕರಾಗಿದ್ದಾರೆ, ಸಂದೇಶ್​ಖಾಲಿ ಘಟಕದ ಟಿಎಂಸಿ ಅಧ್ಯಕ್ಷರೂ ಆಗಿದ್ದಾರೆ. ಜನವರಿ 5 ರಂದು ಬಂಗಾಳದ ಪಡಿತರ ವಿತರಣೆ ಹಗರಣ ಪ್ರಕರಣದಲ್ಲಿ ಷಹಜಹಾನ್ ಅವರನ್ನು ಇಡಿ ವಿಚಾರಣೆಗೆ ಬಂದಾಗ ಶೇಖ್​ ತಲೆಮರೆಸಿಕೊಂಡಿದ್ದರು.

ಏನಿದು ಸಂದೇಶ್​ಖಾಲಿ ಪ್ರಕರಣ ಸಂದೇಶ್​ಖಾಲಿಯಲ್ಲಿ ವಾಸಿಸುವ ಮಹಿಳೆಯರು ಆತನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು, ಆಗ ಆತನ ಹೆಸರು ಬೆಳಕಿಗೆ ಬಂದಿತ್ತು. ಬಿಜೆಪಿ ಪಕ್ಷವೂ ಕೂಡ ಈ ವಿಚಾರವಾಗಿ ಮಮತಾ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದೆ. ಪಶ್ಚಿಮ ಬಂಗಾಳದ ಪಡಿತರ ವಿತರಣೆ ಹಗರಣದಲ್ಲಿ ಸುಮಾರು 10 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಇಡಿ ಹೇಳಿದೆ. ಇಡಿ ಮೊದಲು ಮಾಜಿ ಸಚಿವೆ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಬಂಧಿಸಿತ್ತು, ಇದರಲ್ಲಿ ಶೇಖ್​ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಶಂಕರ್​ ಆದ್ಯಾ ಭಾಗಿಯಾಗಿರುವುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:32 am, Thu, 29 February 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು