AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanitiser: ಕೊರೊನಾ ಆತಂಕ ನಿವಾರಣೆಗೂ ಮೊದಲೇ ಪಾತಾಳಕ್ಕಿಳಿದ ಸ್ಯಾನಿಟೈಸರ್​​ ವ್ಯಾಪಾರ, ಮಾಸ್ಕ್​ ಮಾರಾಟವೂ ಕುಸಿತ

Coronavirus: ಕಳೆದ ವರ್ಷ ಮಾರುಕಟ್ಟೆಗೆ ಬರುವುದರೊಳಗೆ ಮಾರಾಟವಾಗುತ್ತಿದ್ದ ಸ್ಯಾನಿಟೈಸರ್​ ಉತ್ಪನ್ನಗಳನ್ನು ತಯಾರಿಸಿದ ಕಂಪೆನಿಗಳಂತೂ ಉತ್ತಮ ಲಾಭ ಪಡೆದಿದ್ದವು. ಆದರೆ ಕಳೆದ ಆರು ತಿಂಗಳಲ್ಲಿ ಸ್ಯಾನಿಟೈಸರ್ ಮಾರಾಟ ಶೇ.80ರಷ್ಟು ಕುಸಿತ ಕಂಡಿದೆ.

Sanitiser: ಕೊರೊನಾ ಆತಂಕ ನಿವಾರಣೆಗೂ ಮೊದಲೇ ಪಾತಾಳಕ್ಕಿಳಿದ ಸ್ಯಾನಿಟೈಸರ್​​ ವ್ಯಾಪಾರ, ಮಾಸ್ಕ್​ ಮಾರಾಟವೂ ಕುಸಿತ
ಸ್ಯಾನಿಟೈಸರ್​ ಮತ್ತು ಮಾಸ್ಕ್​
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 22, 2021 | 8:05 PM

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕು (Coronavirus) ತಕ್ಕಮಟ್ಟಿಗೆ ನಿಯಂತ್ರಣವಾಗಿದೆ. ಕೊರೊನಾ ಲಸಿಕೆ ಬಂದ ಕಾರಣ ಜನ ಮತ್ತಷ್ಟು ನಿರಾಳರಾಗಿದ್ದಾರೆ. ಇಷ್ಟಾದರೂ ಸಂಪೂರ್ಣ ಅಪಾಯದಿಂದ ದೇಶ ಪಾರಾಗಿದೆ ಎಂದು ಹೇಳುವಂತಿಲ್ಲ. ಏಕೆಂದರೆ ಈಗಾಗಲೇ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ರೂಪಾಂತರಿ ಕೊರೊನಾ ಜೋರಾಗುವ ಲಕ್ಷಣಗಳು ಕಾಣುತ್ತಿವೆ. ಬ್ರಿಟನ್​, ಬ್ರೆಜಿಲ್, ದಕ್ಷಿಣ ಆಫ್ರಿಕಾ ದೇಶಗಳ ರೂಪಾಂತರಿ ಕೊರೊನಾದಿಂದ ಪಾರಾಗಲು ಎಲ್ಲಾ ರಾಜ್ಯಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿವೆ. ಏತನ್ಮಧ್ಯೆ ಕುತೂಹಲಕಾರಿ ಸಂಗತಿಯೊಂದು ಬೆಳಕಿಗೆ ಬಂದಿದ್ದು, ದೇಶದಲ್ಲಿ ಸ್ಯಾನಿಟೈಸರ್ (Sanitiser)​ ಮಾರಾಟ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಕಳೆದ ವರ್ಷ ಕೊರೊನಾ ಶುರುವಾದ ನಂತರ ಸ್ಯಾನಿಟೈಸರ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಬಂದಿತ್ತು. ಮಾರುಕಟ್ಟೆಗೆ ಬರುವುದರೊಳಗೆ ಮಾರಾಟವಾಗುತ್ತಿದ್ದ ಸ್ಯಾನಿಟೈಸರ್​ ಉತ್ಪನ್ನಗಳನ್ನು ತಯಾರಿಸಿದ ಕಂಪೆನಿಗಳಂತೂ ಉತ್ತಮ ಲಾಭ ಪಡೆದಿದ್ದವು. ಆದರೆ ಈಗ AIOCD-AWACS ಸಿದ್ಧಪಡಿಸಿದ ವರದಿಯಲ್ಲಿರುವ ದತ್ತಾಂಶದ ಪ್ರಕಾರ ಕಳೆದ ಆರು ತಿಂಗಳಲ್ಲಿ ಸ್ಯಾನಿಟೈಸರ್ ಮಾರಾಟ ಶೇ 80ರಷ್ಟು ಕುಸಿತ ಕಂಡಿದೆ.

ಕೊರೊನಾ ಶುರುವಾದ ನಂತರ 2020ರ ಜುಲೈ ತಿಂಗಳಲ್ಲಿ ಅತ್ಯಧಿಕ ಸ್ಯಾನಿಟೈಸರ್ ಮಾರಾಟವಾಗಿತ್ತು. ಮಾರ್ಚ್​ ವೇಳೆಗೆ 99,000 ಬಾಟಲ್​ಗಳಷ್ಟು ಮಾರಾಟ ಕಂಡಿದ್ದ ಸ್ಯಾನಿಟೈಸರ್ ಜುಲೈನಲ್ಲಿ 24 ಲಕ್ಷ ಬಾಟಲ್​ಗೂ ಹೆಚ್ಚು ಮಾರಾಟವಾಗುವ ಮೂಲಕ ಶೇ 2,300ರಷ್ಟು ಏರಿಕೆ ಕಂಡಿತ್ತು. ಅದಾದ ನಂತರ ಕ್ರಮೇಣ ಇಳಿಮುಖವಾಗುತ್ತಲೇ ಬಂದು ಈಗ ತೀವ್ರ ಕುಸಿತಕ್ಕೆ ಸಾಕ್ಷಿಯಾಗಿದೆ.

ಇನ್ನೊಂದು ವರದಿಯ ಪ್ರಕಾರ ಏಪ್ರಿಲ್​-ಮೇ ತಿಂಗಳ ನಂತರ ಮಾಸ್ಕ್, ಸ್ಯಾನಿಟೈಸರ್​ ಎರಡರಲ್ಲೂ ಕುಸಿತ ಕಂಡಿದ್ದು, ಕಳೆದ ಮಾರ್ಚ್​ನಿಂದ ಏರುಗತಿಯಲ್ಲಿ ಮಾರಾಟ ಕಾಣಲು ಶುರುವಾದ ಇವೆರಡೂ ಉತ್ಪನ್ನಗಳು ಇದೀಗ ಪುನಃ ಇಳಿದಿರುವುದು ಉತ್ಪಾದಕರಲ್ಲಿ ಚಿಂತೆ ಶುರುಮಾಡಿದೆ.

ಕಟ್ಟೆಚ್ಚರದಲ್ಲಿ ಕರ್ನಾಟಕ ಈ ನಡುವೆ ಕೊರೊನಾ ಎರಡನೇ ಅಲೆಯ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕರ್ನಾಟಕದಲ್ಲಿ ಕೊರೊನಾ ನಿಯಮಾವಳಿಗಳನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ. ಜನಸಾಮಾನ್ಯರು, ಗಣ್ಯರು ಯಾರೂ ಕೊರೊನಾ ನಿಯಮಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎನ್ನುವುದು ಬೇಸರದ ಸಂಗತಿ. ರಾಜ್ಯದಲ್ಲಿ ಮದುವೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮಗಳು ಎಗ್ಗಿಲ್ಲದೆ ನಡೆಯುತ್ತಿವೆ. ಅಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಯಾವುದನ್ನೂ ಪಾಲಿಸುತ್ತಿಲ್ಲ. ಮಾಸ್ಕ್ ಹಾಕಿಕೊಂಡು ನಾವೇನಾದರೂ ಹೋದರೆ ನಮಗೇ ಮಾಸ್ಕ್ ತೆಗೆಯಲು ಹೇಳುವ ಮಟ್ಟಿಗೆ ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ರೀತಿಯ ಬೆಳವಣಿಗೆ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮದುವೆಗಳಿಗೂ ಮಾರ್ಷಲ್​ ನಿಯೋಜನೆ, ನಿಯಮ ಪಾಲಿಸಿಲ್ಲ ಅಂದ್ರೆ ಕಠಿಣ ಕ್ರಮ ಮಹಾರಾಷ್ಟ್ರದಲ್ಲಿ ಮತ್ತೆ ಚುರುಕುಗೊಂಡ ಕೊರೊನಾ: ಲಾಕ್​ಡೌನ್​ ಸೂಚನೆ ನೀಡಿದ ಮುಂಬೈ ಮೇಯರ್​

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ