AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanitiser: ಕೊರೊನಾ ಆತಂಕ ನಿವಾರಣೆಗೂ ಮೊದಲೇ ಪಾತಾಳಕ್ಕಿಳಿದ ಸ್ಯಾನಿಟೈಸರ್​​ ವ್ಯಾಪಾರ, ಮಾಸ್ಕ್​ ಮಾರಾಟವೂ ಕುಸಿತ

Coronavirus: ಕಳೆದ ವರ್ಷ ಮಾರುಕಟ್ಟೆಗೆ ಬರುವುದರೊಳಗೆ ಮಾರಾಟವಾಗುತ್ತಿದ್ದ ಸ್ಯಾನಿಟೈಸರ್​ ಉತ್ಪನ್ನಗಳನ್ನು ತಯಾರಿಸಿದ ಕಂಪೆನಿಗಳಂತೂ ಉತ್ತಮ ಲಾಭ ಪಡೆದಿದ್ದವು. ಆದರೆ ಕಳೆದ ಆರು ತಿಂಗಳಲ್ಲಿ ಸ್ಯಾನಿಟೈಸರ್ ಮಾರಾಟ ಶೇ.80ರಷ್ಟು ಕುಸಿತ ಕಂಡಿದೆ.

Sanitiser: ಕೊರೊನಾ ಆತಂಕ ನಿವಾರಣೆಗೂ ಮೊದಲೇ ಪಾತಾಳಕ್ಕಿಳಿದ ಸ್ಯಾನಿಟೈಸರ್​​ ವ್ಯಾಪಾರ, ಮಾಸ್ಕ್​ ಮಾರಾಟವೂ ಕುಸಿತ
ಸ್ಯಾನಿಟೈಸರ್​ ಮತ್ತು ಮಾಸ್ಕ್​
Skanda
| Edited By: |

Updated on: Feb 22, 2021 | 8:05 PM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕು (Coronavirus) ತಕ್ಕಮಟ್ಟಿಗೆ ನಿಯಂತ್ರಣವಾಗಿದೆ. ಕೊರೊನಾ ಲಸಿಕೆ ಬಂದ ಕಾರಣ ಜನ ಮತ್ತಷ್ಟು ನಿರಾಳರಾಗಿದ್ದಾರೆ. ಇಷ್ಟಾದರೂ ಸಂಪೂರ್ಣ ಅಪಾಯದಿಂದ ದೇಶ ಪಾರಾಗಿದೆ ಎಂದು ಹೇಳುವಂತಿಲ್ಲ. ಏಕೆಂದರೆ ಈಗಾಗಲೇ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ರೂಪಾಂತರಿ ಕೊರೊನಾ ಜೋರಾಗುವ ಲಕ್ಷಣಗಳು ಕಾಣುತ್ತಿವೆ. ಬ್ರಿಟನ್​, ಬ್ರೆಜಿಲ್, ದಕ್ಷಿಣ ಆಫ್ರಿಕಾ ದೇಶಗಳ ರೂಪಾಂತರಿ ಕೊರೊನಾದಿಂದ ಪಾರಾಗಲು ಎಲ್ಲಾ ರಾಜ್ಯಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿವೆ. ಏತನ್ಮಧ್ಯೆ ಕುತೂಹಲಕಾರಿ ಸಂಗತಿಯೊಂದು ಬೆಳಕಿಗೆ ಬಂದಿದ್ದು, ದೇಶದಲ್ಲಿ ಸ್ಯಾನಿಟೈಸರ್ (Sanitiser)​ ಮಾರಾಟ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಕಳೆದ ವರ್ಷ ಕೊರೊನಾ ಶುರುವಾದ ನಂತರ ಸ್ಯಾನಿಟೈಸರ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಬಂದಿತ್ತು. ಮಾರುಕಟ್ಟೆಗೆ ಬರುವುದರೊಳಗೆ ಮಾರಾಟವಾಗುತ್ತಿದ್ದ ಸ್ಯಾನಿಟೈಸರ್​ ಉತ್ಪನ್ನಗಳನ್ನು ತಯಾರಿಸಿದ ಕಂಪೆನಿಗಳಂತೂ ಉತ್ತಮ ಲಾಭ ಪಡೆದಿದ್ದವು. ಆದರೆ ಈಗ AIOCD-AWACS ಸಿದ್ಧಪಡಿಸಿದ ವರದಿಯಲ್ಲಿರುವ ದತ್ತಾಂಶದ ಪ್ರಕಾರ ಕಳೆದ ಆರು ತಿಂಗಳಲ್ಲಿ ಸ್ಯಾನಿಟೈಸರ್ ಮಾರಾಟ ಶೇ 80ರಷ್ಟು ಕುಸಿತ ಕಂಡಿದೆ.

ಕೊರೊನಾ ಶುರುವಾದ ನಂತರ 2020ರ ಜುಲೈ ತಿಂಗಳಲ್ಲಿ ಅತ್ಯಧಿಕ ಸ್ಯಾನಿಟೈಸರ್ ಮಾರಾಟವಾಗಿತ್ತು. ಮಾರ್ಚ್​ ವೇಳೆಗೆ 99,000 ಬಾಟಲ್​ಗಳಷ್ಟು ಮಾರಾಟ ಕಂಡಿದ್ದ ಸ್ಯಾನಿಟೈಸರ್ ಜುಲೈನಲ್ಲಿ 24 ಲಕ್ಷ ಬಾಟಲ್​ಗೂ ಹೆಚ್ಚು ಮಾರಾಟವಾಗುವ ಮೂಲಕ ಶೇ 2,300ರಷ್ಟು ಏರಿಕೆ ಕಂಡಿತ್ತು. ಅದಾದ ನಂತರ ಕ್ರಮೇಣ ಇಳಿಮುಖವಾಗುತ್ತಲೇ ಬಂದು ಈಗ ತೀವ್ರ ಕುಸಿತಕ್ಕೆ ಸಾಕ್ಷಿಯಾಗಿದೆ.

ಇನ್ನೊಂದು ವರದಿಯ ಪ್ರಕಾರ ಏಪ್ರಿಲ್​-ಮೇ ತಿಂಗಳ ನಂತರ ಮಾಸ್ಕ್, ಸ್ಯಾನಿಟೈಸರ್​ ಎರಡರಲ್ಲೂ ಕುಸಿತ ಕಂಡಿದ್ದು, ಕಳೆದ ಮಾರ್ಚ್​ನಿಂದ ಏರುಗತಿಯಲ್ಲಿ ಮಾರಾಟ ಕಾಣಲು ಶುರುವಾದ ಇವೆರಡೂ ಉತ್ಪನ್ನಗಳು ಇದೀಗ ಪುನಃ ಇಳಿದಿರುವುದು ಉತ್ಪಾದಕರಲ್ಲಿ ಚಿಂತೆ ಶುರುಮಾಡಿದೆ.

ಕಟ್ಟೆಚ್ಚರದಲ್ಲಿ ಕರ್ನಾಟಕ ಈ ನಡುವೆ ಕೊರೊನಾ ಎರಡನೇ ಅಲೆಯ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕರ್ನಾಟಕದಲ್ಲಿ ಕೊರೊನಾ ನಿಯಮಾವಳಿಗಳನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ. ಜನಸಾಮಾನ್ಯರು, ಗಣ್ಯರು ಯಾರೂ ಕೊರೊನಾ ನಿಯಮಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎನ್ನುವುದು ಬೇಸರದ ಸಂಗತಿ. ರಾಜ್ಯದಲ್ಲಿ ಮದುವೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮಗಳು ಎಗ್ಗಿಲ್ಲದೆ ನಡೆಯುತ್ತಿವೆ. ಅಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಯಾವುದನ್ನೂ ಪಾಲಿಸುತ್ತಿಲ್ಲ. ಮಾಸ್ಕ್ ಹಾಕಿಕೊಂಡು ನಾವೇನಾದರೂ ಹೋದರೆ ನಮಗೇ ಮಾಸ್ಕ್ ತೆಗೆಯಲು ಹೇಳುವ ಮಟ್ಟಿಗೆ ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ರೀತಿಯ ಬೆಳವಣಿಗೆ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮದುವೆಗಳಿಗೂ ಮಾರ್ಷಲ್​ ನಿಯೋಜನೆ, ನಿಯಮ ಪಾಲಿಸಿಲ್ಲ ಅಂದ್ರೆ ಕಠಿಣ ಕ್ರಮ ಮಹಾರಾಷ್ಟ್ರದಲ್ಲಿ ಮತ್ತೆ ಚುರುಕುಗೊಂಡ ಕೊರೊನಾ: ಲಾಕ್​ಡೌನ್​ ಸೂಚನೆ ನೀಡಿದ ಮುಂಬೈ ಮೇಯರ್​

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ