AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanitiser: ಕೊರೊನಾ ಆತಂಕ ನಿವಾರಣೆಗೂ ಮೊದಲೇ ಪಾತಾಳಕ್ಕಿಳಿದ ಸ್ಯಾನಿಟೈಸರ್​​ ವ್ಯಾಪಾರ, ಮಾಸ್ಕ್​ ಮಾರಾಟವೂ ಕುಸಿತ

Coronavirus: ಕಳೆದ ವರ್ಷ ಮಾರುಕಟ್ಟೆಗೆ ಬರುವುದರೊಳಗೆ ಮಾರಾಟವಾಗುತ್ತಿದ್ದ ಸ್ಯಾನಿಟೈಸರ್​ ಉತ್ಪನ್ನಗಳನ್ನು ತಯಾರಿಸಿದ ಕಂಪೆನಿಗಳಂತೂ ಉತ್ತಮ ಲಾಭ ಪಡೆದಿದ್ದವು. ಆದರೆ ಕಳೆದ ಆರು ತಿಂಗಳಲ್ಲಿ ಸ್ಯಾನಿಟೈಸರ್ ಮಾರಾಟ ಶೇ.80ರಷ್ಟು ಕುಸಿತ ಕಂಡಿದೆ.

Sanitiser: ಕೊರೊನಾ ಆತಂಕ ನಿವಾರಣೆಗೂ ಮೊದಲೇ ಪಾತಾಳಕ್ಕಿಳಿದ ಸ್ಯಾನಿಟೈಸರ್​​ ವ್ಯಾಪಾರ, ಮಾಸ್ಕ್​ ಮಾರಾಟವೂ ಕುಸಿತ
ಸ್ಯಾನಿಟೈಸರ್​ ಮತ್ತು ಮಾಸ್ಕ್​
Skanda
| Edited By: |

Updated on: Feb 22, 2021 | 8:05 PM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕು (Coronavirus) ತಕ್ಕಮಟ್ಟಿಗೆ ನಿಯಂತ್ರಣವಾಗಿದೆ. ಕೊರೊನಾ ಲಸಿಕೆ ಬಂದ ಕಾರಣ ಜನ ಮತ್ತಷ್ಟು ನಿರಾಳರಾಗಿದ್ದಾರೆ. ಇಷ್ಟಾದರೂ ಸಂಪೂರ್ಣ ಅಪಾಯದಿಂದ ದೇಶ ಪಾರಾಗಿದೆ ಎಂದು ಹೇಳುವಂತಿಲ್ಲ. ಏಕೆಂದರೆ ಈಗಾಗಲೇ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ರೂಪಾಂತರಿ ಕೊರೊನಾ ಜೋರಾಗುವ ಲಕ್ಷಣಗಳು ಕಾಣುತ್ತಿವೆ. ಬ್ರಿಟನ್​, ಬ್ರೆಜಿಲ್, ದಕ್ಷಿಣ ಆಫ್ರಿಕಾ ದೇಶಗಳ ರೂಪಾಂತರಿ ಕೊರೊನಾದಿಂದ ಪಾರಾಗಲು ಎಲ್ಲಾ ರಾಜ್ಯಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿವೆ. ಏತನ್ಮಧ್ಯೆ ಕುತೂಹಲಕಾರಿ ಸಂಗತಿಯೊಂದು ಬೆಳಕಿಗೆ ಬಂದಿದ್ದು, ದೇಶದಲ್ಲಿ ಸ್ಯಾನಿಟೈಸರ್ (Sanitiser)​ ಮಾರಾಟ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಕಳೆದ ವರ್ಷ ಕೊರೊನಾ ಶುರುವಾದ ನಂತರ ಸ್ಯಾನಿಟೈಸರ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಬಂದಿತ್ತು. ಮಾರುಕಟ್ಟೆಗೆ ಬರುವುದರೊಳಗೆ ಮಾರಾಟವಾಗುತ್ತಿದ್ದ ಸ್ಯಾನಿಟೈಸರ್​ ಉತ್ಪನ್ನಗಳನ್ನು ತಯಾರಿಸಿದ ಕಂಪೆನಿಗಳಂತೂ ಉತ್ತಮ ಲಾಭ ಪಡೆದಿದ್ದವು. ಆದರೆ ಈಗ AIOCD-AWACS ಸಿದ್ಧಪಡಿಸಿದ ವರದಿಯಲ್ಲಿರುವ ದತ್ತಾಂಶದ ಪ್ರಕಾರ ಕಳೆದ ಆರು ತಿಂಗಳಲ್ಲಿ ಸ್ಯಾನಿಟೈಸರ್ ಮಾರಾಟ ಶೇ 80ರಷ್ಟು ಕುಸಿತ ಕಂಡಿದೆ.

ಕೊರೊನಾ ಶುರುವಾದ ನಂತರ 2020ರ ಜುಲೈ ತಿಂಗಳಲ್ಲಿ ಅತ್ಯಧಿಕ ಸ್ಯಾನಿಟೈಸರ್ ಮಾರಾಟವಾಗಿತ್ತು. ಮಾರ್ಚ್​ ವೇಳೆಗೆ 99,000 ಬಾಟಲ್​ಗಳಷ್ಟು ಮಾರಾಟ ಕಂಡಿದ್ದ ಸ್ಯಾನಿಟೈಸರ್ ಜುಲೈನಲ್ಲಿ 24 ಲಕ್ಷ ಬಾಟಲ್​ಗೂ ಹೆಚ್ಚು ಮಾರಾಟವಾಗುವ ಮೂಲಕ ಶೇ 2,300ರಷ್ಟು ಏರಿಕೆ ಕಂಡಿತ್ತು. ಅದಾದ ನಂತರ ಕ್ರಮೇಣ ಇಳಿಮುಖವಾಗುತ್ತಲೇ ಬಂದು ಈಗ ತೀವ್ರ ಕುಸಿತಕ್ಕೆ ಸಾಕ್ಷಿಯಾಗಿದೆ.

ಇನ್ನೊಂದು ವರದಿಯ ಪ್ರಕಾರ ಏಪ್ರಿಲ್​-ಮೇ ತಿಂಗಳ ನಂತರ ಮಾಸ್ಕ್, ಸ್ಯಾನಿಟೈಸರ್​ ಎರಡರಲ್ಲೂ ಕುಸಿತ ಕಂಡಿದ್ದು, ಕಳೆದ ಮಾರ್ಚ್​ನಿಂದ ಏರುಗತಿಯಲ್ಲಿ ಮಾರಾಟ ಕಾಣಲು ಶುರುವಾದ ಇವೆರಡೂ ಉತ್ಪನ್ನಗಳು ಇದೀಗ ಪುನಃ ಇಳಿದಿರುವುದು ಉತ್ಪಾದಕರಲ್ಲಿ ಚಿಂತೆ ಶುರುಮಾಡಿದೆ.

ಕಟ್ಟೆಚ್ಚರದಲ್ಲಿ ಕರ್ನಾಟಕ ಈ ನಡುವೆ ಕೊರೊನಾ ಎರಡನೇ ಅಲೆಯ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕರ್ನಾಟಕದಲ್ಲಿ ಕೊರೊನಾ ನಿಯಮಾವಳಿಗಳನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ. ಜನಸಾಮಾನ್ಯರು, ಗಣ್ಯರು ಯಾರೂ ಕೊರೊನಾ ನಿಯಮಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎನ್ನುವುದು ಬೇಸರದ ಸಂಗತಿ. ರಾಜ್ಯದಲ್ಲಿ ಮದುವೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮಗಳು ಎಗ್ಗಿಲ್ಲದೆ ನಡೆಯುತ್ತಿವೆ. ಅಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಯಾವುದನ್ನೂ ಪಾಲಿಸುತ್ತಿಲ್ಲ. ಮಾಸ್ಕ್ ಹಾಕಿಕೊಂಡು ನಾವೇನಾದರೂ ಹೋದರೆ ನಮಗೇ ಮಾಸ್ಕ್ ತೆಗೆಯಲು ಹೇಳುವ ಮಟ್ಟಿಗೆ ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ರೀತಿಯ ಬೆಳವಣಿಗೆ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮದುವೆಗಳಿಗೂ ಮಾರ್ಷಲ್​ ನಿಯೋಜನೆ, ನಿಯಮ ಪಾಲಿಸಿಲ್ಲ ಅಂದ್ರೆ ಕಠಿಣ ಕ್ರಮ ಮಹಾರಾಷ್ಟ್ರದಲ್ಲಿ ಮತ್ತೆ ಚುರುಕುಗೊಂಡ ಕೊರೊನಾ: ಲಾಕ್​ಡೌನ್​ ಸೂಚನೆ ನೀಡಿದ ಮುಂಬೈ ಮೇಯರ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!