AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಾವು ಪ್ರಕರಣ: ಸುಪ್ರೀಂ ಆದೇಶದ ಬಗ್ಗೆ ಸೇನಾ ಮುಖಂಡ ರಾವುತ್​ ಹೇಳಿದ್ದೇನು?

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ಬಿಹಾರ ಸರ್ಕಾರ ಶಿಫಾರಸು ಮಾಡಿತ್ತು. ಇದರ ಬೆನ್ನಲ್ಲೇ, ಇಂದು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಶಿವಸೇನೆ ಮುಖಂಡ ಸಂಜಯ್​ ರಾವುತ್​ ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂ ಕೋರ್ಟ್​ ತನ್ನ ಆದೇಶ ನೀಡಿದ ನಂತರ ಈ ವಿಷಯವನ್ನು ರಾಜಕೀಯವಾಗಿ ಬಳಸುವ ಉದ್ದೇಶವಿಲ್ಲ ಎಂದು ಸೇನಾ ನಾಯಕ ರಾವುತ್ ಹೇಳಿದರು. ಸರ್ವೋಚ್ಛ ನ್ಯಾಯಾಲಯದ ಆದೇಶವು ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ […]

ಸುಶಾಂತ್ ಸಾವು ಪ್ರಕರಣ: ಸುಪ್ರೀಂ ಆದೇಶದ ಬಗ್ಗೆ ಸೇನಾ ಮುಖಂಡ ರಾವುತ್​ ಹೇಳಿದ್ದೇನು?
ಸುಶಾಂತ್ ಸಿಂಗ್ ರಜಪೂತ್
ಸಾಧು ಶ್ರೀನಾಥ್​
|

Updated on:Aug 19, 2020 | 7:21 PM

Share

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ಬಿಹಾರ ಸರ್ಕಾರ ಶಿಫಾರಸು ಮಾಡಿತ್ತು. ಇದರ ಬೆನ್ನಲ್ಲೇ, ಇಂದು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಶಿವಸೇನೆ ಮುಖಂಡ ಸಂಜಯ್​ ರಾವುತ್​ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್​ ತನ್ನ ಆದೇಶ ನೀಡಿದ ನಂತರ ಈ ವಿಷಯವನ್ನು ರಾಜಕೀಯವಾಗಿ ಬಳಸುವ ಉದ್ದೇಶವಿಲ್ಲ ಎಂದು ಸೇನಾ ನಾಯಕ ರಾವುತ್ ಹೇಳಿದರು. ಸರ್ವೋಚ್ಛ ನ್ಯಾಯಾಲಯದ ಆದೇಶವು ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂಬ ಆರೋಪವನ್ನು ತಿರಸ್ಕರಿಸಿದ ರಾವುತ್​ ಇದು ನಷ್ಟವಲ್ಲ. ಕಾನೂನು ಹೋರಾಟ ನಡೆಸುವಾಗ ಅಂಥ ಸಂಗತಿಗಳು ಎದುರಾಗುತ್ತವೆ ಎಂದಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆ ನಡೆಸಲು ಮುಂಬೈ ಪೊಲೀಸರ ಸಾಮರ್ಥ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಪಿತೂರಿ ಎಂದು ರಾವುತ್​ ಹೇಳಿದರು. ನಾವು ಕೋರ್ಟ್​ ಆದೇಶದ ಪ್ರತಿಯನ್ನ ಓದುವವರೆಗೂ ಅದಕ್ಕೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಆದೇಶ ಬಂದ ನಂತರ ಅಡ್ವೊಕೇಟ್ ಜನರಲ್ ಅಥವಾ ರಾಜ್ಯ ಡಿಜಿಪಿ ಇದರ ಬಗ್ಗೆ ಮಾತನಾಡುತ್ತಾರೆ. ಮುಂಬೈ ಪೊಲೀಸರ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತುವುದು ಒಂದು ಪಿತೂರಿಯಾಗಿದೆ ಅಂತಾ ಹೇಳಿದರು.

ನನ್ನ ಪ್ರಕಾರ, ಮುಂಬೈ ಪೊಲೀಸರು ತನಿಖೆಯನ್ನು ಪರಿಣಾಮಕಾರಿಯಾಗಿ ನಡೆಸಿದರು. ಈಗ, ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ತನ್ನ ತೀರ್ಪು ನೀಡಿದೆ. ಸರ್ಕಾರದ ಭಾಗವಾಗಿರದವರು ಅದರ ಬಗ್ಗೆ ಮಾತನಾಡಬಾರದು ಎಂದು ರಾವುತ್ ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ  ಸಂಗ್ರಹಿಸಿದ್ದ ಎಲ್ಲಾ ಸಾಕ್ಷ್ಯಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಮುಂಬೈ ಪೊಲೀಸರಿಗೆ ಸೂಚಿಸಿದೆ. ಸುಶಾಂತ್ ಸಿಂಗ್ ತಂದೆಯವರ ದೂರಿನ ಮೇರೆಗೆ ರಿಯಾ ಚಕ್ರವರ್ತಿ ಮತ್ತು ಇತರ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸುವಲ್ಲಿ ಪಾಟ್ನಾ ಪೊಲೀಸರು ಕಾನೂನುಬಾಹಿರ ಕೃತ್ಯ ಎಸಗಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಪಾಟ್ನಾದಲ್ಲಿ ತನ್ನ ವಿರುದ್ಧ ದಾಖಲಾದ ಎಫ್‌ಐಆರ್​ನ ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಮನವಿಯ ಮೇರೆಗೆ ಈ ತೀರ್ಪು ಹೊರಬಿದ್ದಿದೆ. ಜೊತೆಗೆ ನಟನ ಸಾವಿನ ಬಗ್ಗೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿದರೆ ಅದರ ಬಗ್ಗೆಯೂ ತನಿಖೆ ನಡೆಸಲು ಸಿಬಿಐಗೆ ನಿರ್ದೇಶಿಸಲಾಗಿದೆ.

Published On - 7:19 pm, Wed, 19 August 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!