AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಹೆಚ್ಚು ಮತಗಳನ್ನು ಪಡೆಯಲು ಶಿವಸೇನೆಯೂ ಕಾರಣ: ಸಂಜಯ್ ರಾವತ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಹೆಚ್ಚು ಮತವನ್ನು ಗಳಿಸುವಲ್ಲಿ ಶಿವಸೇನೆಯ ಪಾತ್ರವೂ ಇದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಕಾಂಗ್ರೆಸ್​ ಹೆಚ್ಚು ಮತಗಳನ್ನು ಪಡೆಯಲು ಶಿವಸೇನೆಯೂ ಕಾರಣ: ಸಂಜಯ್ ರಾವತ್
ಸಂಜಯ್ ರಾವತ್
ನಯನಾ ರಾಜೀವ್
|

Updated on:Jun 06, 2024 | 10:48 AM

Share

ಲೋಕಸಭಾ ಚುನಾವಣೆ(Lok Sabha Election)ಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ನೇತೃತ್ವದ ಎನ್​ಡಿಎ ಬಹುಮತವನ್ನು ಪಡೆದಿದೆ. ಹಾಗೆಯೇ ಇಂಡಿ ಮೈತ್ರಿಕೂಟವು ಕೂಡ ಹೆಚ್ಚು ಸೀಟುಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್​ ಹೆಚ್ಚು ಸ್ಥಾನ ಗಳಿಸುವಲ್ಲಿ ಶಿವಸೇನೆಯ ಪಾತ್ರವೂ ಇದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

‘‘ಕಾಂಗ್ರೆಸ್​ ಹಾಗೂ ಎನ್​ಸಿಪಿಯ ಮತಗಳ ಹೆಚ್ಚಳದಲ್ಲಿ ಶಿವಸೇನೆ ಪಾತ್ರವಹಿಸಿದೆ ಎಂದು ನಿಮಗೆ ಅನಿಸುವುದಿಲ್ಲವೇ, ಶಿವಸೇನೆ ಮತ್ತು ಉದ್ಧವ್ ಠಾಕ್ರೆ ಮಹಾರಾಷ್ಟ್ರಾದ್ಯಂತ ಪ್ರಚಾರ ಮಾಡದಿದ್ದರೆ ಹೀಗಾಗುತ್ತಿತ್ತೇ, ಮಹಾ ವಿಕಾಸ್ ಅಘಾಡಿ ಬಲವಾಗಿ ಕೆಲಸ ಮಾಡುತ್ತದೆ ಮತ್ತು ನಮ್ಮ ಮನಸ್ಸಿನಲ್ಲಿ ಯಾವುದೇ ಅಹಂಕಾರವಿಲ್ಲ’’ ಎಂದರು.

ಈ ಮೊದಲು ರಾಹುಲ್ ಗಾಂಧಿ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ಧರಿದ್ದರೆ ನಾವು ವಿರೋಧಿಸುವುದಿಲ್ಲ ಅವರು ಬಹುರಾಷ್ಟ್ರೀಯ ನಾಯಕ ಎಂದು ಸಾಬೀತುಪಡಿಸಿದ್ದಾರೆ, ನಾವೆಲ್ಲರೂ ಅವರನ್ನು ಬಯಸುತ್ತೇವೆ, ನಮ್ಮ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

ಚುನಾವಣೆ ಆರಂಭವಾದಾಗಿನಿಂದ ಇಂಡಿ ಮೈತ್ರಿಕೂಟಕ್ಕೆ ಪ್ರಧಾನಿ ಹುದ್ದೆಯ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಬಿಜೆಪಿ ಸರ್ವಾಧಿಕಾರ ಆಡಳಿತದಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಲು ಈ ಮೈತ್ರಿ ಯಾವಾಗಲೂ ಹೋರಾಡಿದೆ ಮತ್ತು ಜನರು ನಮಗೆ ಮತ ಹಾಕಿದ್ದಾರೆ ಎಂದು ಹೇಳಿದ್ದರು.

ಮತ್ತಷ್ಟು ಓದಿ:Lok Sabha Election Results: ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

ಬಿಜೆಪಿ ಸ್ವಂತ ಬಲದ ಮೇಲೆ ಬಹುಮತ ಪಡೆದಿಲ್ಲ, ಬಿಜೆಪಿ ಕೇವಲ 235-240 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ ಎಂದ ಅವರು, ಬಿಜೆಪಿಯು ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿಯು ಇಷ್ಟು ಸ್ಥಾನಗಳನ್ನು ಸಿಬಿಐ, ಇಡಿ ಹಾಗೂ ಆದಾಯ ತೆರಿಗೆ ಇಲಾಖೆ ನೆರವಿನಿಂದಲೇ ಗಳಿಸಿದೆ ಎಂದು ವ್ಯಂಗ್ಯವಾಡಿದ ಸಂಜಯ್ ರಾವತ್, ಒಂದು ವೇಳೆ ಬಿಜೆಪಿಗೆ ಅಗತ್ಯ ಬೆಂಬಲವಿದ್ದರೆ ಸರ್ಕಾರ ರಚಿಸಲು ಅಡ್ಡಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದು ಪ್ರಜಾಪ್ರಭುತ್ವವಾಗಿರುವುದರಿಂದ ಅವರೇನಾದರೂ ಸರ್ಕಾರ ರಚಿಸಲು ಮುಂದಾದರೆ ನಾವದನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:47 am, Thu, 6 June 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್