AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಂದೆ ನಮ್ಮ ಜತೆ ಹಿಂದೆಂದೂ ಅಯೋಧ್ಯೆಗೆ ಬಂದಿರಲಿಲ್ಲ, ಶ್ರೀರಾಮ ದೇಶದ್ರೋಹಿಗಳಿಗೆ ಆಶೀರ್ವಾದ ಮಾಡುವುದಿಲ್ಲ: ರಾವತ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ(Eknath Shinde)ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಂದು ಅಯೋಧ್ಯೆಗೆ ಭೇಟಿ ನೀಡಿರುವ ಕುರಿತು ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. ಶಿಂದೆ ನಮ್ಮ ಜತೆ ಎಂದೂ ಅಯೋಧ್ಯೆಗೆ ಬಂದರಲಿಲ್ಲ, ಶ್ರೀರಾಮ ದೇಶದ್ರೋಹಿಗಳಿಗೆ ಎಂದೂ ಆಶೀರ್ವಾದ ಮಾಡುವುದಿಲ್ಲ ಎಂದಿದ್ದಾರೆ. ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ, ನಾನು ಕೂಡ ಹಲವು ಬಾರಿ ಅಯೋಧ್ಯೆಗೆ ಹೋಗಿದ್ದೇನೆ ಆಗ ನಮ್ಮೊಂದಿಗೆ ಯಾರೂ ಬಂದಿರಲಿಲ್ಲ, ಬಾಬ್ರಿ ವಿಚಾರ ಬಂದಾಗ ಓಡಿ ಹೋಗಿ ಈಗ ದೇಶದ್ರೋಹಿಗಳ ಹಿಂದೆ ಹೋಗುತ್ತಿದ್ದಾರೆ. ಅಂತವರಿಗೆ ಶ್ರೀರಾಮನ […]

ಶಿಂದೆ ನಮ್ಮ ಜತೆ ಹಿಂದೆಂದೂ ಅಯೋಧ್ಯೆಗೆ ಬಂದಿರಲಿಲ್ಲ, ಶ್ರೀರಾಮ ದೇಶದ್ರೋಹಿಗಳಿಗೆ ಆಶೀರ್ವಾದ ಮಾಡುವುದಿಲ್ಲ: ರಾವತ್
ಸಂಜಯ್ ರಾವತ್
Follow us
ನಯನಾ ರಾಜೀವ್
|

Updated on: Apr 09, 2023 | 2:16 PM

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ(Eknath Shinde)ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಂದು ಅಯೋಧ್ಯೆಗೆ ಭೇಟಿ ನೀಡಿರುವ ಕುರಿತು ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. ಶಿಂದೆ ನಮ್ಮ ಜತೆ ಎಂದೂ ಅಯೋಧ್ಯೆಗೆ ಬಂದರಲಿಲ್ಲ, ಶ್ರೀರಾಮ ದೇಶದ್ರೋಹಿಗಳಿಗೆ ಎಂದೂ ಆಶೀರ್ವಾದ ಮಾಡುವುದಿಲ್ಲ ಎಂದಿದ್ದಾರೆ. ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ, ನಾನು ಕೂಡ ಹಲವು ಬಾರಿ ಅಯೋಧ್ಯೆಗೆ ಹೋಗಿದ್ದೇನೆ ಆಗ ನಮ್ಮೊಂದಿಗೆ ಯಾರೂ ಬಂದಿರಲಿಲ್ಲ, ಬಾಬ್ರಿ ವಿಚಾರ ಬಂದಾಗ ಓಡಿ ಹೋಗಿ ಈಗ ದೇಶದ್ರೋಹಿಗಳ ಹಿಂದೆ ಹೋಗುತ್ತಿದ್ದಾರೆ. ಅಂತವರಿಗೆ ಶ್ರೀರಾಮನ ಆಶೀರ್ವಾದ ಸಿಗುವುದಿಲ್ಲ ಎಂದರು.

ಕಳೆದ 40 ವರ್ಷಗಳಿಂದ ನಾನು ಅಯೋಧ್ಯೆಗೆ ಹೋಗುತ್ತಿದ್ದೇನೆ, ಅಯೋಧ್ಯೆ ಪ್ರಕರಣದ ಚಳವಳಿಯಲ್ಲಿ ಭಾಗಿಯಾಗಿದ್ದೆ ಎಂದರು. ಇದೇ ಬಿಜೆಪಿ ಅಂದು ನಮ್ಮೊಂದಿಗೆ ಇರಲಿಲ್ಲ, ಬಾಬ್ರಿ ಮಸೀದಿ ವಿಚಾರ ಬಂದಾಗ ಓಡಿ ಹೋಗಿ ಈಗ ದೇಶದ್ರೋಹಿಗಳ ಬೆರಳುಗಳನ್ನು ಹಿಡಿದು ವಾಪಸಾಗುತ್ತಿದ್ದಾರೆ.

ಮತ್ತಷ್ಟು ಓದಿ: ಉದ್ಧವ್ ಠಾಕ್ರೆ ಆಪ್ತ ಸುಭಾಷ್ ದೇಸಾಯಿ ಪುತ್ರ ಭೂಷಣ್ ದೇಸಾಯಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರ್ಪಡೆ

ಆದರೆ ಶ್ರೀರಾಮ ಅವರನ್ನು ಆಶೀರ್ವಧಿಸುತ್ತಾನೆ ಎಂದುಕೊಂಡಿದ್ದೀರಾ ಖಂಡಿತವಾಗಿಯೂ ಇಲ್ಲ, ಮುಂಬೈಗೆ ಮರಳಿದ ಬಳಿಕ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ನೋಡುತ್ತಿರಿ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಅಕಾಲಿಕ ಮಳೆಯಾಗಿದೆ, ಆಲಿಕಲ್ಲು ಮಳೆಯಾಗಿ ರೈತರ ಪರಿಸ್ಥಿತಿ ಹದಗೆಟ್ಟಿದೆ, ರೈತರು ಅಳಲು ತೋಡಿಕೊಂಡಿದ್ದಾರೆ. ಈ ಪರಿಸ್ಥಿತಿಯನ್ನು ನಿಭಾಯಿಸುವ ಬದಲು ಮುಖ್ಯಮಂತ್ರಿ ಆಯೋಧ್ಯೆಗೆ ತೆರಳಿದ್ದಾರೆ.

ಜೂನ್ 2022 ರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮತ್ತು ಚುನಾವಣಾ ಆಯೋಗವು ಅವರ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆ ಬಿಲ್ಲು ಮತ್ತು ಬಾಣ ಪಡೆದ ನಂತರ ಶಿಂಧೆ ಅವರು ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ನಿರ್ಮಾಣ ಹಂತದಲ್ಲಿರುವ ರಾಮಮಂದಿರದಲ್ಲಿ ಮಹಾ ಆರತಿಯಲ್ಲಿ, ನಂತರ ಸಂಜೆ ಶರಾಯು ನದಿಯಲ್ಲಿ ಮಹಾ ಆರತಿಯಲ್ಲಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರು ಭಾನುವಾರ ರಾತ್ರಿ ಮುಂಬೈಗೆ ಹಿಂತಿರುಗಲಿದ್ದಾರೆ ಎಂದು ಅವರ ಸಹಾಯಕರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್