AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಂದೆ ನಮ್ಮ ಜತೆ ಹಿಂದೆಂದೂ ಅಯೋಧ್ಯೆಗೆ ಬಂದಿರಲಿಲ್ಲ, ಶ್ರೀರಾಮ ದೇಶದ್ರೋಹಿಗಳಿಗೆ ಆಶೀರ್ವಾದ ಮಾಡುವುದಿಲ್ಲ: ರಾವತ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ(Eknath Shinde)ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಂದು ಅಯೋಧ್ಯೆಗೆ ಭೇಟಿ ನೀಡಿರುವ ಕುರಿತು ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. ಶಿಂದೆ ನಮ್ಮ ಜತೆ ಎಂದೂ ಅಯೋಧ್ಯೆಗೆ ಬಂದರಲಿಲ್ಲ, ಶ್ರೀರಾಮ ದೇಶದ್ರೋಹಿಗಳಿಗೆ ಎಂದೂ ಆಶೀರ್ವಾದ ಮಾಡುವುದಿಲ್ಲ ಎಂದಿದ್ದಾರೆ. ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ, ನಾನು ಕೂಡ ಹಲವು ಬಾರಿ ಅಯೋಧ್ಯೆಗೆ ಹೋಗಿದ್ದೇನೆ ಆಗ ನಮ್ಮೊಂದಿಗೆ ಯಾರೂ ಬಂದಿರಲಿಲ್ಲ, ಬಾಬ್ರಿ ವಿಚಾರ ಬಂದಾಗ ಓಡಿ ಹೋಗಿ ಈಗ ದೇಶದ್ರೋಹಿಗಳ ಹಿಂದೆ ಹೋಗುತ್ತಿದ್ದಾರೆ. ಅಂತವರಿಗೆ ಶ್ರೀರಾಮನ […]

ಶಿಂದೆ ನಮ್ಮ ಜತೆ ಹಿಂದೆಂದೂ ಅಯೋಧ್ಯೆಗೆ ಬಂದಿರಲಿಲ್ಲ, ಶ್ರೀರಾಮ ದೇಶದ್ರೋಹಿಗಳಿಗೆ ಆಶೀರ್ವಾದ ಮಾಡುವುದಿಲ್ಲ: ರಾವತ್
ಸಂಜಯ್ ರಾವತ್
ನಯನಾ ರಾಜೀವ್
|

Updated on: Apr 09, 2023 | 2:16 PM

Share

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ(Eknath Shinde)ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಂದು ಅಯೋಧ್ಯೆಗೆ ಭೇಟಿ ನೀಡಿರುವ ಕುರಿತು ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. ಶಿಂದೆ ನಮ್ಮ ಜತೆ ಎಂದೂ ಅಯೋಧ್ಯೆಗೆ ಬಂದರಲಿಲ್ಲ, ಶ್ರೀರಾಮ ದೇಶದ್ರೋಹಿಗಳಿಗೆ ಎಂದೂ ಆಶೀರ್ವಾದ ಮಾಡುವುದಿಲ್ಲ ಎಂದಿದ್ದಾರೆ. ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ, ನಾನು ಕೂಡ ಹಲವು ಬಾರಿ ಅಯೋಧ್ಯೆಗೆ ಹೋಗಿದ್ದೇನೆ ಆಗ ನಮ್ಮೊಂದಿಗೆ ಯಾರೂ ಬಂದಿರಲಿಲ್ಲ, ಬಾಬ್ರಿ ವಿಚಾರ ಬಂದಾಗ ಓಡಿ ಹೋಗಿ ಈಗ ದೇಶದ್ರೋಹಿಗಳ ಹಿಂದೆ ಹೋಗುತ್ತಿದ್ದಾರೆ. ಅಂತವರಿಗೆ ಶ್ರೀರಾಮನ ಆಶೀರ್ವಾದ ಸಿಗುವುದಿಲ್ಲ ಎಂದರು.

ಕಳೆದ 40 ವರ್ಷಗಳಿಂದ ನಾನು ಅಯೋಧ್ಯೆಗೆ ಹೋಗುತ್ತಿದ್ದೇನೆ, ಅಯೋಧ್ಯೆ ಪ್ರಕರಣದ ಚಳವಳಿಯಲ್ಲಿ ಭಾಗಿಯಾಗಿದ್ದೆ ಎಂದರು. ಇದೇ ಬಿಜೆಪಿ ಅಂದು ನಮ್ಮೊಂದಿಗೆ ಇರಲಿಲ್ಲ, ಬಾಬ್ರಿ ಮಸೀದಿ ವಿಚಾರ ಬಂದಾಗ ಓಡಿ ಹೋಗಿ ಈಗ ದೇಶದ್ರೋಹಿಗಳ ಬೆರಳುಗಳನ್ನು ಹಿಡಿದು ವಾಪಸಾಗುತ್ತಿದ್ದಾರೆ.

ಮತ್ತಷ್ಟು ಓದಿ: ಉದ್ಧವ್ ಠಾಕ್ರೆ ಆಪ್ತ ಸುಭಾಷ್ ದೇಸಾಯಿ ಪುತ್ರ ಭೂಷಣ್ ದೇಸಾಯಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರ್ಪಡೆ

ಆದರೆ ಶ್ರೀರಾಮ ಅವರನ್ನು ಆಶೀರ್ವಧಿಸುತ್ತಾನೆ ಎಂದುಕೊಂಡಿದ್ದೀರಾ ಖಂಡಿತವಾಗಿಯೂ ಇಲ್ಲ, ಮುಂಬೈಗೆ ಮರಳಿದ ಬಳಿಕ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ನೋಡುತ್ತಿರಿ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಅಕಾಲಿಕ ಮಳೆಯಾಗಿದೆ, ಆಲಿಕಲ್ಲು ಮಳೆಯಾಗಿ ರೈತರ ಪರಿಸ್ಥಿತಿ ಹದಗೆಟ್ಟಿದೆ, ರೈತರು ಅಳಲು ತೋಡಿಕೊಂಡಿದ್ದಾರೆ. ಈ ಪರಿಸ್ಥಿತಿಯನ್ನು ನಿಭಾಯಿಸುವ ಬದಲು ಮುಖ್ಯಮಂತ್ರಿ ಆಯೋಧ್ಯೆಗೆ ತೆರಳಿದ್ದಾರೆ.

ಜೂನ್ 2022 ರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮತ್ತು ಚುನಾವಣಾ ಆಯೋಗವು ಅವರ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆ ಬಿಲ್ಲು ಮತ್ತು ಬಾಣ ಪಡೆದ ನಂತರ ಶಿಂಧೆ ಅವರು ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ನಿರ್ಮಾಣ ಹಂತದಲ್ಲಿರುವ ರಾಮಮಂದಿರದಲ್ಲಿ ಮಹಾ ಆರತಿಯಲ್ಲಿ, ನಂತರ ಸಂಜೆ ಶರಾಯು ನದಿಯಲ್ಲಿ ಮಹಾ ಆರತಿಯಲ್ಲಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರು ಭಾನುವಾರ ರಾತ್ರಿ ಮುಂಬೈಗೆ ಹಿಂತಿರುಗಲಿದ್ದಾರೆ ಎಂದು ಅವರ ಸಹಾಯಕರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ