AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ

Covid 19 Vaccine: ಸನೋಫಿ ಪಾಶ್ಚರ್ ಕಂಪನಿಯ ಲಸಿಕೆಯ ಮೂರನೇ ಹಂತದ ಅಧ್ಯಯನದಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಈ ಪ್ರಯೋಗದಲ್ಲಿ ಪಾಲ್ಗೊಳ್ಳುವವರ ದಾಖಲಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಶುರು ಮಾಡುತ್ತೇವೆ ಎಂದು ಕಂಪನಿಯ ಭಾರತದ ಮುಖ್ಯಸ್ಥೆ ಅನ್ನಪೂರ್ಣಾ ದಾಸ್ ತಿಳಿಸಿದ್ದಾರೆ.

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ
ಲಸಿಕೆಯ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 08, 2021 | 5:17 PM

Share

ಫ್ರೆಂಚ್​ನ ಸನೋಫಿ ಫಾರ್ಮಾ ಕಂಪನಿ ಯುಕೆಯ ಗ್ಲಾಕ್ಸೋಸ್ಮಿತ್​ಕ್ಲೈನ್ (ಜಿಎಸ್​ಕೆ) ಕಂಪನಿಯೊಂದಿಗೆ ಸೇರಿ ಅಭಿವೃದ್ಧಿ ಪಡಿಸಿದ ಕೊವಿಡ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗವನ್ನು ಭಾರತದಲ್ಲಿ ನಡೆಸಲು ಭಾರತೀಯ ಔಷಧ ನಿಯಂತ್ರಣಾ ಪ್ರಾಧಿಕಾರ (ಡಿಸಿಜಿಐ) ಅನುಮೋದನೆ ನೀಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸನೋಫಿ ಕಂಪನಿ, ನಮ್ಮ ಸಹಾಯಕ ಮರುಸಂಯೋಜನೆ-ಪ್ರೋಟೀನ್ ಕೋವಿಡ್ -19 ಲಸಿಕೆಯ ಸುರಕ್ಷತೆ, ಪರಿಣಾಮ ಮತ್ತು ರೋಗನಿರೋಧಕ ಶಕ್ತಿ ಬಗ್ಗೆ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ನ್ನು ಭಾರತದಲ್ಲಿ ನಡೆಸಲು ಗ್ರೀನ್​ ಸಿಗ್ನಲ್​ ಸಿಕ್ಕಿದೆ ಎಂದು ತಿಳಿಸಿದೆ.

ನಾವು ನಮ್ಮ ಕೊವಿಡ್ 19 ಲಸಿಕೆಯ ಮೂರನೇ ಹಂತದ ಪ್ರಯೋಗವನ್ನು ಜಾಗತಿಕವಾಗಿ ನಡೆಸುತ್ತೇವೆ. ಯುಎಸ್​, ಏಷಿಯಾ, ಆಫ್ರಿಕಾ, ಲ್ಯಾಟಿನ್​ ಅಮೆರಿಕಾಗಳಲ್ಲಿ 18 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರ ಮೇಲೆ ಪ್ರಯೋಗ ಮಾಡಲಾಗುವುದು. ಅದರಲ್ಲಿ 35 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಒಳಗೊಳ್ಳುತ್ತೇವೆ ಎಂದು ಸನೋಫಿ ತಿಳಿಸಿದೆ.

ಸನೋಫಿ ಪಾಶ್ಚರ್ ಕಂಪನಿಯ ಲಸಿಕೆಯ ಮೂರನೇ ಹಂತದ ಅಧ್ಯಯನದಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಈ ಪ್ರಯೋಗದಲ್ಲಿ ಪಾಲ್ಗೊಳ್ಳುವವರ ದಾಖಲಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಶುರು ಮಾಡುತ್ತೇವೆ ಎಂದು ಕಂಪನಿಯ ಭಾರತದ ಮುಖ್ಯಸ್ಥೆ ಅನ್ನಪೂರ್ಣಾ ದಾಸ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಿರಂತರವಾಗಿ ವಿಕಸನಗೊಳ್ಳುತ್ತಲೇ ಇದೆ. ಹಾಗಾಗಿ ಲಸಿಕೆಗಳು ಅನಿವಾರ್ಯವಾಗುತ್ತಿವೆ. ಅವಶ್ಯಕತೆಗಳಿಗೆ ಅನುಗುಣವಾಗಿ ನಾವೂ ವ್ಯಾಕ್ಸಿನ್ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದೇವೆ. ಖಂಡಿತ ನಮ್ಮ ಲಸಿಕೆಯು ಕೊವಿಡ್​ 19 ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ ಎಂಬ ನಂಬಿಕೆಯಿದೆ ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಟಿ ನಗ್ಮಾ- ಗಂಗೂಲಿ ನಡುವಿನ ಪ್ರೀತಿ ಮುರಿದು ಬಿದ್ದಿದ್ಯಾಕೆ? ನಗ್ಮಾ ಮದುವೆಯಾಗದಿರಲು ದಾದಾ ಕಾರಣನಾ?

Sanofi GSK Covid 19 Vaccine get DCGI nod for Phase 3 trial In India

Published On - 5:15 pm, Thu, 8 July 21

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!