AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಸಂತೂರ್ ಮಾಂತ್ರಿಕ ಪಂಡಿತ್ ಭಜನ್ ಸೊಪೊರಿ ನಿಧನ

Bhajan Sopori 1948ರಲ್ಲಿ ಕಾಶ್ಮೀರದ (Kashmir) ಸೊಪೊರಿ ಕಣಿವೆ ಊರಲ್ಲಿ ಜನಿಸಿದ ಇವರು ಭಾರತೀಯ ಶಾಸ್ತ್ರೀಯ ಸಂಗೀತದ ಸೂಫಿಯಾನ ಘರಾಣೆಗೆ ಸೇರಿದ್ದಾರೆ. 1953ರಲ್ಲಿ 5ವರ್ಷದವರಾಗಿದ್ದಾಗ ಸೊಪೊರಿ ಮೊದಲ ಪ್ರದರ್ಶನ ನೀಡಿದ್ದರು.

Breaking ಸಂತೂರ್ ಮಾಂತ್ರಿಕ ಪಂಡಿತ್ ಭಜನ್ ಸೊಪೊರಿ ನಿಧನ
ಸಂತೂರ್ ಮಾಂತ್ರಿಕ ಭಜನ್ ಸೊಪೊರಿ
TV9 Web
| Edited By: |

Updated on:Jun 02, 2022 | 6:22 PM

Share

ದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಂತೂರ್ (Santoor) ಮಾಂತ್ರಿಕ ಭಜನ್ ಸೊಪೊರಿ (Pandit Bhajan Sopori )ಗುರುವಾರ ಗುರುಗ್ರಾಮ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಸೊಪೊರಿಯವರು ಅವರ ಪತ್ನಿ ಮತ್ತು ಇಬ್ಬರು ಪುತ್ರರಾದ ಸೊರಭ್ ಮತ್ತು ಅಭಯ್ ಅವರನ್ನು ಅಗಲಿದ್ದಾರೆ. ಅಭಯ್ ಕೂಡಾ ಸಂತೂರ್ ವಾದಕರಾಗಿದ್ದಾರೆ. 1948ರಲ್ಲಿ ಕಾಶ್ಮೀರದ (Kashmir) ಸೊಪೊರಿ ಕಣಿವೆ ಊರಲ್ಲಿ ಜನಿಸಿದ ಇವರು ಭಾರತೀಯ ಶಾಸ್ತ್ರೀಯ ಸಂಗೀತದ ಸೂಫಿಯಾನ ಘರಾಣೆಗೆ ಸೇರಿದ್ದಾರೆ. 1953ರಲ್ಲಿ 5ವರ್ಷದವರಾಗಿದ್ದಾಗ ಸೊಪೊರಿ ಮೊದಲ ಪ್ರದರ್ಶನ ನೀಡಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಅವರು ಈಜಿಪ್ಟ್,ಇಂಗ್ಲೆಂಡ್ ಜರ್ಮನಿ ಮತ್ತು ಅಮೆರಿಕದಲ್ಲಿಯೂ ಅವರು ಪ್ರದರ್ಶನ ನೀಡಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಅವರಿಗೆ ಕರುಳಿನ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಇಮ್ಯುನೊಥೆರಪಿ ಚಿಕಿತ್ಸೆಗಾಗಿ ರು ವಾರಗಳ ಹಿಂದೆ ಗುರುಗ್ರಾಮ್‌ನ ಫೋರ್ಟಿಸ್‌ಗೆ ಅವರನ್ನು ದಾಖಲಿಸಿದ್ದೆವು. ಚಿಕಿತ್ಸೆಗೆ ಅವರ ದೇಹ ಸ್ಪಂದಿಸಲಿಲ್ಲ ಅವರ ಆರೋಗ್ಯ ಹದಗೆಟ್ಟಿತು, ”ಎಂದು ಅವರ ಮಗ ಅಭಯ್ ಪಿಟಿಐಗೆ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿನ ಲೋಧಿ ರಸ್ತೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಪೊರಿ ನಿಧನ ವಾರ್ತೆಗೆ ಪ್ರತಿಕ್ರಿಯಿಸಿದ ಜಮ್ಮ ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪದ್ಮಶ್ರೀ ಭಜನ್ ಸೊಪೊರಿ ಸಾಹಿಬ್ ಅವರ ನಿಧನ ಸುದ್ದಿ ಕೇಳಿ ಆಘಾತವಾಗಿದೆ. ಅವರು ಮಣ್ಣಿನ ಮಗ. , ಸಂತೂರ್ ವಾದನದೊಂದಿಗೆ ಅವ ರುಭಾರತೀಯ ಶಾಸ್ತ್ರೀಯ ಸಂಗೀತದ ಜಗತ್ತಿನಲ್ಲಿ ಪ್ರಖ್ಯಾತರಾಗಿದ್ದರು, ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:50 pm, Thu, 2 June 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್